Homeಅಂತರಾಷ್ಟ್ರೀಯ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

- Advertisement -
- Advertisement -

ಪಾಕಿಸ್ತಾನದ ವಿರೋಧ ಪಕ್ಷದ ನಾಯಕಿ ಮರ್ಯಮ್ ನವಾಜ್ ಷರೀಫ್ ಅವರು ಭಾರತವನ್ನು ಹೊಗಳಿದ್ದಕ್ಕಾಗಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಗೆ ಭಾರತ ಎಂದರೆ ತುಂಬಾ ಇಷ್ಟವಿದ್ದರೆ ಅವರು ಭಾರತಕ್ಕೆ ತೊಲಗಲಿ ಎಂದು ಹೇಳಿದ್ದಾರೆ.

ಇಮ್ರಾನ್‌ ಖಾನ್ ಭಾರತವನ್ನು ‘ಗೌರವ ಪ್ರಜ್ಞೆ ಹೊಂದಿರುವ ರಾಷ್ಟ್ರ’ ಎಂದು ಕರೆದ ನಂತರ ಮರ್ಯಮ್ ಅವರು ಪ್ರಧಾನಿಯನ್ನು ಟೀಕಿಸಿದ್ದಾರೆ. ಮರ್ಯಮ್ ಅವರು ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿಯಾಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಉಪಾಧ್ಯಕ್ಷೆಯೂ ಆಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವಿಶ್ವಾಸ ನಿರ್ಣಯದ ಮುನ್ನ ಶುಕ್ರವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್‌, ತಾನು ಭಾರತದ ವಿರುದ್ಧ ಇಲ್ಲ ಮತ್ತು ಭಾರತದಲ್ಲಿ ತನಗೆ ಸಾಕಷ್ಟು ಅನುಯಾಯಿಗಳು ಇದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ: ಪತನದ ಹಾದಿಯಲ್ಲಿರುವ ಇಮ್ರಾನ್‌ ಖಾನ್ ಸರ್ಕಾರ 

“ಯಾವುದೇ ಮಹಾಶಕ್ತಿ ಭಾರತವನ್ನು ತನ್ನ ಹಿತಾಸಕ್ತಿಗೆ ವಿರುದ್ಧವಾಗಿ ಏನು ಮಾಡಲು ಒತ್ತಾಯಿಸುವುದಿಲ್ಲ. ಭಾರತ ನಿರ್ಬಂಧಗಳ ಹೊರತಾಗಿಯೂ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ. ಯಾರೂ ಭಾರತವನ್ನು ನಿರ್ದೇಶಿಸಲು ಸಾಧ್ಯವಿಲ್ಲ. ಯುರೋಪಿಯನ್ ಒಕ್ಕೂಟದ ರಾಯಭಾರಿಗಳು ಇಲ್ಲಿ ಹೇಳಿರುವುದನ್ನು, ಭಾರತದಲ್ಲಿ ಹೇಳಲು ಸಾಧ್ಯವೆ?” ಎಂದು ಅವರು ಕೇಳಿದ್ದಾರೆ. ಭಾರತವು ಸಾರ್ವಭೌಮ ರಾಷ್ಟ್ರವಾಗಿರುವುದರಿಂದ ಅವರಿಗೆ ಅದು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮರ್ಯಮ್, ಇಮ್ರಾನ್‌ ಖಾನ್‌ಗೆ ಹುಚ್ಚು ಹಿಡಿದಿದೆ ಎಂದು ಹೇಳಿದ್ದಾರೆ. “ನಿಮಗೆ ಭಾರತದ ಮೇಲೆ ತುಂಬಾ ಪ್ರೀತಿಯಿದ್ದರೆ, ಅಲ್ಲಿಗೆ ತೆರಳಿ. ಪಾಕಿಸ್ತಾನದ ಜೀವನವನ್ನು ಬಿಟ್ಟುಬಿಡಿ” ಎಂದು ಮರ್ಯಮ್‌ ಹೇಳಿದ್ದಾರೆ.

ಪ್ರಧಾನಿ ಇಮ್ರಾನ್‌ ಅವರು ಭಾರತವನ್ನು ಹೊಗಳಿದ್ದು ಇದೇ ಮೊದಲಲ್ಲ. ಕಳೆದ ವಾರ ಅವರು ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಗಳಿದ್ದರು. “ಭಾರತ ತನ್ನ ಸ್ವತಂತ್ರ ವಿದೇಶಾಂಗ ನೀತಿಯನ್ನು ರಕ್ಷಿಸುತ್ತದೆ ಮತ್ತು ಅದು ಅದರ ಜನರ ಮೇಲೆ ಕೇಂದ್ರೀಕೃತವಾಗಿದೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಹಾರಿ ಬಿದ್ದ ಭಾರತದ ಕ್ಷಿಪಣಿ: ವಿಷಾಧ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ

342 ಸಂಸದರಿರುವ ಪಾಕಿಸ್ತಾನ್‌ ಸಂಸತ್ತಿನಲ್ಲಿ ಇಮ್ರಾನ್‌ ಖಾನ್‌ ತನ್ನ ಬಹುಮತವನ್ನು ಕಳೆದುಕೊಂಡಿದ್ದಾರೆ. ಅವರು ದೇಶದ ಇತಿಹಾಸದಲ್ಲಿ ಅವಿಶ್ವಾಸ ನಿರ್ಣಯದಲ್ಲಿ ಮತ ಚಲಾಯಿಸಲ್ಪಡುವ ಮೊದಲ ಪ್ರಧಾನಿಯಾಗುವ ಸಾಧ್ಯತೆಯನ್ನು ಎದುರಿಸುತ್ತಿದ್ದಾರೆ.

ಪಾಕಿಸ್ತಾನದ ಯಾವೊಬ್ಬ ಪ್ರಧಾನಿಯೂ ಇದುವರೆಗೆ ಪೂರ್ಣ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿಲ್ಲ.

ಈ ಮಧ್ಯೆ, ಪ್ರಧಾನಿ ಇಮ್ರಾನ್‌ ಖಾನ್ ಅವರನ್ನು ಪದಚ್ಯುತಗೊಳಿಸಿದ ನಂತರ ಪ್ರತಿಪಕ್ಷಗಳು ಹೊಸ ಸರ್ಕಾರ ರಚನೆಯ ಆರಂಭಿಕ ಮಾತುಕತೆಗಳನ್ನು ಪೂರ್ಣಗೊಳಿಸಿವೆ. ಅಧ್ಯಕ್ಷ ಅಲ್ವಿ ಪದಚ್ಯುತಿಗೆ ಮತ್ತು ಬ್ರಿಟನ್‌ನಿಂದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಾಪಸಾತಿಗೆ ಯೋಜನೆಗಳು ನಡೆಯುತ್ತಿವೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ಶುಕ್ರವಾರ ವರದಿ ಮಾಡಿದೆ.

ನೂತನ ಪ್ರಧಾನಿಯಾಗಿ ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ 70ರ ಹರೆಯದ ಶೆಹಬಾಜ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ಸಂಭಾವ್ಯ ಸರ್ಕಾರದ ಆದ್ಯತೆಗಳನ್ನು ಪ್ರಕಟಿಸಲಿದ್ದಾರೆ. ಹೊಸ ಸಂಭವನೀಯ ಒಕ್ಕೂಟ ಸರ್ಕಾರದಲ್ಲಿ ಎಲ್ಲಾ ವಿರೋಧ ಪಕ್ಷಗಳಿಗೆ ಪ್ರಮಾಣಾನುಗುಣ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...