Homeಮುಖಪುಟದೇಶದಲ್ಲಿ ಏನಾಗುತ್ತಿದೆ ಎಂದು ತಿಳಿಯಲು ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ: ಮೋದಿಗೆ ಖೇರಾ...

ದೇಶದಲ್ಲಿ ಏನಾಗುತ್ತಿದೆ ಎಂದು ತಿಳಿಯಲು ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ: ಮೋದಿಗೆ ಖೇರಾ ಸಲಹೆ

- Advertisement -
- Advertisement -

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಸೋಮವಾರ ದೇಶಕ್ಕೆ ಆಗಮಿಸುತ್ತಿದ್ದಂತೆ ಪ್ರಧಾನಿ ಮೋದಿಯವರ ‘ದೇಶ್ ಮೇ ಕ್ಯಾ ಚಲ್ ರಹಾ ಹೈ’ ಪ್ರಶ್ನೆ ಮಾಡಿದ್ದರು. ಮೋದಿ ಅವರ ಈ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಉತ್ತರಿಸುವ ವೀಡಿಯೊವನ್ನು ಮಂಗಳವಾರ ಬಿಡುಗಡೆ ಮಾಡಿದ್ದಾರೆ. ”ಭಾರತದಲ್ಲಿ ಏನಾಗುತ್ತಿದೆ ಎಂದು ತಿಳಿಯಬೇಕಾದರೆ ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ” ಎಂದು ಪವನ್ ಖೇರಾ ವಿಡಿಯೋದಲ್ಲಿ ಹೇಳಿದ್ದಾರೆ.

”ಮಣಿಪುರ ಹೊತ್ತಿ ಉರಿಯುತ್ತಿದೆ. ಬಾಲಸೋರ್ ಟ್ರೈನ್ ಅಪಘಾತದ ಹೊಣೆಯನ್ನು ಮುಸ್ಲಿಂ ಸಮುದಾಯದ ಮೇಲೆ ಹೊರಿಸಲು ನಿಮ್ಮ ಐಟಿ ಸೆಲ್ ಪ್ರಯತ್ನಿಸುತ್ತಿದೆ… ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರು ನಿಮಗೆ ಪ್ರಶ್ನೆ ಕೇಳಿದ ನಂತರ ಅವರನ್ನು ಟ್ರೋಲ್ ಮಾಡಿದವರನ್ನು ಶ್ವೇತಭವನ ಖಂಡಿಸಿದೆ” ಎಂದು ಪವನ್ ಖೇರಾ ಹೇಳಿದ್ದಾರೆ.

ಸೋಮವಾರ, ಪ್ರಧಾನಿ ಮೋದಿ ತಮ್ಮ ಆರು ದಿನಗಳ ಯುಎಸ್ ಮತ್ತು ಈಜಿಪ್ಟ್ ಪ್ರವಾಸವನ್ನು ಮುಗಿಸಿ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಮತ್ತು ಇತರ ಬಿಜೆಪಿ ನಾಯಕರು ಬರಮಾಡಿಕೊಂಡರು. ಈ ವೇಳೆ ಭಾರತದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಮೋದಿ ನಡ್ಡಾ ಅವರನ್ನು ವಿಚಾರಿಸಿದರು ಎಂದು ವರದಿಯಾಗಿದೆ.

ಮೋದಿ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ”ತಮ್ಮ ಒಂಬತ್ತು ವರ್ಷಗಳ ಆಡಳಿತ ಅವಧಿಯ ರಿಪೋರ್ಟ್ ಕಾರ್ಡ್ಅನ್ನು ಪಕ್ಷದ ನಾಯಕರು ಜನರಿಗೆ ತಲುಪಿಸುತ್ತಿದ್ದಾರೆ ಮತ್ತು ದೇಶದ ಜನರು ಸಂತೋಷವಾಗಿದ್ದಾರೆ” ಎಂದು ಹೇಳಿರುವುದಾಗಿ ಬಿಜೆಪಿ ಸಂಸದ ಮನೋಜ್ ತಿವಾರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ಮೋದಿಗೆ ಪ್ರಶ್ನೆ ಮಾಡಿದ ಪತ್ರಕರ್ತೆಗೆ ಹಿಂದುತ್ವದವಾದಿಗಳಿಂದ ನಿಂದನೆ

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ತಾರತಮ್ಯದ ಕುರಿತು ವಾಲ್ ಸ್ಟ್ರೀಟ್ ಜರ್ನಲ್‌ನ ಶ್ವೇತಭವನದ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಪ್ರಶ್ನೆಯನ್ನು ಕೇಳಿದ್ದರು. ಆ ಬಳಿಕ ಅವರ ಮೇಲೆ ಹಿಂದುತ್ವದವಾದಿಗಳು, ಬಿಜೆಪಿ ಸದಸ್ಯರು ಟ್ವಿಟರ್‌ನಲ್ಲಿ ದಾಳಿ ನಡೆಸಿದರು. ಇದನ್ನು ಅಮೆರಿಕ ಶ್ವೇತಭವನ ಖಂಡಿಸಿದೆ.

ಸಬ್ರಿನಾ ಸಿದ್ದಿಕಿ ಮೋದಿಯವರನ್ನು ಕೇಳಿದ ಪ್ರಶ್ನೆ:

”ಭಾರತವು ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ದೀರ್ಘಕಾಲ ಹೆಮ್ಮೆಪಡುತ್ತಿದೆ, ಆದರೆ ನಿಮ್ಮ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡಿದೆ ಮತ್ತು ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅನೇಕ ಮಾನವ ಹಕ್ಕುಗಳ ಗುಂಪುಗಳು ಹೇಳಿವೆ. ನಿಮ್ಮ ದೇಶದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಸುಧಾರಿಸಲು ಮತ್ತು ಎತ್ತಿಹಿಡಿಯಲು ನೀವು ಮತ್ತು ನಿಮ್ಮ ಸರ್ಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದರು.

ಭಾರತದಲ್ಲಿ ಮೋದಿಯವರು ಪ್ರಧಾನಿಯಾದ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಆರೋಪ ಮಾಡಿದರು.

ಪತ್ರಕರ್ತೆ ಮೋದಿಗೆ ಪ್ರಶ್ನೆ ಕೇಳಿದ ಕೆಲವೇ ಗಂಟೆಗಳಲ್ಲಿ ಹಿಂದುತ್ವಾದಿಗಳು ಹಾಗೂ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ನೇತೃತ್ವದಲ್ಲಿ ಪತ್ರಕರ್ತೆ ಸಿದ್ದಿಕಿ ಅವರ ಮೇಲೆ ಆನ್‌ಲೈನ್ ದಾಳಿ ನಡೆಯಿತು. ”ಸಬ್ರಿನಾ ಸಿದ್ದಿಕಿ ಮುಸ್ಲಿಂ ಸಮುದಾಯದವಳಾಗಿದ್ದು, ಪಾಕಿಸ್ತಾನದೊಂದಿಗಿನ ಸಂಪರ್ಕವನ್ನು ಹೊಂದಿದ್ದಾಳೆ. ಅವರು ಟೂಲ್‌ಕಿಟ್ ಗ್ಯಾಂಗ್‌ನ ಭಾಗವಾಗಿದ್ದಾರೆ” ಎಂದು ಮಾಳವಿಯ ಟ್ವೀಟ್ ಮಾಡಿದರು.

ಇನ್ನೂ ಕೆಲವು ಹಿಂದುತ್ವವಾದಿಗಳು ಸಿದ್ದಿಕಿ ಅವರನ್ನು ‘ಪಾಕಿಸ್ತಾನಿ ಇಸ್ಲಾಮಿಸ್ಟ್’ ಎಂದು ಲೇಬಲ್ ಮಾಡಿದರು. ಈ ಪ್ರಶ್ನೆಯನ್ನು ಮೋದಿಯ ಮುಂದೆ ಕೇಳಲು ಆಕೆಗೆ ಉದ್ಯೋಗದಾತ ಅವಕಾಶ ನೀಡುವ ಪಿತೂರಿ ಎಂದಿದ್ದಾರೆ. ”ಅವಳು ಭಾರತದ ಮೇಲೆ ಮಾತ್ರ ದಾಳಿ ಮಾಡುತ್ತಾಳೆ. ದ್ವೇಷವು ಪಾಕಿಸ್ತಾನಿಗಳ ಡಿಎನ್‌ಎಯಲ್ಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

”ಭಾರತದಲ್ಲಿ ಮುಸ್ಲಿಮರ ಮೇಲಿನ ಕಿರುಕುಳವನ್ನು ಆರೋಪಿಸಿದ ಪತ್ರಕರ್ತೆ ಸಬ್ರಿನಾ ಸಿದ್ದಿಕ್ ಬೇರೆ ಯಾರೂ ಅಲ್ಲ … ಪಾಕಿಸ್ತಾನಿ ಪೋಷಕರ ಮಗಳು” ಎಂದು ಟ್ವೀಟ್ ಮಾಡಿದ್ದಾರೆ.

ತನ್ನನ್ನು ‘ಭಾರತ ವಿರೋಧಿ’ ಎಂದು ಕರೆಯುವ ಆನ್‌ಲೈನ್ ದಾಳಿಗೆ ಸಿದ್ದಿಕಿ ಪ್ರತ್ಯತ್ತರವಾಗಿ ಟ್ವೀಟ್ ಮಾಡಿದ್ದಾರೆ. ತನ್ನ ತಂದೆಯೊಂದಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಬೆಂಬಲಿಸುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ”ಕೆಲವರು ನನ್ನ ವೈಯಕ್ತಿಕ ಹಿನ್ನೆಲೆಯನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಹಾಗಾಗಿ ಸಂಪೂರ್ಣ ಚಿತ್ರವನ್ನು ಒದಗಿಸುವುದು ಸರಿ ಎನಿಸುತ್ತದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದರು.

ಇದಾದ ಬಳಿಕ ಅಮೆರಿಕ ಶ್ವೇತಭವನವು ಪತ್ರಕರ್ತೆಯ ಬೆಂಬಲಕ್ಕೆ ನಿಂತು, ”ಇದು ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಯಾವುದೇ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು … ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ …” ಎಂದು ಹೇಳುವ ಮೂಲಕ ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಯನ್ನು ಖಂಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...