Homeಮುಖಪುಟಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

ಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

- Advertisement -
- Advertisement -

2017 ರಿಂದ ಕಳೆದ ನಾಲ್ಕು ವರ್ಷಗಳಲ್ಲಿ ಗೋವಾದ ರಾಜಕೀಯ ವಲಯವು ಹೊಸ ಯುಗವನ್ನು ಪ್ರವೇಶಿಸಿದೆ. ಗೋವಾ ವಿಧಾನ ಸಭೆಯ 40 ಶಾಸಕರಲ್ಲಿ 50% ದಷ್ಟು ಸದಸ್ಯರು 2017 ರಲ್ಲಿ ತಮ್ಮನ್ನು ಆಯ್ಕೆ ಮಾಡಿದ ಪಕ್ಷವನ್ನು ತೊರೆದಿದ್ದರೆ. ಆಡಳಿತಾರೂಢ ಬಿಜೆಪಿಯು ಕಳೆದ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಹಲವರನ್ನು ತನ್ನೆಡೆಗೆ ಸೆಳೆದಿದೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದು ಕೆಲವೇ ದಿನಗಳಲ್ಲಿ ಬಾಗಿಲು ತೆರೆದು ನಂತರ ಮುಚ್ಚುತ್ತಿದ್ದ ‘ಕುದುರೆ ವ್ಯಾಪಾರ’ವು ಈಗ ವರ್ಷದಾದ್ಯಂತ ನಡೆಯುವ ವಿದ್ಯಮಾನವಾಗಿ ಪರಿಣಮಿಸಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

2017 ರಿಂದ, ತಮ್ಮ ಪಕ್ಷಗಳನ್ನು ತೊರೆದ ಶಾಸಕರು ಪಟ್ಟಿ ಕಳಗಿನಂತಿದೆ.

2017 ರಲ್ಲಿ ಕಾಂಗ್ರೆಸ್‌ಗೆ 17 ಶಾಸಕರು ಗೆದ್ದು ಬಂದರೂ, 13 ಶಾಸಕರನ್ನು ಹೊಂದಿದ್ದ ಬಿಜೆಪಿ ಮೈತ್ರಿಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು. ಇದರ ನಂತರ, ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಅವರು ವಿಶ್ವಾಸಮತ ಯಾಚೆನೆಯ ದಿನ ಮಾರ್ಚ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದರು.

ವಿಶ್ವಜಿತ್ ರಾಣೆ, ಅವರ ತಂದೆ ಪ್ರತಾಪ್ಸಿಂಗ್ ರಾಣೆ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಮಾಜಿ ಮುಖ್ಯಮಂತ್ರಿಯಾಗಿದ್ದರು. ವಿಶ್ವಜಿತ್‌ ಅವರು ಪಕ್ಷ ತೊರೆದ ನಂತರ ಆಗಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನೇತೃತ್ವದ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ನೇಮಕಗೊಂಡರು.

ಒಂದು ವರ್ಷದ ನಂತರ, ಇನ್ನೂ ಇಬ್ಬರು ಕಾಂಗ್ರೆಸ್ ಶಾಸಕರಾದ ದಯಾನಂದ ಸೋಪ್ಟೆ ಮತ್ತು ಮಾಜಿ ರಾಜ್ಯಾಧ್ಯಕ್ಷ ಸುಭಾಷ್ ಶಿರೋಡ್ಕರ್‌ ಅಕ್ಟೋಬರ್ 16 ರಂದು ಪಕ್ಷವನ್ನು ತೊರೆದು ಅದೇ ದಿನ ಬಿಜೆಪಿಗೆ ಸೇರಿದ್ದರು. ರಾಜೀನಾಮೆ ನೀಡದ ಮೂವರೂ ಬಿಜೆಪಿಯಿಂದ ಉಪಚುನಾವಣೆಗಳನ್ನು ಎದುರಿಸಿ ಹೊಸದಾಗಿ ಶಾಸಕರಾದರು.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

2019 ರ ಮಾರ್ಚ್ ತಿಂಗಳ 27 ರಂದು, ಮೂವರು ಶಾಸಕರಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರನ್ನು(ಮನೋಹರ್ ಅಜಗಾಂವ್ಕರ್ ಮತ್ತು ದೀಪಕ್ ಪೌಸ್ಕರ್) ಬಿಜೆಪಿ ಸೆಳೆದುಕೊಂಡಿತು.

ಒಂದು ಪಕ್ಷದ ಮೂರನೇ ಒಂದು ಭಾಗದಷ್ಟು ಶಾಸಕರು ಪಕ್ಷವನ್ನು ತೊರೆದರೆ ಅವರು, ರಾಜೀನಾಮೆ ನೀಡಬೇಕಾಗಿಲ್ಲ, ಹಾಗಾಗಿ ಅವರು ಶಾಸಕರಾಗಿಯೆ ಉಳಿಯುತ್ತಾರೆ. ಜೊತೆಗೆ ಅವರ ಪಕ್ಷವನ್ನು ಬೇರೆ ಪಕ್ಷದ ಜೊತೆಗೆ ವಿಲೀನಗೊಳಿಸಬಹುದಾಗಿದೆ.

ಬಿಜೆಪಿ ಗೋವಾದಲ್ಲಿ ಒಟ್ಟು ಮೂರು ಬಾರಿ ಕಾಂಗ್ರೆಸ್‌ನ ಶಾಸಕರನ್ನು ಸೆಳೆದಿದೆ. ಮೂರನೇ ಬಾರಿಗೆ ಅದು ಕಾಂಗ್ರೆಸ್‌ 10 ಶಾಸಕರನ್ನು ಸೆಳೆದುಕೊಂಡಿದೆ. ಇದು ಕಾಂಗ್ರೆಸ್ ಗೋವಾದಲ್ಲಿ ಮತ್ತಷ್ಟು ತತ್ತರಿಸುವಂತೆ ಮಾಡಿದೆ.

ಮನೋಹರ್‌ ಪರಿಕ್ಕರ್‌ ನಿಧನದ ನಂತರ ಉತ್ತರಾಧಿಕಾರಿಯಾಗಿ ನೇಮಕಗೊಂಡ ಹೊಸ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತುಸು ಸಮಯ ಆಪರೇಷನ್‌ ಕಮಲಕ್ಕೆ ವಿರಾಮ ನೀಡಿದ್ದರು.

ಇದನ್ನೂ ಓದಿ:ಗೋವಾ ಚುನಾವಣೆ: ಕಾಂಗ್ರೆಸ್ ಜೊತೆಗೆ ಗೋವಾ ಫಾರ್ವಾಡ್ ಪಾರ್ಟಿ ಮೈತ್ರಿ

ಇದೀಗ ಗೋವಾ ಫಾರ್ವರ್ಡ್ ಪಕ್ಷದ ಹಾಲಿ ಶಾಸಕ ಜಯೇಶ್ ಸಲ್ಗಾಂವ್ಕರ್,ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಶಾಸಕ ರವಿ ನಾಯ್ಕ್ ಮತ್ತು ಸ್ವತಂತ್ರ ಶಾಸಕ ರೋಹನ್ ಖೌಂಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಇಬ್ಬರು ಈಗಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರೆ, ರೋಹನ್‌ ಖೌಂಟೆ ಶುಕ್ರವಾರ ಬಿಜೆಪಿಗೆ ಸೇರಲಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ಲುಜಿನ್ಹೋ ಫಲೈರೊ ಮಾರ್ಚ್‌ನಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದಾರೆ. ಈ ಮಧ್ಯೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಚರ್ಚಿಲ್ ಅಲೆಮಾವೊ ಈ ತಿಂಗಳ ಆರಂಭದಲ್ಲಿ ತೃಣಮೂಲ ಪಕ್ಷಕ್ಕೆ ವಿಲೀನಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಆಶ್ಚರ್ಯವೆಂಬಂತೆ ಹಾಲಿ ಬಿಜೆಪಿ ಶಾಸಕಿ, ರಾಜ್ಯದ ಮಾಜಿ ಅರಣ್ಯ ಸಚಿವ ಅಲಿನಾ ಸಲ್ಡಾನ್ಹಾ ಅವರು ಗುರುವಾರದಂದು ಬಿಜೆಪಿ ತೊರೆದಿದ್ದು, ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ.

ಇದನ್ನು ಓದಿ:ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...