HomeUncategorizedಕೊರೊನಾ ಮುಕ್ತ ರಾಜ್ಯಗಳಾಗಿ ಗೋವಾ ಮತ್ತು ಮಣಿಪುರ ಘೋಷಣೆ

ಕೊರೊನಾ ಮುಕ್ತ ರಾಜ್ಯಗಳಾಗಿ ಗೋವಾ ಮತ್ತು ಮಣಿಪುರ ಘೋಷಣೆ

ಗೋವಾವೂ ದೇಶದಲ್ಲಿ ಜನತಾ ಕರ್ಫ್ಯೂ ನಡೆಯುವ ಮೊದಲೇ ದೇಶದ ಇತರ ರಾಜ್ಯಗಳ ಪ್ರವಾಸಿಗರು ಹಾಗೂ ಜನರನ್ನು ತಪಾಸಣೆ ಮಾಡಿ ಮನೆಯಲ್ಲೇ ಸಂಪರ್ಕತಡೆಗೆ ಒಳಪಡಿಸಿತ್ತು .

- Advertisement -
- Advertisement -

ಗೋವಾ ಮತ್ತು ಮಣಿಪುರ ರಾಜ್ಯವನ್ನು ಕೊರೊನಾ ವೈರಸ್ ಮುಕ್ತ ರಾಜ್ಯಗಳೆಂದು ಘೋಷಿಸಲಾಗಿದೆ. ಗೋವಾವನ್ನು ಕೊರೊನಾ ಮುಕ್ತರಾಜ್ಯ ಎಂದು ಘೋಷಿಸಿದ ನಂತರ ಮನಿಪುರವನ್ನು ಭಾರತದ ಎರಡನೇ ಕೊರೊನಾ ಮುಕ್ತ ರಾಜ್ಯ ಎಂದು ಘೋಷಿಸಲಾಯಿತು.

ಗೋವಾವೂ ದೇಶದಲ್ಲಿ ಜನತಾ ಕರ್ಫ್ಯೂ ನಡೆಯುವ ಮೊದಲೇ ದೇಶದ ಇತರ ರಾಜ್ಯಗಳ ಪ್ರವಾಸಿಗರು ಹಾಗೂ ಜನರನ್ನು ತಪಾಸಣೆ ಮಾಡಿ ಮನೆಯಲ್ಲೇ ಸಂಪರ್ಕತಡೆಗೆ ಒಳಪಡಿಸಿತ್ತು .

ಕೊರೊನಾ ಸೋಂಕಿಗೆ ಒಳಗಾದ 2 ಜನರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಮಣಿಪುರದಲ್ಲಿ ಸೋಂಕಿಗೆ ಒಳಗಾದ ಇಬ್ಬರು ಜನರಲ್ಲಿ ಒಬ್ಬರು 23 ವರ್ಷದ ಯುವತಿ ಇಂಗ್ಲೇಂಡಿನಿಂದ ಹಿಂದಿರುಗಿದ್ದರು, ಇದು ರಾಜ್ಯದ ಮೊದಲ ಪ್ರಕರಣವಾಗಿತ್ತು. ಎರಡನೇ ರೋಗಿಯು 65 ವರ್ಷದ ವ್ಯಕ್ತಿಯಾಗಿದ್ದು, ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯಿಂದ ಮರಳಿದ ನಂತರ ಈ ಕಾಯಿಲೆಗೆ ತುತ್ತಾಗಿರುವುದು ಕಂಡುಬಂದಿತ್ತು.

ಏಪ್ರಿಲ್ 3 ರಿಂದ ಗೋವಾ ಯಾವುದೇ ಹೊಸ ಪ್ರಕರಣಗಳನ್ನು ಹೊಂದಿಲ್ಲ ಮತ್ತು ಕೊರೊನಾ ವೈರಸ್ ಸೋಂಕಿಗೆ ಒಳಗಾದ ಏಳು ರೋಗಿಗಳು ಚೇತರಿಸಿಕೊಳ್ಳುವ ಮೂಲಕ ಮೊದಲ ಕರೋನಾ ಮುಕ್ತ ರಾಜ್ಯವಾಯಿತು. ಸೋಂಕಿತ ಏಳು ಜನರಲ್ಲಿ ಆರು ಮಂದಿ ವಿದೇಶಿ ಪ್ರಯಾಣಮಾಡಿದ್ದರೆ, ಇನ್ನೊಬ್ಬರು ಕೊರೊನಾ ಸೋಂಕಿತ ರೋಗಿಯ ಸಹೋದರರಾಗಿದ್ದರು.


ಇದನ್ನೂ ಓದಿ: 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಚೇತರಿಸಿಕೊಂಡ ಈ ಏಳು ರೋಗಿಗಳನ್ನು ಸರ್ಕಾರಿ ಸೌಲಭ್ಯಗಳಲ್ಲಿ, ಮನೆಯಲ್ಲಿ ಪ್ರತ್ಯೇಕಿಸಲಾಗುವುದು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸ್ವಾಂತ್ ಹೇಳಿದ್ದಾರೆ. “ಇದು ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕಾರ್ಮಿಕರಿಗೆ ಸಂತೋಷದ ಕ್ಷಣವಾಗಿದ್ದರೂ ಇದು ವಿಶ್ರಾಂತಿ ಪಡೆಯುವ ಸಮಯವಲ್ಲ ಮತ್ತು ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳಬೇಕಾಗಿದೆ” ಎಂದು ಪ್ರಮೋದ್ ಸ್ವಾಂತ್ ಹೇಳಿದ್ದಾರೆ.

“ಕೇಂದ್ರ ಸರ್ಕಾರ ನಿರ್ಧರಿಸುವವರೆಗೂ ಲಾಕ್‌ಡೌನ್ ಮುಂದುವರಿಯುತ್ತದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಗಳು ಮುಚ್ಚಲ್ಪಟ್ಟಿರುತ್ತದೆ ಆದರೆ ವಿಶೇಷ ಸಂದರ್ಭಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಯಾರಾದರೂ ಸರ್ಕಾರಿ ಸಂಪರ್ಕತಡೆ ಕೇಂದ್ರದಲ್ಲಿ ಇರಬೇಕಾಗುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ “ಕೊರೊನಾ ಮುಕ್ತವಾಗಿರುವ ದೇಶದ ಮೊದಲ ರಾಜ್ಯ ಗೋವಾ” ಎಂದು ಟ್ವೀಟ್ ಮಾಡಿದ್ದಾರೆ.

ಮಾರ್ಚ್ 22 ರಂದು ಜನತಾ ಕರ್ಫ್ಯೂ ದಿನದಿಂದ ಗೋವಾ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕದೊಂದಿಗೆ ಗೋವಾದ ಗಡಿಯನ್ನು ಮುಚ್ಚಲು ಮುಖ್ಯಮಂತ್ರಿ ನಿರ್ಧರಿಸಿದ್ದರು.

ಒಟ್ಟಾರೆಯಾಗಿ ಗೋವಾ ಇದುವರೆಗೆ 800 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದೆ, ಅವರಲ್ಲಿ ಏಳು ಮಂದಿಗೆ ಕೊರೊನಾ ವೈರಸ್ ಸೋಂಕಿರುವುದು ಪತ್ತೆಯಾಗಿತ್ತು.

ಕಡ್ಡಾಯ ಸುರಕ್ಷತಾ ಶಿಷ್ಟಾಚಾರವನ್ನು ಅನುಸರಿಸಿ ಮಣಿಪುರ ಮತ್ತು ಗೋವಾ ರಾಜ್ಯಗಳು ತಮ್ಮ ವ್ಯವಹಾರ ಚಟುವಟಿಕೆಗಳನ್ನು ಪ್ರಾರಂಭಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...