Homeಮುಖಪುಟಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

ಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

- Advertisement -
- Advertisement -

2017 ರಿಂದ ಕಳೆದ ನಾಲ್ಕು ವರ್ಷಗಳಲ್ಲಿ ಗೋವಾದ ರಾಜಕೀಯ ವಲಯವು ಹೊಸ ಯುಗವನ್ನು ಪ್ರವೇಶಿಸಿದೆ. ಗೋವಾ ವಿಧಾನ ಸಭೆಯ 40 ಶಾಸಕರಲ್ಲಿ 50% ದಷ್ಟು ಸದಸ್ಯರು 2017 ರಲ್ಲಿ ತಮ್ಮನ್ನು ಆಯ್ಕೆ ಮಾಡಿದ ಪಕ್ಷವನ್ನು ತೊರೆದಿದ್ದರೆ. ಆಡಳಿತಾರೂಢ ಬಿಜೆಪಿಯು ಕಳೆದ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಹಲವರನ್ನು ತನ್ನೆಡೆಗೆ ಸೆಳೆದಿದೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದು ಕೆಲವೇ ದಿನಗಳಲ್ಲಿ ಬಾಗಿಲು ತೆರೆದು ನಂತರ ಮುಚ್ಚುತ್ತಿದ್ದ ‘ಕುದುರೆ ವ್ಯಾಪಾರ’ವು ಈಗ ವರ್ಷದಾದ್ಯಂತ ನಡೆಯುವ ವಿದ್ಯಮಾನವಾಗಿ ಪರಿಣಮಿಸಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

2017 ರಿಂದ, ತಮ್ಮ ಪಕ್ಷಗಳನ್ನು ತೊರೆದ ಶಾಸಕರು ಪಟ್ಟಿ ಕಳಗಿನಂತಿದೆ.

2017 ರಲ್ಲಿ ಕಾಂಗ್ರೆಸ್‌ಗೆ 17 ಶಾಸಕರು ಗೆದ್ದು ಬಂದರೂ, 13 ಶಾಸಕರನ್ನು ಹೊಂದಿದ್ದ ಬಿಜೆಪಿ ಮೈತ್ರಿಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು. ಇದರ ನಂತರ, ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಅವರು ವಿಶ್ವಾಸಮತ ಯಾಚೆನೆಯ ದಿನ ಮಾರ್ಚ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದರು.

ವಿಶ್ವಜಿತ್ ರಾಣೆ, ಅವರ ತಂದೆ ಪ್ರತಾಪ್ಸಿಂಗ್ ರಾಣೆ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಮಾಜಿ ಮುಖ್ಯಮಂತ್ರಿಯಾಗಿದ್ದರು. ವಿಶ್ವಜಿತ್‌ ಅವರು ಪಕ್ಷ ತೊರೆದ ನಂತರ ಆಗಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನೇತೃತ್ವದ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ನೇಮಕಗೊಂಡರು.

ಒಂದು ವರ್ಷದ ನಂತರ, ಇನ್ನೂ ಇಬ್ಬರು ಕಾಂಗ್ರೆಸ್ ಶಾಸಕರಾದ ದಯಾನಂದ ಸೋಪ್ಟೆ ಮತ್ತು ಮಾಜಿ ರಾಜ್ಯಾಧ್ಯಕ್ಷ ಸುಭಾಷ್ ಶಿರೋಡ್ಕರ್‌ ಅಕ್ಟೋಬರ್ 16 ರಂದು ಪಕ್ಷವನ್ನು ತೊರೆದು ಅದೇ ದಿನ ಬಿಜೆಪಿಗೆ ಸೇರಿದ್ದರು. ರಾಜೀನಾಮೆ ನೀಡದ ಮೂವರೂ ಬಿಜೆಪಿಯಿಂದ ಉಪಚುನಾವಣೆಗಳನ್ನು ಎದುರಿಸಿ ಹೊಸದಾಗಿ ಶಾಸಕರಾದರು.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

2019 ರ ಮಾರ್ಚ್ ತಿಂಗಳ 27 ರಂದು, ಮೂವರು ಶಾಸಕರಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರನ್ನು(ಮನೋಹರ್ ಅಜಗಾಂವ್ಕರ್ ಮತ್ತು ದೀಪಕ್ ಪೌಸ್ಕರ್) ಬಿಜೆಪಿ ಸೆಳೆದುಕೊಂಡಿತು.

ಒಂದು ಪಕ್ಷದ ಮೂರನೇ ಒಂದು ಭಾಗದಷ್ಟು ಶಾಸಕರು ಪಕ್ಷವನ್ನು ತೊರೆದರೆ ಅವರು, ರಾಜೀನಾಮೆ ನೀಡಬೇಕಾಗಿಲ್ಲ, ಹಾಗಾಗಿ ಅವರು ಶಾಸಕರಾಗಿಯೆ ಉಳಿಯುತ್ತಾರೆ. ಜೊತೆಗೆ ಅವರ ಪಕ್ಷವನ್ನು ಬೇರೆ ಪಕ್ಷದ ಜೊತೆಗೆ ವಿಲೀನಗೊಳಿಸಬಹುದಾಗಿದೆ.

ಬಿಜೆಪಿ ಗೋವಾದಲ್ಲಿ ಒಟ್ಟು ಮೂರು ಬಾರಿ ಕಾಂಗ್ರೆಸ್‌ನ ಶಾಸಕರನ್ನು ಸೆಳೆದಿದೆ. ಮೂರನೇ ಬಾರಿಗೆ ಅದು ಕಾಂಗ್ರೆಸ್‌ 10 ಶಾಸಕರನ್ನು ಸೆಳೆದುಕೊಂಡಿದೆ. ಇದು ಕಾಂಗ್ರೆಸ್ ಗೋವಾದಲ್ಲಿ ಮತ್ತಷ್ಟು ತತ್ತರಿಸುವಂತೆ ಮಾಡಿದೆ.

ಮನೋಹರ್‌ ಪರಿಕ್ಕರ್‌ ನಿಧನದ ನಂತರ ಉತ್ತರಾಧಿಕಾರಿಯಾಗಿ ನೇಮಕಗೊಂಡ ಹೊಸ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತುಸು ಸಮಯ ಆಪರೇಷನ್‌ ಕಮಲಕ್ಕೆ ವಿರಾಮ ನೀಡಿದ್ದರು.

ಇದನ್ನೂ ಓದಿ:ಗೋವಾ ಚುನಾವಣೆ: ಕಾಂಗ್ರೆಸ್ ಜೊತೆಗೆ ಗೋವಾ ಫಾರ್ವಾಡ್ ಪಾರ್ಟಿ ಮೈತ್ರಿ

ಇದೀಗ ಗೋವಾ ಫಾರ್ವರ್ಡ್ ಪಕ್ಷದ ಹಾಲಿ ಶಾಸಕ ಜಯೇಶ್ ಸಲ್ಗಾಂವ್ಕರ್,ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಶಾಸಕ ರವಿ ನಾಯ್ಕ್ ಮತ್ತು ಸ್ವತಂತ್ರ ಶಾಸಕ ರೋಹನ್ ಖೌಂಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಇಬ್ಬರು ಈಗಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರೆ, ರೋಹನ್‌ ಖೌಂಟೆ ಶುಕ್ರವಾರ ಬಿಜೆಪಿಗೆ ಸೇರಲಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ಲುಜಿನ್ಹೋ ಫಲೈರೊ ಮಾರ್ಚ್‌ನಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದಾರೆ. ಈ ಮಧ್ಯೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಚರ್ಚಿಲ್ ಅಲೆಮಾವೊ ಈ ತಿಂಗಳ ಆರಂಭದಲ್ಲಿ ತೃಣಮೂಲ ಪಕ್ಷಕ್ಕೆ ವಿಲೀನಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಆಶ್ಚರ್ಯವೆಂಬಂತೆ ಹಾಲಿ ಬಿಜೆಪಿ ಶಾಸಕಿ, ರಾಜ್ಯದ ಮಾಜಿ ಅರಣ್ಯ ಸಚಿವ ಅಲಿನಾ ಸಲ್ಡಾನ್ಹಾ ಅವರು ಗುರುವಾರದಂದು ಬಿಜೆಪಿ ತೊರೆದಿದ್ದು, ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ.

ಇದನ್ನು ಓದಿ:ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...