Homeಮುಖಪುಟಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

ಗೋವಾ: 4 ವರ್ಷದಲ್ಲಿ 50% ಶಾಸಕರು ಪಕ್ಷಾಂತರ!

- Advertisement -
- Advertisement -

2017 ರಿಂದ ಕಳೆದ ನಾಲ್ಕು ವರ್ಷಗಳಲ್ಲಿ ಗೋವಾದ ರಾಜಕೀಯ ವಲಯವು ಹೊಸ ಯುಗವನ್ನು ಪ್ರವೇಶಿಸಿದೆ. ಗೋವಾ ವಿಧಾನ ಸಭೆಯ 40 ಶಾಸಕರಲ್ಲಿ 50% ದಷ್ಟು ಸದಸ್ಯರು 2017 ರಲ್ಲಿ ತಮ್ಮನ್ನು ಆಯ್ಕೆ ಮಾಡಿದ ಪಕ್ಷವನ್ನು ತೊರೆದಿದ್ದರೆ. ಆಡಳಿತಾರೂಢ ಬಿಜೆಪಿಯು ಕಳೆದ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರ ಶಾಸಕರು ಸೇರಿದಂತೆ ಹಲವರನ್ನು ತನ್ನೆಡೆಗೆ ಸೆಳೆದಿದೆ.

ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದು ಕೆಲವೇ ದಿನಗಳಲ್ಲಿ ಬಾಗಿಲು ತೆರೆದು ನಂತರ ಮುಚ್ಚುತ್ತಿದ್ದ ‘ಕುದುರೆ ವ್ಯಾಪಾರ’ವು ಈಗ ವರ್ಷದಾದ್ಯಂತ ನಡೆಯುವ ವಿದ್ಯಮಾನವಾಗಿ ಪರಿಣಮಿಸಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

2017 ರಿಂದ, ತಮ್ಮ ಪಕ್ಷಗಳನ್ನು ತೊರೆದ ಶಾಸಕರು ಪಟ್ಟಿ ಕಳಗಿನಂತಿದೆ.

2017 ರಲ್ಲಿ ಕಾಂಗ್ರೆಸ್‌ಗೆ 17 ಶಾಸಕರು ಗೆದ್ದು ಬಂದರೂ, 13 ಶಾಸಕರನ್ನು ಹೊಂದಿದ್ದ ಬಿಜೆಪಿ ಮೈತ್ರಿಗಳ ಬೆಂಬಲದೊಂದಿಗೆ ಅಧಿಕಾರ ಹಿಡಿಯಿತು. ಇದರ ನಂತರ, ಕಾಂಗ್ರೆಸ್ ಶಾಸಕ ವಿಶ್ವಜಿತ್ ರಾಣೆ ಅವರು ವಿಶ್ವಾಸಮತ ಯಾಚೆನೆಯ ದಿನ ಮಾರ್ಚ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದರು.

ವಿಶ್ವಜಿತ್ ರಾಣೆ, ಅವರ ತಂದೆ ಪ್ರತಾಪ್ಸಿಂಗ್ ರಾಣೆ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಮಾಜಿ ಮುಖ್ಯಮಂತ್ರಿಯಾಗಿದ್ದರು. ವಿಶ್ವಜಿತ್‌ ಅವರು ಪಕ್ಷ ತೊರೆದ ನಂತರ ಆಗಿನ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನೇತೃತ್ವದ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ನೇಮಕಗೊಂಡರು.

ಒಂದು ವರ್ಷದ ನಂತರ, ಇನ್ನೂ ಇಬ್ಬರು ಕಾಂಗ್ರೆಸ್ ಶಾಸಕರಾದ ದಯಾನಂದ ಸೋಪ್ಟೆ ಮತ್ತು ಮಾಜಿ ರಾಜ್ಯಾಧ್ಯಕ್ಷ ಸುಭಾಷ್ ಶಿರೋಡ್ಕರ್‌ ಅಕ್ಟೋಬರ್ 16 ರಂದು ಪಕ್ಷವನ್ನು ತೊರೆದು ಅದೇ ದಿನ ಬಿಜೆಪಿಗೆ ಸೇರಿದ್ದರು. ರಾಜೀನಾಮೆ ನೀಡದ ಮೂವರೂ ಬಿಜೆಪಿಯಿಂದ ಉಪಚುನಾವಣೆಗಳನ್ನು ಎದುರಿಸಿ ಹೊಸದಾಗಿ ಶಾಸಕರಾದರು.

ಇದನ್ನೂ ಓದಿ:ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

2019 ರ ಮಾರ್ಚ್ ತಿಂಗಳ 27 ರಂದು, ಮೂವರು ಶಾಸಕರಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರನ್ನು(ಮನೋಹರ್ ಅಜಗಾಂವ್ಕರ್ ಮತ್ತು ದೀಪಕ್ ಪೌಸ್ಕರ್) ಬಿಜೆಪಿ ಸೆಳೆದುಕೊಂಡಿತು.

ಒಂದು ಪಕ್ಷದ ಮೂರನೇ ಒಂದು ಭಾಗದಷ್ಟು ಶಾಸಕರು ಪಕ್ಷವನ್ನು ತೊರೆದರೆ ಅವರು, ರಾಜೀನಾಮೆ ನೀಡಬೇಕಾಗಿಲ್ಲ, ಹಾಗಾಗಿ ಅವರು ಶಾಸಕರಾಗಿಯೆ ಉಳಿಯುತ್ತಾರೆ. ಜೊತೆಗೆ ಅವರ ಪಕ್ಷವನ್ನು ಬೇರೆ ಪಕ್ಷದ ಜೊತೆಗೆ ವಿಲೀನಗೊಳಿಸಬಹುದಾಗಿದೆ.

ಬಿಜೆಪಿ ಗೋವಾದಲ್ಲಿ ಒಟ್ಟು ಮೂರು ಬಾರಿ ಕಾಂಗ್ರೆಸ್‌ನ ಶಾಸಕರನ್ನು ಸೆಳೆದಿದೆ. ಮೂರನೇ ಬಾರಿಗೆ ಅದು ಕಾಂಗ್ರೆಸ್‌ 10 ಶಾಸಕರನ್ನು ಸೆಳೆದುಕೊಂಡಿದೆ. ಇದು ಕಾಂಗ್ರೆಸ್ ಗೋವಾದಲ್ಲಿ ಮತ್ತಷ್ಟು ತತ್ತರಿಸುವಂತೆ ಮಾಡಿದೆ.

ಮನೋಹರ್‌ ಪರಿಕ್ಕರ್‌ ನಿಧನದ ನಂತರ ಉತ್ತರಾಧಿಕಾರಿಯಾಗಿ ನೇಮಕಗೊಂಡ ಹೊಸ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತುಸು ಸಮಯ ಆಪರೇಷನ್‌ ಕಮಲಕ್ಕೆ ವಿರಾಮ ನೀಡಿದ್ದರು.

ಇದನ್ನೂ ಓದಿ:ಗೋವಾ ಚುನಾವಣೆ: ಕಾಂಗ್ರೆಸ್ ಜೊತೆಗೆ ಗೋವಾ ಫಾರ್ವಾಡ್ ಪಾರ್ಟಿ ಮೈತ್ರಿ

ಇದೀಗ ಗೋವಾ ಫಾರ್ವರ್ಡ್ ಪಕ್ಷದ ಹಾಲಿ ಶಾಸಕ ಜಯೇಶ್ ಸಲ್ಗಾಂವ್ಕರ್,ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಶಾಸಕ ರವಿ ನಾಯ್ಕ್ ಮತ್ತು ಸ್ವತಂತ್ರ ಶಾಸಕ ರೋಹನ್ ಖೌಂಟೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಇಬ್ಬರು ಈಗಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರೆ, ರೋಹನ್‌ ಖೌಂಟೆ ಶುಕ್ರವಾರ ಬಿಜೆಪಿಗೆ ಸೇರಲಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ಲುಜಿನ್ಹೋ ಫಲೈರೊ ಮಾರ್ಚ್‌ನಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದಾರೆ. ಈ ಮಧ್ಯೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ ಚರ್ಚಿಲ್ ಅಲೆಮಾವೊ ಈ ತಿಂಗಳ ಆರಂಭದಲ್ಲಿ ತೃಣಮೂಲ ಪಕ್ಷಕ್ಕೆ ವಿಲೀನಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.

ಆಶ್ಚರ್ಯವೆಂಬಂತೆ ಹಾಲಿ ಬಿಜೆಪಿ ಶಾಸಕಿ, ರಾಜ್ಯದ ಮಾಜಿ ಅರಣ್ಯ ಸಚಿವ ಅಲಿನಾ ಸಲ್ಡಾನ್ಹಾ ಅವರು ಗುರುವಾರದಂದು ಬಿಜೆಪಿ ತೊರೆದಿದ್ದು, ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ.

ಇದನ್ನು ಓದಿ:ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....