Homeಕರ್ನಾಟಕಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ಆಧುನಿಕತೆ ಮತ್ತು ಮುನ್ನೋಟಕ್ಕೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಇಲ್ಲೊಂದು ಬೇಸಿಗೆ ಅರಮನೆ ಕಟ್ಟಿಸಿದ್ದಾರೆ. ಮೂರನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಸೋಲನ್ನಪ್ಪಿದ ಬಳಿಕ ಇದು ಬ್ರಿಟಿಷರ ಕೈವಶವಾಯಿತು.

- Advertisement -
- Advertisement -

ಆಕಾಶದಲ್ಲಿ ಮೋಡಗಳು ಸ್ವಚ್ಛಂದವಾಗಿ ತೇಲಾಡುವಾಗ ಅದರ ಮೇಲೊಮ್ಮೆ ಕೂರಬೇಕೆಂದು ಯಾರಿಗೆ ತಾನೇ ಅನಿಸುವುದಿಲ್ಲ. ಅಂತ ಬಯಕೆ ನಿಮಗೇನಾದರೂ ಬಂದಿದ್ದಲ್ಲಿ ಅದನ್ನು ನನಸಾಗಿಸುವ ಅವಕಾಶ ಈ ತಿಂಗಳಲ್ಲಿ ಲಭ್ಯವಿದೆ. ಅದಕ್ಕೆ ನೀವು ಮಾಡಬೇಕಾದದ್ದು ಇಷ್ಟೇ.. ಬೆಂಗಳೂರಿನಿಂದ ಹೊರಡುವುದಿದ್ದರೆ ಅರ್ಧದಿನ ಸಮಯ ಹೊಂದಿಸಿಕೊಳ್ಳುವುದು.

ಈ ಚಳಿಗಾಲದಲ್ಲಿ ಬೆಳ್ಳಂಬೆಳಿಗ್ಗೆಯೇ ಬೈಕ್ ಅಥವಾ ಕಾರ್ ಹತ್ತಿ ಹೊರಟರೆ ನಂದಿಬೆಟ್ಟಕ್ಕೆ ಕೇವಲ ಒಂದೂವರೆ ಗಂಟೆಗಳ (63 ಕಿ.ಮೀ) ಪ್ರಯಾಣ. ನಾನು ಸೆಪ್ಟಂಬರ್ 8 ರಂದು ನನ್ನ ಬೈಕ್ ಹತ್ತಿ ಹೊರಟೆ. ಯಲಹಂಕ ಮೇಲಿಂದ ಪ್ರಯಾಣ ಬೆಳೆಸಿ ದೇವನಹಳ್ಳಿ ದಾಟಿದೊಡನೆ ಎಡಕ್ಕೆ ತಿರುಗಿದರೆ ನಿಮಗೆ ನಂದಿ ಬೆಟ್ಟ ಕಾಣಸಿಗುತ್ತದೆ. ರಸ್ತೆಯ ಎರಡೂ ಬದಿಗೂ ಹಸಿರು ಮರಗಳು ನಿಮ್ಮನ್ನು ಸ್ವಾಗತಿಸುತ್ತವೆ. ಹೋಗುವ ರಸ್ತೆಯೇ ಚೆಂದ.

ಈ ಮೊದಲು ಬೆಳಿಗ್ಗೆ 5-6 ಗಂಟೆಗೇ ನಂದಿಬೆಟ್ಟಕ್ಕೆ ಪ್ರವೇಶವಿರುತ್ತಿತ್ತು. ಸುತ್ತಲು ಕಾವಳ ಮುತ್ತಿ 15-20 ಅಡಿ ದೂರದವರೆಗೆ ಮಾತ್ರ ಕಾಣುವಂತೆ ಮಂಜು ಆವರಿಸುತ್ತಿತ್ತು. ಆನಂತರ ನೀವು ಬೆಟ್ಟದ ತುದಿಯಲ್ಲಿ ಕುಳಿತು ಸೂರ್ಯೋದಯವನ್ನು ಕಣ್ತುಂಬಿಕೊಳ್ಳಬಹುದಿತ್ತು. ಇನ್ನು ದಿನವಿಡೀ ಆ ದಟ್ಟ ಕಾನನದಲ್ಲಿ ಸುತ್ತಾಡಿ, ವಿರಮಿಸಿ, ಹೊಟ್ಟೆ ತುಂಬ ಊಟ ಮಾಡಿ ಸಂಜೆಗೆ ಸೂರ್ಯಾಸ್ತವನ್ನು ನೋಡಿ ವಾಪಸ್ ಬರಬಹುದಿತ್ತು. ಇವೆಲ್ಲವೂ ಅದ್ಭುತ ಅನುಭವ. ಆದರೆ ಈಗ ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಆ ಅನುಭವಕ್ಕೆ ಅಡ್ಡಿಯಾಗಿದೆ. ಈಗ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ನಂದಿ ಬೆಟ್ಟಕ್ಕೆ ಪ್ರವೇಶಾವಕಾಶವಿದೆ.

ಆದರೂ ನೀವು ಮೇಘಗಳ ಜೊತೆಗೆ ನಿಂತು ಅವುಗಳ ಹಿಂಡನ್ನು ನೋಡಲು ಈಗಲೂ ಸಾಧ್ಯವಿದೆ. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ನೀವು ನಂದಿ ಬೆಟ್ಟದ ಮೇಲಿದ್ದರೆ ನಿಮ್ಮ ಕೆಳಗೆ ಮೋಡಗಳ ಹಿಂಡು ಚಲಿಸುವುದು ಗೋಚರಿಸುತ್ತದೆ. ಆ ಮೋಡಗಳ ಸಾಲು ಬಂದು ಬೆಟ್ಟಕ್ಕೆ ಢಿಕ್ಕಿ ಹೊಡೆದು ಮಾಯವಾಗುತ್ತವೆ. ಸಾಮಾನ್ಯವಾಗಿ ಎತ್ತರದ ಎಲ್ಲಾ ಗಿರಿ ಶಿಖರಗಳಲ್ಲಿಯೂ, ಚಳಿಗಾಲದಲ್ಲಿ ಈ ದೃಶ್ಯ ಸಾಮಾನ್ಯ. ಆದರೆ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಥರದ ಬಹಳ ಎತ್ತರದ ಬೆಟ್ಟಗಳಲ್ಲಿ ನಮ್ಮ ಸುತ್ತಲೂ ಮಂಜು ತುಂಬಿ ಏನನ್ನೂ ನೋಡಲು ಸಾಧ್ಯವಾಗುವುದಿಲ್ಲ.

ಇದನ್ನೂ ನೋಡಿ: Exploring Nandi Hills ಮೊಗೆದಷ್ಟು ನೀರು ನಂದಿ ಬೆಟ್ಟ.. ನಂದಿ ಬೆಟ್ಟಕ್ಕೆ ಬೈಕ್ ರೈಡಿಂಗ್

 

ಚಿಕ್ಕಬಳ್ಳಾಪುರ ಜಿಲ್ಲಾವ್ಯಾಪ್ತಿಗೆ ಬರುವ, ಚಿಕ್ಕಬಳ್ಳಾಪುರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ನಂದಿ ಬೆಟ್ಟದಲ್ಲಿ ನೀವು ಎಷ್ಟು ಹೊತ್ತು ಇದ್ದರೂ ಬೇಸರಿಸದೆ ನೋಡಬಹುದಾದ ಸ್ಥಳಗಳಿವೆ. ನಂದಿ ಬೆಟ್ಟ ಸಮುದ್ರ ಮಟ್ಟದಿಂದ 5841 ಅಡಿ ಎತ್ತರದಲ್ಲಿರುವ ಗಿರಿ ಶಿಖರ. ಚೋಳರ ಕಾಲದಲ್ಲಿ ಇಲ್ಲಿ ಕೋಟೆಗಳನ್ನು, ದೇವಾಲಯಗಳನ್ನು ಕಟ್ಟಲಾಯಿತು. ನಂತರ ಟಿಪ್ಪು ಸುಲ್ತಾನನ ಕಾಲದಲ್ಲಿ ಅವನ್ನು ಮತ್ತಷ್ಟು ಭದ್ರಪಡಿಸಲಾಯಿತು ಎಂದು ಇತಿಹಾಸ ಹೇಳುತ್ತದೆ.

ಆಧುನಿಕತೆ ಮತ್ತು ಮುನ್ನೋಟಕ್ಕೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಇಲ್ಲೊಂದು ಬೇಸಿಗೆ ಅರಮನೆ ಕಟ್ಟಿಸಿದ್ದಾರೆ. 1791ರಲ್ಲಿ ಟಿಪ್ಪು ಮತ್ತು ಬ್ರಿಟಿಷರ ನಡುವೆ ನಡೆದ ಮೂರನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಸೋಲನ್ನಪ್ಪಿದ ಬಳಿಕ ಇದು ಬ್ರಿಟಿಷರ ಕೈವಶವಾಯಿತು. ನಂತರ ಹಲವು ಬ್ರಿಟಿಷ್ ಅಧಿಕಾರಿಗಳು ಇಲ್ಲಿ ತಂಗುತ್ತಿದ್ದರು ಎನ್ನಲಾಗಿದೆ. ಆದರೆ ಇಂದು ಟಿಪ್ಪುವಿನ ಆ ಬೇಸಿಗೆ ಅರಮನೆ ಸರಿಯಾದ ಮೇಲ್ವೀಚಾರಣೆ ಮತ್ತು ನಿರ್ವಹಣೆ ಇಲ್ಲದ ಕಾರಣ ಅನಾಥವಾಗಿ ಬಿದ್ದಿದೆ. ಐತಿಹಾಸಿಕ ಮಹತ್ವ ಹೊಂದಿದ್ದ ಈ ಪಾರಂಪರಿಕ ತಾಣ ಪಾಳುಬಿದ್ದ ಮನೆಯ ರೀತಿ ಕಾಣುತ್ತಿದೆ. ಇನ್ನು ಟಿಪ್ಪು ಸುಲ್ತಾನ್ ಕಾಲದಲ್ಲಿ ಅಪರಾಧಿಗಳನ್ನು ಶಿಕ್ಷಿಸುವುದಕ್ಕಾಗಿ ಬಳಸುತ್ತಿದ್ದ ಟಿಪ್ಪು ಡ್ರಾಪ್ ಎಂಬ ದುರ್ಗಮ ಸ್ಥಳ ಇಂದು ಪ್ರವಾಸಿಸ್ಥಳವಾಗಿ ಬದಲಾವಣೆಯಾಗಿದೆ. ಇಲ್ಲಿಂದ ಕಡಿದಾದ ಆಳವನ್ನು ನೋಡಬಹುದು. ಬಂಡೆ ಮೇಲೆ ಕುಳಿತು ಮೋಡಗಳ ಹಿಂಡನ್ನು, ಅದರ ನೆರಳನ್ನು ಕಾಣಬಹುದು. ಸಂಜೆಯಾಗುತ್ತಿದ್ದಂತೆ ಸೂರ್ಯಾಸ್ತವನ್ನು ನೋಡಲು ಪ್ರಶಸ್ತವಾದ ಜಾಗ ಇದು.

ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ಬೇಸಿಗೆ ಅರಮನೆ

ಯೋಗ ನಂದೀಶ್ವರ ಸ್ವಾಮಿ ದೇವಾಲಯ, ಗವಿ ವೀರಭದ್ರಸ್ವಾಮಿ ದೇವಾಲಯ, ನೆಲ್ಲಿಕಾಯಿ ಬಸವಣ್ಣ ದೇವಾಲಯ ಸೇರಿ ಹಲವು ದೇವಾಲಯಗಳು ಬೆಟ್ಟದಲ್ಲಿವೆ. ನಂದಿ ಬೆಟ್ಟದಲ್ಲಿನ ಇತರ ಆಕರ್ಷಣೆಯೆಂದರೆ ಬೆಟ್ಟದ ಮೇಲಿಂದ ಸುತ್ತಲಿನ ವಿಹಂಗಮ ನೋಟ. ನೋಡಲು ಹಲವು ವ್ಯೂ ಪಾಯಿಂಟ್‌ಗಳು ಇಲ್ಲಿವೆ. ತೋಟಗಾರಿಕೆ ಇಲಾಖೆಯ ಕೈತೋಟಗಳು, ದೊಡ್ಡ ದೊಡ್ಡ ಮರಗಳು ಇಲ್ಲಿವೆ. ಇಲ್ಲಿ ಹುಟ್ಟುವ ಪಾಲರ್ ಮತ್ತು ಅರ್ಕಾವತಿ ನದಿಮೂಲಗಳ ವೀಕ್ಷಣೆ ಮುದನೀಡುತ್ತವೆ.

ದೂರದ ಊರಿಂದ ಬರುವವರು ರಾತ್ರಿಯೇ ಬಂದು ಇಲ್ಲಿ ಉಳಿದು ಬೆಳಿಗ್ಗೆ ಬೆಟ್ಟಕ್ಕೆ ಬರಬಹುದು. ಬೆಟ್ಟದ ತಪ್ಪಲಿನಲ್ಲಿ ಪ್ರವಾಸಿಮಂದಿರ ಮತ್ತು ಹೋಟೆಲ್‌ಗಳಿವೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವೆಜ್ ಮತ್ತು ನಾನ್‌ವೆಜ್ ಹೋಟೆಲ್ ಒಂದನ್ನು ತೆರೆದಿದೆ. ಇದು ಪ್ಲಾಸ್ಟಿಕ್ ನಿಷೇಧ ವಲಯವಾಗಿದ್ದು ಹೊರಗಿನಿಂದ ನೀರು, ತಿಂಡಿ ತರಲು ಅವಕಾಶವಿಲ್ಲ. ನಂದಿ ಬೆಟ್ಟದಲ್ಲಿಯೇ ತಿಂಡಿ ತಿನಿಸುಗಳು ಲಭ್ಯವಿದ್ದು ಕೋತಿಗಳ ಸಂಖ್ಯೆ ಹೆಚ್ಚಿರುವುದರಿಂದ ನೀವು ತಿಂದು ಅವುಗಳಿಗೂ ಕೊಡಬಹುದು. ಕೋತಿಗಳ ಸಂಗಡ ಸಣ್ಣ ಮಕ್ಕಳಿಗೆ ಹಬ್ಬವಾಗುವುದಂತೂ ನಿಜ.

ನಂದಿಬೆಟ್ಟದ ಪಕ್ಕದಲ್ಲಿಯೇ ಸ್ಕಂದಗಿರಿ ಮತ್ತು ಚನ್ನಗಿರಿ ಎಂಬ ಇನ್ನೆರಡು ಸುಂದರ ಬೆಟ್ಟಗಳಿವೆ. ಚಿಕ್ಕಬಳ್ಳಾಪುರಕ್ಕೆ ಹೋಗುವ ದಾರಿಯಲ್ಲಿ ಭೋಗ ನಂದೀಶ್ವರ ದೇವಾಲಯವಿದೆ. ಒಟ್ಟಿನಲ್ಲಿ ಅರ್ಧದಿನ ಅಥವಾ ದಿನವಿಡೀ ಕಳೆಯಲು ಇದು ಪ್ರಶಸ್ತ ಸ್ಥಳವಾಗಿದೆ.


ಇದನ್ನೂ ಓದಿ: ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...