Homeಮುಖಪುಟಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

ಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

- Advertisement -
- Advertisement -

2017 ರಿಂದ ಕಳೆದ ನಾಲ್ಕು ವರ್ಷಗಳಲ್ಲಿ ಗೋವಾದ ರಾಜಕೀಯ ವಲಯವು ಹೊಸ ಯುಗವನ್ನು ಪ್ರವೇಶಿಸಿದೆ. ಗೋವಾ ವಿಧಾನ ಸಭೆಯ 40 ಶಾಸಕರಲ್ಲಿ 50% ದಷ್ಟು ಸದಸ್ಯರು 2017 ರಲ್ಲಿ ತಮ್ಮನ್ನು ಆಯ್ಕೆ ಮಾಡಿದ ಪಕ್ಷವನ್ನು ತೊರೆದಿದ್ದರೆ. ಆಡಳಿತಾರೂಢ ಬಿಜೆಪಿಯು ಕಳೆದ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಹಲವರನ್ನು ತನ್ನೆಡೆಗೆ ಸೆಳೆದಿದೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದು ಕೆಲವೇ ದಿನಗಳಲ್ಲಿ ಬಾಗಿಲು ತೆರೆದು ನಂತರ ಮುಚ್ಚುತ್ತಿದ್ದ ‘ಕುದುರೆ ವ್ಯಾಪಾರ’ವು ಈಗ ವರ್ಷದಾದ್ಯಂತ ನಡೆಯುವ ವಿದ್ಯಮಾನವಾಗಿ ಪರಿಣಮಿಸಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

2017 ರಿಂದ, ತಮ್ಮ ಪಕ್ಷಗಳನ್ನು ತೊರೆದ ಶಾಸಕರು ಪಟ್ಟಿ ಕಳಗಿನಂತಿದೆ.

2017 ರಲ್ಲಿ ಕಾಂಗ್ರೆಸ್‌ಗೆ 17 ಶಾಸಕರು ಗೆದ್ದು ಬಂದರೂ, 13 ಶಾಸಕರನ್ನು ಹೊಂದಿದ್ದ ಬಿಜೆಪಿ ಮೈತ್ರಿಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು. ಇದರ ನಂತರ, ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಅವರು ವಿಶ್ವಾಸಮತ ಯಾಚೆನೆಯ ದಿನ ಮಾರ್ಚ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದರು.

ವಿಶ್ವಜಿತ್ ರಾಣೆ, ಅವರ ತಂದೆ ಪ್ರತಾಪ್ಸಿಂಗ್ ರಾಣೆ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಮಾಜಿ ಮುಖ್ಯಮಂತ್ರಿಯಾಗಿದ್ದರು. ವಿಶ್ವಜಿತ್‌ ಅವರು ಪಕ್ಷ ತೊರೆದ ನಂತರ ಆಗಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನೇತೃತ್ವದ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ನೇಮಕಗೊಂಡರು.

ಒಂದು ವರ್ಷದ ನಂತರ, ಇನ್ನೂ ಇಬ್ಬರು ಕಾಂಗ್ರೆಸ್ ಶಾಸಕರಾದ ದಯಾನಂದ ಸೋಪ್ಟೆ ಮತ್ತು ಮಾಜಿ ರಾಜ್ಯಾಧ್ಯಕ್ಷ ಸುಭಾಷ್ ಶಿರೋಡ್ಕರ್‌ ಅಕ್ಟೋಬರ್ 16 ರಂದು ಪಕ್ಷವನ್ನು ತೊರೆದು ಅದೇ ದಿನ ಬಿಜೆಪಿಗೆ ಸೇರಿದ್ದರು. ರಾಜೀನಾಮೆ ನೀಡದ ಮೂವರೂ ಬಿಜೆಪಿಯಿಂದ ಉಪಚುನಾವಣೆಗಳನ್ನು ಎದುರಿಸಿ ಹೊಸದಾಗಿ ಶಾಸಕರಾದರು.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

2019 ರ ಮಾರ್ಚ್ ತಿಂಗಳ 27 ರಂದು, ಮೂವರು ಶಾಸಕರಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರನ್ನು(ಮನೋಹರ್ ಅಜಗಾಂವ್ಕರ್ ಮತ್ತು ದೀಪಕ್ ಪೌಸ್ಕರ್) ಬಿಜೆಪಿ ಸೆಳೆದುಕೊಂಡಿತು.

ಒಂದು ಪಕ್ಷದ ಮೂರನೇ ಒಂದು ಭಾಗದಷ್ಟು ಶಾಸಕರು ಪಕ್ಷವನ್ನು ತೊರೆದರೆ ಅವರು, ರಾಜೀನಾಮೆ ನೀಡಬೇಕಾಗಿಲ್ಲ, ಹಾಗಾಗಿ ಅವರು ಶಾಸಕರಾಗಿಯೆ ಉಳಿಯುತ್ತಾರೆ. ಜೊತೆಗೆ ಅವರ ಪಕ್ಷವನ್ನು ಬೇರೆ ಪಕ್ಷದ ಜೊತೆಗೆ ವಿಲೀನಗೊಳಿಸಬಹುದಾಗಿದೆ.

ಬಿಜೆಪಿ ಗೋವಾದಲ್ಲಿ ಒಟ್ಟು ಮೂರು ಬಾರಿ ಕಾಂಗ್ರೆಸ್‌ನ ಶಾಸಕರನ್ನು ಸೆಳೆದಿದೆ. ಮೂರನೇ ಬಾರಿಗೆ ಅದು ಕಾಂಗ್ರೆಸ್‌ 10 ಶಾಸಕರನ್ನು ಸೆಳೆದುಕೊಂಡಿದೆ. ಇದು ಕಾಂಗ್ರೆಸ್ ಗೋವಾದಲ್ಲಿ ಮತ್ತಷ್ಟು ತತ್ತರಿಸುವಂತೆ ಮಾಡಿದೆ.

ಮನೋಹರ್‌ ಪರಿಕ್ಕರ್‌ ನಿಧನದ ನಂತರ ಉತ್ತರಾಧಿಕಾರಿಯಾಗಿ ನೇಮಕಗೊಂಡ ಹೊಸ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತುಸು ಸಮಯ ಆಪರೇಷನ್‌ ಕಮಲಕ್ಕೆ ವಿರಾಮ ನೀಡಿದ್ದರು.

ಇದನ್ನೂ ಓದಿ:ಗೋವಾ ಚುನಾವಣೆ: ಕಾಂಗ್ರೆಸ್ ಜೊತೆಗೆ ಗೋವಾ ಫಾರ್ವಾಡ್ ಪಾರ್ಟಿ ಮೈತ್ರಿ

ಇದೀಗ ಗೋವಾ ಫಾರ್ವರ್ಡ್ ಪಕ್ಷದ ಹಾಲಿ ಶಾಸಕ ಜಯೇಶ್ ಸಲ್ಗಾಂವ್ಕರ್,ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಶಾಸಕ ರವಿ ನಾಯ್ಕ್ ಮತ್ತು ಸ್ವತಂತ್ರ ಶಾಸಕ ರೋಹನ್ ಖೌಂಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಇಬ್ಬರು ಈಗಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರೆ, ರೋಹನ್‌ ಖೌಂಟೆ ಶುಕ್ರವಾರ ಬಿಜೆಪಿಗೆ ಸೇರಲಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ಲುಜಿನ್ಹೋ ಫಲೈರೊ ಮಾರ್ಚ್‌ನಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದಾರೆ. ಈ ಮಧ್ಯೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಚರ್ಚಿಲ್ ಅಲೆಮಾವೊ ಈ ತಿಂಗಳ ಆರಂಭದಲ್ಲಿ ತೃಣಮೂಲ ಪಕ್ಷಕ್ಕೆ ವಿಲೀನಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಆಶ್ಚರ್ಯವೆಂಬಂತೆ ಹಾಲಿ ಬಿಜೆಪಿ ಶಾಸಕಿ, ರಾಜ್ಯದ ಮಾಜಿ ಅರಣ್ಯ ಸಚಿವ ಅಲಿನಾ ಸಲ್ಡಾನ್ಹಾ ಅವರು ಗುರುವಾರದಂದು ಬಿಜೆಪಿ ತೊರೆದಿದ್ದು, ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ.

ಇದನ್ನು ಓದಿ:ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...