Homeಮುಖಪುಟಗೋವಾ: ಅಧಿಕಾರಕ್ಕಾಗಿ ಟಿಎಂಸಿ ಮಿತ್ರ ಪಕ್ಷ ಎಂಜಿಪಿ ಜೊತೆ ಚರ್ಚೆ ಆರಂಭಿಸಿದ ಬಿಜೆಪಿ!

ಗೋವಾ: ಅಧಿಕಾರಕ್ಕಾಗಿ ಟಿಎಂಸಿ ಮಿತ್ರ ಪಕ್ಷ ಎಂಜಿಪಿ ಜೊತೆ ಚರ್ಚೆ ಆರಂಭಿಸಿದ ಬಿಜೆಪಿ!

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಇನ್ನೆರಡು ದಿನಗಳು ಬಾಕಿ ಇದೆ. ಇದೇ ವೇಳೆ ಹೆಚ್ಚಿನ ಎಕ್ಸಿಟ್‌ ಪೂಲ್‌ಗಳು ಗೋವಾದಲ್ಲಿ ಅತಂತ್ರ ಸ್ಥಿತಿ ಉಂಟಾಗಲಿದೆ ಎಂದು ಭವಿಷ್ಯ ನುಡಿದಿದೆ. ಈ ಹಿನ್ನಲೆಯಲ್ಲಿ ಅಧಿಕಾರ ಹಿಡಿಯುವ ಸಂಖ್ಯೆಯ ಬೆಂಬಲಕ್ಕಾಗಿ ಬಿಜೆಪಿ ಕಾರ್ಯಪ್ರವೃತ್ತವಾಗಿದೆ.

ಒಂದು ವೇಳೆ ಅಧಿಕಾರಕ್ಕೆ ಬರಲು ಸಂಖ್ಯಾಬಲ ಕಡಿಮೆಯಾದರೆ ಸರ್ಕಾರ ರಚಿಸುವ ಸಂಖ್ಯೆಯ ಬೆಂಬಲ ಪಡೆಯಲು ಕೇಂದ್ರದ ನಾಯಕತ್ವವು ಈಗಾಗಲೇ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಯೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಸಾವಂತ್, “ಬಿಜೆಪಿಯು 22 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಆಶಾವಾದದಲ್ಲಿದೆ (ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ). ಆದರೆ ಒಂದು ವೇಳೆ ಸಂಖ್ಯಾಬಲದ ಕೊರತೆಯಾದರೆ, ಪಕ್ಷೇತರರು ಮತ್ತು ಎಂಜಿಪಿಯೊಂದಿಗೆ ಪಕ್ಷವು ಬೆಂಬಲವನ್ನು ಪಡೆಯುವ ಆಯ್ಕೆಯನ್ನು ಸಹ ಮುಂದಿಟ್ಟಿದೆ” ಎಂದು ಹೇಳಿದ್ದಾರೆ.

ಚುನಾವಣೋತ್ತರ ಮೈತ್ರಿಗಾಗಿ ಕೇಂದ್ರ ಬಿಜೆಪಿ ನಾಯಕತ್ವವು ಎಂಜಿಪಿ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, 13 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ, ದೀಪಕ್ ಧವಲಿಕರ್ ನೇತೃತ್ವದ ಎಂಜಿಪಿ (ಗೋವಾದ ಅತ್ಯಂತ ಹಳೆಯ ಪ್ರಾದೇಶಿಕ ಸಂಘಟನೆ), ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಸ್ವತಂತ್ರ ಪಕ್ಷಗಳೊಂದಿಗೆ ತ್ವರಿತವಾಗಿ ಮೈತ್ರಿ ಮಾಡಿಕೊಂಡು ಮನೋಹರ್ ಪರಿಕ್ಕರ್ ನೇತೃತ್ವದ ಸರ್ಕಾರವನ್ನು ರಚಿಸಿತ್ತು.

2019 ರಲ್ಲಿ, ಪರಿಕ್ಕರ್ ಅವರ ನಿಧನದ ನಂತರ ಸಾವಂತ್ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ್ದರು. ಈ ವೇಳೆ ಇಬ್ಬರು ಎಂಜಿಪಿ ಮಂತ್ರಿಗಳನ್ನು ರಾಜ್ಯ ಸಂಪುಟದಿಂದ ಕೈಬಿಡಲಾಗಿತ್ತು.

ಈ ಬಾರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ಮೈತ್ರಿ ಮಾಡಿಕೊಂಡು ಎಂಜಿಪಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದೆ.

ಗೋವಾ ಚುನಾವಣಾ ಫಲಿತಾಂಶದ ನಂತರ ಟಿಎಂಸಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ತಮ್ಮ ಪಕ್ಷವು ತನ್ನ ನಿಲುವನ್ನು ನಿರ್ಧರಿಸುತ್ತದೆ ಆದರೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಎಂಜಿಪಿ ಶಾಸಕ ಸುದಿನ್ ಧವಲಿಕರ್ ಶನಿವಾರ ಹೇಳಿದ್ದಾರೆ.

ಸಾವಂತ್‌‌ ತಮ್ಮ ಸಂಪುಟದಿಂದ ಎಂಜಿಪಿ ಸಚಿವರನ್ನು ವಜಾಗೊಳಿಸಿದ್ದರು ಎಂದು ಹೇಳಿರುವ ಸುದಿನ್‌‌ ಅವರು ಹೇಳಿದ್ದಾರೆ. ಆದರೆ ಮತ್ತೆ ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿಲ್ಲ.

ಸುದಿನ್ ಧವಲಿಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಾವಂತ್, “ಯಾವುದೇ ಪಕ್ಷ ನಮಗೆ ಬೆಂಬಲ ನೀಡಿದರೂ ನಮ್ಮ ನಾಯಕತ್ವದ ಬಗ್ಗೆ ಅವರು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. 2017 ರ ಗೋವಾ ಚುನಾವಣೆಯಲ್ಲಿ ಮತ್ತು ಈ ವರ್ಷದ ಚುನಾವಣೆಗಳಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದು ಎಂಜಿಪಿಯಾಗಿದೆ” ಎಂದು ಹೇಳಿದ್ದಾರೆ.

2019ರಲ್ಲಿ ನಡೆದ ಉಪಚುನಾವಣೆಯಲ್ಲಿ ನಮ್ಮ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದರಿಂದ ಎಂಜಿಪಿಯನ್ನು ಸರ್ಕಾರದಿಂದ ಕೈಬಿಡಲಾಗಿದೆ ಎಂದು ಸಿಎಂ ಹೇಳಿದ್ದಾರೆ. “ಧವಲಿಕರ್ ಸಹೋದರರೊಂದಿಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳು ಮಾತ್ರ ಇದೆ” ಎಂದು ಅವರು ಹೇಳಿದ್ದಾರೆ.

ಈ ನಡುವೆ, ಪಕ್ಷಾಂತರದ ಬಗ್ಗೆ ಎನ್‌ಡಿಟಿವಿ ಜೊತೆಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಅವರು, ಈ ಬಾರಿ ಕಾಂಗ್ರೆಸ್‌‌ ಮನೆಗೆ ಕನ್ನ ಹಾಕಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...