HomeUncategorizedಕೊರೊನಾ ಮುಕ್ತ ರಾಜ್ಯಗಳಾಗಿ ಗೋವಾ ಮತ್ತು ಮಣಿಪುರ ಘೋಷಣೆ

ಕೊರೊನಾ ಮುಕ್ತ ರಾಜ್ಯಗಳಾಗಿ ಗೋವಾ ಮತ್ತು ಮಣಿಪುರ ಘೋಷಣೆ

ಗೋವಾವೂ ದೇಶದಲ್ಲಿ ಜನತಾ ಕರ್ಫ್ಯೂ ನಡೆಯುವ ಮೊದಲೇ ದೇಶದ ಇತರ ರಾಜ್ಯಗಳ ಪ್ರವಾಸಿಗರು ಹಾಗೂ ಜನರನ್ನು ತಪಾಸಣೆ ಮಾಡಿ ಮನೆಯಲ್ಲೇ ಸಂಪರ್ಕತಡೆಗೆ ಒಳಪಡಿಸಿತ್ತು .

- Advertisement -
- Advertisement -

ಗೋವಾ ಮತ್ತು ಮಣಿಪುರ ರಾಜ್ಯವನ್ನು ಕೊರೊನಾ ವೈರಸ್ ಮುಕ್ತ ರಾಜ್ಯಗಳೆಂದು ಘೋಷಿಸಲಾಗಿದೆ. ಗೋವಾವನ್ನು ಕೊರೊನಾ ಮುಕ್ತರಾಜ್ಯ ಎಂದು ಘೋಷಿಸಿದ ನಂತರ ಮನಿಪುರವನ್ನು ಭಾರತದ ಎರಡನೇ ಕೊರೊನಾ ಮುಕ್ತ ರಾಜ್ಯ ಎಂದು ಘೋಷಿಸಲಾಯಿತು.

ಗೋವಾವೂ ದೇಶದಲ್ಲಿ ಜನತಾ ಕರ್ಫ್ಯೂ ನಡೆಯುವ ಮೊದಲೇ ದೇಶದ ಇತರ ರಾಜ್ಯಗಳ ಪ್ರವಾಸಿಗರು ಹಾಗೂ ಜನರನ್ನು ತಪಾಸಣೆ ಮಾಡಿ ಮನೆಯಲ್ಲೇ ಸಂಪರ್ಕತಡೆಗೆ ಒಳಪಡಿಸಿತ್ತು .

ಕೊರೊನಾ ಸೋಂಕಿಗೆ ಒಳಗಾದ 2 ಜನರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಮಣಿಪುರದಲ್ಲಿ ಸೋಂಕಿಗೆ ಒಳಗಾದ ಇಬ್ಬರು ಜನರಲ್ಲಿ ಒಬ್ಬರು 23 ವರ್ಷದ ಯುವತಿ ಇಂಗ್ಲೇಂಡಿನಿಂದ ಹಿಂದಿರುಗಿದ್ದರು, ಇದು ರಾಜ್ಯದ ಮೊದಲ ಪ್ರಕರಣವಾಗಿತ್ತು. ಎರಡನೇ ರೋಗಿಯು 65 ವರ್ಷದ ವ್ಯಕ್ತಿಯಾಗಿದ್ದು, ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯಿಂದ ಮರಳಿದ ನಂತರ ಈ ಕಾಯಿಲೆಗೆ ತುತ್ತಾಗಿರುವುದು ಕಂಡುಬಂದಿತ್ತು.

ಏಪ್ರಿಲ್ 3 ರಿಂದ ಗೋವಾ ಯಾವುದೇ ಹೊಸ ಪ್ರಕರಣಗಳನ್ನು ಹೊಂದಿಲ್ಲ ಮತ್ತು ಕೊರೊನಾ ವೈರಸ್ ಸೋಂಕಿಗೆ ಒಳಗಾದ ಏಳು ರೋಗಿಗಳು ಚೇತರಿಸಿಕೊಳ್ಳುವ ಮೂಲಕ ಮೊದಲ ಕರೋನಾ ಮುಕ್ತ ರಾಜ್ಯವಾಯಿತು. ಸೋಂಕಿತ ಏಳು ಜನರಲ್ಲಿ ಆರು ಮಂದಿ ವಿದೇಶಿ ಪ್ರಯಾಣಮಾಡಿದ್ದರೆ, ಇನ್ನೊಬ್ಬರು ಕೊರೊನಾ ಸೋಂಕಿತ ರೋಗಿಯ ಸಹೋದರರಾಗಿದ್ದರು.


ಇದನ್ನೂ ಓದಿ: 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಚೇತರಿಸಿಕೊಂಡ ಈ ಏಳು ರೋಗಿಗಳನ್ನು ಸರ್ಕಾರಿ ಸೌಲಭ್ಯಗಳಲ್ಲಿ, ಮನೆಯಲ್ಲಿ ಪ್ರತ್ಯೇಕಿಸಲಾಗುವುದು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸ್ವಾಂತ್ ಹೇಳಿದ್ದಾರೆ. “ಇದು ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕಾರ್ಮಿಕರಿಗೆ ಸಂತೋಷದ ಕ್ಷಣವಾಗಿದ್ದರೂ ಇದು ವಿಶ್ರಾಂತಿ ಪಡೆಯುವ ಸಮಯವಲ್ಲ ಮತ್ತು ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳಬೇಕಾಗಿದೆ” ಎಂದು ಪ್ರಮೋದ್ ಸ್ವಾಂತ್ ಹೇಳಿದ್ದಾರೆ.

“ಕೇಂದ್ರ ಸರ್ಕಾರ ನಿರ್ಧರಿಸುವವರೆಗೂ ಲಾಕ್‌ಡೌನ್ ಮುಂದುವರಿಯುತ್ತದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಗಳು ಮುಚ್ಚಲ್ಪಟ್ಟಿರುತ್ತದೆ ಆದರೆ ವಿಶೇಷ ಸಂದರ್ಭಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಯಾರಾದರೂ ಸರ್ಕಾರಿ ಸಂಪರ್ಕತಡೆ ಕೇಂದ್ರದಲ್ಲಿ ಇರಬೇಕಾಗುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ “ಕೊರೊನಾ ಮುಕ್ತವಾಗಿರುವ ದೇಶದ ಮೊದಲ ರಾಜ್ಯ ಗೋವಾ” ಎಂದು ಟ್ವೀಟ್ ಮಾಡಿದ್ದಾರೆ.

ಮಾರ್ಚ್ 22 ರಂದು ಜನತಾ ಕರ್ಫ್ಯೂ ದಿನದಿಂದ ಗೋವಾ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕದೊಂದಿಗೆ ಗೋವಾದ ಗಡಿಯನ್ನು ಮುಚ್ಚಲು ಮುಖ್ಯಮಂತ್ರಿ ನಿರ್ಧರಿಸಿದ್ದರು.

ಒಟ್ಟಾರೆಯಾಗಿ ಗೋವಾ ಇದುವರೆಗೆ 800 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದೆ, ಅವರಲ್ಲಿ ಏಳು ಮಂದಿಗೆ ಕೊರೊನಾ ವೈರಸ್ ಸೋಂಕಿರುವುದು ಪತ್ತೆಯಾಗಿತ್ತು.

ಕಡ್ಡಾಯ ಸುರಕ್ಷತಾ ಶಿಷ್ಟಾಚಾರವನ್ನು ಅನುಸರಿಸಿ ಮಣಿಪುರ ಮತ್ತು ಗೋವಾ ರಾಜ್ಯಗಳು ತಮ್ಮ ವ್ಯವಹಾರ ಚಟುವಟಿಕೆಗಳನ್ನು ಪ್ರಾರಂಭಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...