Homeಕರ್ನಾಟಕಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ಆಧುನಿಕತೆ ಮತ್ತು ಮುನ್ನೋಟಕ್ಕೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಇಲ್ಲೊಂದು ಬೇಸಿಗೆ ಅರಮನೆ ಕಟ್ಟಿಸಿದ್ದಾರೆ. ಮೂರನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಸೋಲನ್ನಪ್ಪಿದ ಬಳಿಕ ಇದು ಬ್ರಿಟಿಷರ ಕೈವಶವಾಯಿತು.

- Advertisement -
- Advertisement -

ಆಕಾಶದಲ್ಲಿ ಮೋಡಗಳು ಸ್ವಚ್ಛಂದವಾಗಿ ತೇಲಾಡುವಾಗ ಅದರ ಮೇಲೊಮ್ಮೆ ಕೂರಬೇಕೆಂದು ಯಾರಿಗೆ ತಾನೇ ಅನಿಸುವುದಿಲ್ಲ. ಅಂತ ಬಯಕೆ ನಿಮಗೇನಾದರೂ ಬಂದಿದ್ದಲ್ಲಿ ಅದನ್ನು ನನಸಾಗಿಸುವ ಅವಕಾಶ ಈ ತಿಂಗಳಲ್ಲಿ ಲಭ್ಯವಿದೆ. ಅದಕ್ಕೆ ನೀವು ಮಾಡಬೇಕಾದದ್ದು ಇಷ್ಟೇ.. ಬೆಂಗಳೂರಿನಿಂದ ಹೊರಡುವುದಿದ್ದರೆ ಅರ್ಧದಿನ ಸಮಯ ಹೊಂದಿಸಿಕೊಳ್ಳುವುದು.

ಈ ಚಳಿಗಾಲದಲ್ಲಿ ಬೆಳ್ಳಂಬೆಳಿಗ್ಗೆಯೇ ಬೈಕ್ ಅಥವಾ ಕಾರ್ ಹತ್ತಿ ಹೊರಟರೆ ನಂದಿಬೆಟ್ಟಕ್ಕೆ ಕೇವಲ ಒಂದೂವರೆ ಗಂಟೆಗಳ (63 ಕಿ.ಮೀ) ಪ್ರಯಾಣ. ನಾನು ಸೆಪ್ಟಂಬರ್ 8 ರಂದು ನನ್ನ ಬೈಕ್ ಹತ್ತಿ ಹೊರಟೆ. ಯಲಹಂಕ ಮೇಲಿಂದ ಪ್ರಯಾಣ ಬೆಳೆಸಿ ದೇವನಹಳ್ಳಿ ದಾಟಿದೊಡನೆ ಎಡಕ್ಕೆ ತಿರುಗಿದರೆ ನಿಮಗೆ ನಂದಿ ಬೆಟ್ಟ ಕಾಣಸಿಗುತ್ತದೆ. ರಸ್ತೆಯ ಎರಡೂ ಬದಿಗೂ ಹಸಿರು ಮರಗಳು ನಿಮ್ಮನ್ನು ಸ್ವಾಗತಿಸುತ್ತವೆ. ಹೋಗುವ ರಸ್ತೆಯೇ ಚೆಂದ.

ಈ ಮೊದಲು ಬೆಳಿಗ್ಗೆ 5-6 ಗಂಟೆಗೇ ನಂದಿಬೆಟ್ಟಕ್ಕೆ ಪ್ರವೇಶವಿರುತ್ತಿತ್ತು. ಸುತ್ತಲು ಕಾವಳ ಮುತ್ತಿ 15-20 ಅಡಿ ದೂರದವರೆಗೆ ಮಾತ್ರ ಕಾಣುವಂತೆ ಮಂಜು ಆವರಿಸುತ್ತಿತ್ತು. ಆನಂತರ ನೀವು ಬೆಟ್ಟದ ತುದಿಯಲ್ಲಿ ಕುಳಿತು ಸೂರ್ಯೋದಯವನ್ನು ಕಣ್ತುಂಬಿಕೊಳ್ಳಬಹುದಿತ್ತು. ಇನ್ನು ದಿನವಿಡೀ ಆ ದಟ್ಟ ಕಾನನದಲ್ಲಿ ಸುತ್ತಾಡಿ, ವಿರಮಿಸಿ, ಹೊಟ್ಟೆ ತುಂಬ ಊಟ ಮಾಡಿ ಸಂಜೆಗೆ ಸೂರ್ಯಾಸ್ತವನ್ನು ನೋಡಿ ವಾಪಸ್ ಬರಬಹುದಿತ್ತು. ಇವೆಲ್ಲವೂ ಅದ್ಭುತ ಅನುಭವ. ಆದರೆ ಈಗ ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಆ ಅನುಭವಕ್ಕೆ ಅಡ್ಡಿಯಾಗಿದೆ. ಈಗ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ನಂದಿ ಬೆಟ್ಟಕ್ಕೆ ಪ್ರವೇಶಾವಕಾಶವಿದೆ.

ಆದರೂ ನೀವು ಮೇಘಗಳ ಜೊತೆಗೆ ನಿಂತು ಅವುಗಳ ಹಿಂಡನ್ನು ನೋಡಲು ಈಗಲೂ ಸಾಧ್ಯವಿದೆ. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ನೀವು ನಂದಿ ಬೆಟ್ಟದ ಮೇಲಿದ್ದರೆ ನಿಮ್ಮ ಕೆಳಗೆ ಮೋಡಗಳ ಹಿಂಡು ಚಲಿಸುವುದು ಗೋಚರಿಸುತ್ತದೆ. ಆ ಮೋಡಗಳ ಸಾಲು ಬಂದು ಬೆಟ್ಟಕ್ಕೆ ಢಿಕ್ಕಿ ಹೊಡೆದು ಮಾಯವಾಗುತ್ತವೆ. ಸಾಮಾನ್ಯವಾಗಿ ಎತ್ತರದ ಎಲ್ಲಾ ಗಿರಿ ಶಿಖರಗಳಲ್ಲಿಯೂ, ಚಳಿಗಾಲದಲ್ಲಿ ಈ ದೃಶ್ಯ ಸಾಮಾನ್ಯ. ಆದರೆ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಥರದ ಬಹಳ ಎತ್ತರದ ಬೆಟ್ಟಗಳಲ್ಲಿ ನಮ್ಮ ಸುತ್ತಲೂ ಮಂಜು ತುಂಬಿ ಏನನ್ನೂ ನೋಡಲು ಸಾಧ್ಯವಾಗುವುದಿಲ್ಲ.

ಇದನ್ನೂ ನೋಡಿ: Exploring Nandi Hills ಮೊಗೆದಷ್ಟು ನೀರು ನಂದಿ ಬೆಟ್ಟ.. ನಂದಿ ಬೆಟ್ಟಕ್ಕೆ ಬೈಕ್ ರೈಡಿಂಗ್

 

ಚಿಕ್ಕಬಳ್ಳಾಪುರ ಜಿಲ್ಲಾವ್ಯಾಪ್ತಿಗೆ ಬರುವ, ಚಿಕ್ಕಬಳ್ಳಾಪುರದಿಂದ ಕೇವಲ 10 ಕಿ.ಮೀ ದೂರದಲ್ಲಿರುವ ನಂದಿ ಬೆಟ್ಟದಲ್ಲಿ ನೀವು ಎಷ್ಟು ಹೊತ್ತು ಇದ್ದರೂ ಬೇಸರಿಸದೆ ನೋಡಬಹುದಾದ ಸ್ಥಳಗಳಿವೆ. ನಂದಿ ಬೆಟ್ಟ ಸಮುದ್ರ ಮಟ್ಟದಿಂದ 5841 ಅಡಿ ಎತ್ತರದಲ್ಲಿರುವ ಗಿರಿ ಶಿಖರ. ಚೋಳರ ಕಾಲದಲ್ಲಿ ಇಲ್ಲಿ ಕೋಟೆಗಳನ್ನು, ದೇವಾಲಯಗಳನ್ನು ಕಟ್ಟಲಾಯಿತು. ನಂತರ ಟಿಪ್ಪು ಸುಲ್ತಾನನ ಕಾಲದಲ್ಲಿ ಅವನ್ನು ಮತ್ತಷ್ಟು ಭದ್ರಪಡಿಸಲಾಯಿತು ಎಂದು ಇತಿಹಾಸ ಹೇಳುತ್ತದೆ.

ಆಧುನಿಕತೆ ಮತ್ತು ಮುನ್ನೋಟಕ್ಕೆ ಹೆಸರಾಗಿದ್ದ ಟಿಪ್ಪು ಸುಲ್ತಾನ್ ಇಲ್ಲೊಂದು ಬೇಸಿಗೆ ಅರಮನೆ ಕಟ್ಟಿಸಿದ್ದಾರೆ. 1791ರಲ್ಲಿ ಟಿಪ್ಪು ಮತ್ತು ಬ್ರಿಟಿಷರ ನಡುವೆ ನಡೆದ ಮೂರನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಟಿಪ್ಪು ಸೋಲನ್ನಪ್ಪಿದ ಬಳಿಕ ಇದು ಬ್ರಿಟಿಷರ ಕೈವಶವಾಯಿತು. ನಂತರ ಹಲವು ಬ್ರಿಟಿಷ್ ಅಧಿಕಾರಿಗಳು ಇಲ್ಲಿ ತಂಗುತ್ತಿದ್ದರು ಎನ್ನಲಾಗಿದೆ. ಆದರೆ ಇಂದು ಟಿಪ್ಪುವಿನ ಆ ಬೇಸಿಗೆ ಅರಮನೆ ಸರಿಯಾದ ಮೇಲ್ವೀಚಾರಣೆ ಮತ್ತು ನಿರ್ವಹಣೆ ಇಲ್ಲದ ಕಾರಣ ಅನಾಥವಾಗಿ ಬಿದ್ದಿದೆ. ಐತಿಹಾಸಿಕ ಮಹತ್ವ ಹೊಂದಿದ್ದ ಈ ಪಾರಂಪರಿಕ ತಾಣ ಪಾಳುಬಿದ್ದ ಮನೆಯ ರೀತಿ ಕಾಣುತ್ತಿದೆ. ಇನ್ನು ಟಿಪ್ಪು ಸುಲ್ತಾನ್ ಕಾಲದಲ್ಲಿ ಅಪರಾಧಿಗಳನ್ನು ಶಿಕ್ಷಿಸುವುದಕ್ಕಾಗಿ ಬಳಸುತ್ತಿದ್ದ ಟಿಪ್ಪು ಡ್ರಾಪ್ ಎಂಬ ದುರ್ಗಮ ಸ್ಥಳ ಇಂದು ಪ್ರವಾಸಿಸ್ಥಳವಾಗಿ ಬದಲಾವಣೆಯಾಗಿದೆ. ಇಲ್ಲಿಂದ ಕಡಿದಾದ ಆಳವನ್ನು ನೋಡಬಹುದು. ಬಂಡೆ ಮೇಲೆ ಕುಳಿತು ಮೋಡಗಳ ಹಿಂಡನ್ನು, ಅದರ ನೆರಳನ್ನು ಕಾಣಬಹುದು. ಸಂಜೆಯಾಗುತ್ತಿದ್ದಂತೆ ಸೂರ್ಯಾಸ್ತವನ್ನು ನೋಡಲು ಪ್ರಶಸ್ತವಾದ ಜಾಗ ಇದು.

ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ಬೇಸಿಗೆ ಅರಮನೆ

ಯೋಗ ನಂದೀಶ್ವರ ಸ್ವಾಮಿ ದೇವಾಲಯ, ಗವಿ ವೀರಭದ್ರಸ್ವಾಮಿ ದೇವಾಲಯ, ನೆಲ್ಲಿಕಾಯಿ ಬಸವಣ್ಣ ದೇವಾಲಯ ಸೇರಿ ಹಲವು ದೇವಾಲಯಗಳು ಬೆಟ್ಟದಲ್ಲಿವೆ. ನಂದಿ ಬೆಟ್ಟದಲ್ಲಿನ ಇತರ ಆಕರ್ಷಣೆಯೆಂದರೆ ಬೆಟ್ಟದ ಮೇಲಿಂದ ಸುತ್ತಲಿನ ವಿಹಂಗಮ ನೋಟ. ನೋಡಲು ಹಲವು ವ್ಯೂ ಪಾಯಿಂಟ್‌ಗಳು ಇಲ್ಲಿವೆ. ತೋಟಗಾರಿಕೆ ಇಲಾಖೆಯ ಕೈತೋಟಗಳು, ದೊಡ್ಡ ದೊಡ್ಡ ಮರಗಳು ಇಲ್ಲಿವೆ. ಇಲ್ಲಿ ಹುಟ್ಟುವ ಪಾಲರ್ ಮತ್ತು ಅರ್ಕಾವತಿ ನದಿಮೂಲಗಳ ವೀಕ್ಷಣೆ ಮುದನೀಡುತ್ತವೆ.

ದೂರದ ಊರಿಂದ ಬರುವವರು ರಾತ್ರಿಯೇ ಬಂದು ಇಲ್ಲಿ ಉಳಿದು ಬೆಳಿಗ್ಗೆ ಬೆಟ್ಟಕ್ಕೆ ಬರಬಹುದು. ಬೆಟ್ಟದ ತಪ್ಪಲಿನಲ್ಲಿ ಪ್ರವಾಸಿಮಂದಿರ ಮತ್ತು ಹೋಟೆಲ್‌ಗಳಿವೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವೆಜ್ ಮತ್ತು ನಾನ್‌ವೆಜ್ ಹೋಟೆಲ್ ಒಂದನ್ನು ತೆರೆದಿದೆ. ಇದು ಪ್ಲಾಸ್ಟಿಕ್ ನಿಷೇಧ ವಲಯವಾಗಿದ್ದು ಹೊರಗಿನಿಂದ ನೀರು, ತಿಂಡಿ ತರಲು ಅವಕಾಶವಿಲ್ಲ. ನಂದಿ ಬೆಟ್ಟದಲ್ಲಿಯೇ ತಿಂಡಿ ತಿನಿಸುಗಳು ಲಭ್ಯವಿದ್ದು ಕೋತಿಗಳ ಸಂಖ್ಯೆ ಹೆಚ್ಚಿರುವುದರಿಂದ ನೀವು ತಿಂದು ಅವುಗಳಿಗೂ ಕೊಡಬಹುದು. ಕೋತಿಗಳ ಸಂಗಡ ಸಣ್ಣ ಮಕ್ಕಳಿಗೆ ಹಬ್ಬವಾಗುವುದಂತೂ ನಿಜ.

ನಂದಿಬೆಟ್ಟದ ಪಕ್ಕದಲ್ಲಿಯೇ ಸ್ಕಂದಗಿರಿ ಮತ್ತು ಚನ್ನಗಿರಿ ಎಂಬ ಇನ್ನೆರಡು ಸುಂದರ ಬೆಟ್ಟಗಳಿವೆ. ಚಿಕ್ಕಬಳ್ಳಾಪುರಕ್ಕೆ ಹೋಗುವ ದಾರಿಯಲ್ಲಿ ಭೋಗ ನಂದೀಶ್ವರ ದೇವಾಲಯವಿದೆ. ಒಟ್ಟಿನಲ್ಲಿ ಅರ್ಧದಿನ ಅಥವಾ ದಿನವಿಡೀ ಕಳೆಯಲು ಇದು ಪ್ರಶಸ್ತ ಸ್ಥಳವಾಗಿದೆ.


ಇದನ್ನೂ ಓದಿ: ಜಗತ್‌ ಪ್ರಸಿದ್ಧ ಪ್ರತಿರೋಧದ ಹಾಡು! – ರೈತರ ಹೋರಾಟದಲ್ಲೂ ಪ್ರತಿಧ್ವನಿಸಿದ ‘ಬೆಲ್ಲಾ ಚಾವ್’
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...