Homeಮುಖಪುಟಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

ಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

- Advertisement -
- Advertisement -

2017 ರಿಂದ ಕಳೆದ ನಾಲ್ಕು ವರ್ಷಗಳಲ್ಲಿ ಗೋವಾದ ರಾಜಕೀಯ ವಲಯವು ಹೊಸ ಯುಗವನ್ನು ಪ್ರವೇಶಿಸಿದೆ. ಗೋವಾ ವಿಧಾನ ಸಭೆಯ 40 ಶಾಸಕರಲ್ಲಿ 50% ದಷ್ಟು ಸದಸ್ಯರು 2017 ರಲ್ಲಿ ತಮ್ಮನ್ನು ಆಯ್ಕೆ ಮಾಡಿದ ಪಕ್ಷವನ್ನು ತೊರೆದಿದ್ದರೆ. ಆಡಳಿತಾರೂಢ ಬಿಜೆಪಿಯು ಕಳೆದ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಹಲವರನ್ನು ತನ್ನೆಡೆಗೆ ಸೆಳೆದಿದೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದು ಕೆಲವೇ ದಿನಗಳಲ್ಲಿ ಬಾಗಿಲು ತೆರೆದು ನಂತರ ಮುಚ್ಚುತ್ತಿದ್ದ ‘ಕುದುರೆ ವ್ಯಾಪಾರ’ವು ಈಗ ವರ್ಷದಾದ್ಯಂತ ನಡೆಯುವ ವಿದ್ಯಮಾನವಾಗಿ ಪರಿಣಮಿಸಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

2017 ರಿಂದ, ತಮ್ಮ ಪಕ್ಷಗಳನ್ನು ತೊರೆದ ಶಾಸಕರು ಪಟ್ಟಿ ಕಳಗಿನಂತಿದೆ.

2017 ರಲ್ಲಿ ಕಾಂಗ್ರೆಸ್‌ಗೆ 17 ಶಾಸಕರು ಗೆದ್ದು ಬಂದರೂ, 13 ಶಾಸಕರನ್ನು ಹೊಂದಿದ್ದ ಬಿಜೆಪಿ ಮೈತ್ರಿಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು. ಇದರ ನಂತರ, ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಅವರು ವಿಶ್ವಾಸಮತ ಯಾಚೆನೆಯ ದಿನ ಮಾರ್ಚ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದರು.

ವಿಶ್ವಜಿತ್ ರಾಣೆ, ಅವರ ತಂದೆ ಪ್ರತಾಪ್ಸಿಂಗ್ ರಾಣೆ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಮಾಜಿ ಮುಖ್ಯಮಂತ್ರಿಯಾಗಿದ್ದರು. ವಿಶ್ವಜಿತ್‌ ಅವರು ಪಕ್ಷ ತೊರೆದ ನಂತರ ಆಗಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನೇತೃತ್ವದ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ನೇಮಕಗೊಂಡರು.

ಒಂದು ವರ್ಷದ ನಂತರ, ಇನ್ನೂ ಇಬ್ಬರು ಕಾಂಗ್ರೆಸ್ ಶಾಸಕರಾದ ದಯಾನಂದ ಸೋಪ್ಟೆ ಮತ್ತು ಮಾಜಿ ರಾಜ್ಯಾಧ್ಯಕ್ಷ ಸುಭಾಷ್ ಶಿರೋಡ್ಕರ್‌ ಅಕ್ಟೋಬರ್ 16 ರಂದು ಪಕ್ಷವನ್ನು ತೊರೆದು ಅದೇ ದಿನ ಬಿಜೆಪಿಗೆ ಸೇರಿದ್ದರು. ರಾಜೀನಾಮೆ ನೀಡದ ಮೂವರೂ ಬಿಜೆಪಿಯಿಂದ ಉಪಚುನಾವಣೆಗಳನ್ನು ಎದುರಿಸಿ ಹೊಸದಾಗಿ ಶಾಸಕರಾದರು.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

2019 ರ ಮಾರ್ಚ್ ತಿಂಗಳ 27 ರಂದು, ಮೂವರು ಶಾಸಕರಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರನ್ನು(ಮನೋಹರ್ ಅಜಗಾಂವ್ಕರ್ ಮತ್ತು ದೀಪಕ್ ಪೌಸ್ಕರ್) ಬಿಜೆಪಿ ಸೆಳೆದುಕೊಂಡಿತು.

ಒಂದು ಪಕ್ಷದ ಮೂರನೇ ಒಂದು ಭಾಗದಷ್ಟು ಶಾಸಕರು ಪಕ್ಷವನ್ನು ತೊರೆದರೆ ಅವರು, ರಾಜೀನಾಮೆ ನೀಡಬೇಕಾಗಿಲ್ಲ, ಹಾಗಾಗಿ ಅವರು ಶಾಸಕರಾಗಿಯೆ ಉಳಿಯುತ್ತಾರೆ. ಜೊತೆಗೆ ಅವರ ಪಕ್ಷವನ್ನು ಬೇರೆ ಪಕ್ಷದ ಜೊತೆಗೆ ವಿಲೀನಗೊಳಿಸಬಹುದಾಗಿದೆ.

ಬಿಜೆಪಿ ಗೋವಾದಲ್ಲಿ ಒಟ್ಟು ಮೂರು ಬಾರಿ ಕಾಂಗ್ರೆಸ್‌ನ ಶಾಸಕರನ್ನು ಸೆಳೆದಿದೆ. ಮೂರನೇ ಬಾರಿಗೆ ಅದು ಕಾಂಗ್ರೆಸ್‌ 10 ಶಾಸಕರನ್ನು ಸೆಳೆದುಕೊಂಡಿದೆ. ಇದು ಕಾಂಗ್ರೆಸ್ ಗೋವಾದಲ್ಲಿ ಮತ್ತಷ್ಟು ತತ್ತರಿಸುವಂತೆ ಮಾಡಿದೆ.

ಮನೋಹರ್‌ ಪರಿಕ್ಕರ್‌ ನಿಧನದ ನಂತರ ಉತ್ತರಾಧಿಕಾರಿಯಾಗಿ ನೇಮಕಗೊಂಡ ಹೊಸ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತುಸು ಸಮಯ ಆಪರೇಷನ್‌ ಕಮಲಕ್ಕೆ ವಿರಾಮ ನೀಡಿದ್ದರು.

ಇದನ್ನೂ ಓದಿ:ಗೋವಾ ಚುನಾವಣೆ: ಕಾಂಗ್ರೆಸ್ ಜೊತೆಗೆ ಗೋವಾ ಫಾರ್ವಾಡ್ ಪಾರ್ಟಿ ಮೈತ್ರಿ

ಇದೀಗ ಗೋವಾ ಫಾರ್ವರ್ಡ್ ಪಕ್ಷದ ಹಾಲಿ ಶಾಸಕ ಜಯೇಶ್ ಸಲ್ಗಾಂವ್ಕರ್,ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಶಾಸಕ ರವಿ ನಾಯ್ಕ್ ಮತ್ತು ಸ್ವತಂತ್ರ ಶಾಸಕ ರೋಹನ್ ಖೌಂಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಇಬ್ಬರು ಈಗಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರೆ, ರೋಹನ್‌ ಖೌಂಟೆ ಶುಕ್ರವಾರ ಬಿಜೆಪಿಗೆ ಸೇರಲಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ಲುಜಿನ್ಹೋ ಫಲೈರೊ ಮಾರ್ಚ್‌ನಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದಾರೆ. ಈ ಮಧ್ಯೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಚರ್ಚಿಲ್ ಅಲೆಮಾವೊ ಈ ತಿಂಗಳ ಆರಂಭದಲ್ಲಿ ತೃಣಮೂಲ ಪಕ್ಷಕ್ಕೆ ವಿಲೀನಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಆಶ್ಚರ್ಯವೆಂಬಂತೆ ಹಾಲಿ ಬಿಜೆಪಿ ಶಾಸಕಿ, ರಾಜ್ಯದ ಮಾಜಿ ಅರಣ್ಯ ಸಚಿವ ಅಲಿನಾ ಸಲ್ಡಾನ್ಹಾ ಅವರು ಗುರುವಾರದಂದು ಬಿಜೆಪಿ ತೊರೆದಿದ್ದು, ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ.

ಇದನ್ನು ಓದಿ:ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...