Homeಮುಖಪುಟಗೋವಾ: ಅಧಿಕಾರಕ್ಕಾಗಿ ಟಿಎಂಸಿ ಮಿತ್ರ ಪಕ್ಷ ಎಂಜಿಪಿ ಜೊತೆ ಚರ್ಚೆ ಆರಂಭಿಸಿದ ಬಿಜೆಪಿ!

ಗೋವಾ: ಅಧಿಕಾರಕ್ಕಾಗಿ ಟಿಎಂಸಿ ಮಿತ್ರ ಪಕ್ಷ ಎಂಜಿಪಿ ಜೊತೆ ಚರ್ಚೆ ಆರಂಭಿಸಿದ ಬಿಜೆಪಿ!

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಇನ್ನೆರಡು ದಿನಗಳು ಬಾಕಿ ಇದೆ. ಇದೇ ವೇಳೆ ಹೆಚ್ಚಿನ ಎಕ್ಸಿಟ್‌ ಪೂಲ್‌ಗಳು ಗೋವಾದಲ್ಲಿ ಅತಂತ್ರ ಸ್ಥಿತಿ ಉಂಟಾಗಲಿದೆ ಎಂದು ಭವಿಷ್ಯ ನುಡಿದಿದೆ. ಈ ಹಿನ್ನಲೆಯಲ್ಲಿ ಅಧಿಕಾರ ಹಿಡಿಯುವ ಸಂಖ್ಯೆಯ ಬೆಂಬಲಕ್ಕಾಗಿ ಬಿಜೆಪಿ ಕಾರ್ಯಪ್ರವೃತ್ತವಾಗಿದೆ.

ಒಂದು ವೇಳೆ ಅಧಿಕಾರಕ್ಕೆ ಬರಲು ಸಂಖ್ಯಾಬಲ ಕಡಿಮೆಯಾದರೆ ಸರ್ಕಾರ ರಚಿಸುವ ಸಂಖ್ಯೆಯ ಬೆಂಬಲ ಪಡೆಯಲು ಕೇಂದ್ರದ ನಾಯಕತ್ವವು ಈಗಾಗಲೇ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಯೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಸಾವಂತ್, “ಬಿಜೆಪಿಯು 22 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಆಶಾವಾದದಲ್ಲಿದೆ (ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ). ಆದರೆ ಒಂದು ವೇಳೆ ಸಂಖ್ಯಾಬಲದ ಕೊರತೆಯಾದರೆ, ಪಕ್ಷೇತರರು ಮತ್ತು ಎಂಜಿಪಿಯೊಂದಿಗೆ ಪಕ್ಷವು ಬೆಂಬಲವನ್ನು ಪಡೆಯುವ ಆಯ್ಕೆಯನ್ನು ಸಹ ಮುಂದಿಟ್ಟಿದೆ” ಎಂದು ಹೇಳಿದ್ದಾರೆ.

ಚುನಾವಣೋತ್ತರ ಮೈತ್ರಿಗಾಗಿ ಕೇಂದ್ರ ಬಿಜೆಪಿ ನಾಯಕತ್ವವು ಎಂಜಿಪಿ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, 13 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ, ದೀಪಕ್ ಧವಲಿಕರ್ ನೇತೃತ್ವದ ಎಂಜಿಪಿ (ಗೋವಾದ ಅತ್ಯಂತ ಹಳೆಯ ಪ್ರಾದೇಶಿಕ ಸಂಘಟನೆ), ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಸ್ವತಂತ್ರ ಪಕ್ಷಗಳೊಂದಿಗೆ ತ್ವರಿತವಾಗಿ ಮೈತ್ರಿ ಮಾಡಿಕೊಂಡು ಮನೋಹರ್ ಪರಿಕ್ಕರ್ ನೇತೃತ್ವದ ಸರ್ಕಾರವನ್ನು ರಚಿಸಿತ್ತು.

2019 ರಲ್ಲಿ, ಪರಿಕ್ಕರ್ ಅವರ ನಿಧನದ ನಂತರ ಸಾವಂತ್ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ್ದರು. ಈ ವೇಳೆ ಇಬ್ಬರು ಎಂಜಿಪಿ ಮಂತ್ರಿಗಳನ್ನು ರಾಜ್ಯ ಸಂಪುಟದಿಂದ ಕೈಬಿಡಲಾಗಿತ್ತು.

ಈ ಬಾರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ಮೈತ್ರಿ ಮಾಡಿಕೊಂಡು ಎಂಜಿಪಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದೆ.

ಗೋವಾ ಚುನಾವಣಾ ಫಲಿತಾಂಶದ ನಂತರ ಟಿಎಂಸಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ತಮ್ಮ ಪಕ್ಷವು ತನ್ನ ನಿಲುವನ್ನು ನಿರ್ಧರಿಸುತ್ತದೆ ಆದರೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಎಂಜಿಪಿ ಶಾಸಕ ಸುದಿನ್ ಧವಲಿಕರ್ ಶನಿವಾರ ಹೇಳಿದ್ದಾರೆ.

ಸಾವಂತ್‌‌ ತಮ್ಮ ಸಂಪುಟದಿಂದ ಎಂಜಿಪಿ ಸಚಿವರನ್ನು ವಜಾಗೊಳಿಸಿದ್ದರು ಎಂದು ಹೇಳಿರುವ ಸುದಿನ್‌‌ ಅವರು ಹೇಳಿದ್ದಾರೆ. ಆದರೆ ಮತ್ತೆ ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿಲ್ಲ.

ಸುದಿನ್ ಧವಲಿಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಾವಂತ್, “ಯಾವುದೇ ಪಕ್ಷ ನಮಗೆ ಬೆಂಬಲ ನೀಡಿದರೂ ನಮ್ಮ ನಾಯಕತ್ವದ ಬಗ್ಗೆ ಅವರು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. 2017 ರ ಗೋವಾ ಚುನಾವಣೆಯಲ್ಲಿ ಮತ್ತು ಈ ವರ್ಷದ ಚುನಾವಣೆಗಳಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದು ಎಂಜಿಪಿಯಾಗಿದೆ” ಎಂದು ಹೇಳಿದ್ದಾರೆ.

2019ರಲ್ಲಿ ನಡೆದ ಉಪಚುನಾವಣೆಯಲ್ಲಿ ನಮ್ಮ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದರಿಂದ ಎಂಜಿಪಿಯನ್ನು ಸರ್ಕಾರದಿಂದ ಕೈಬಿಡಲಾಗಿದೆ ಎಂದು ಸಿಎಂ ಹೇಳಿದ್ದಾರೆ. “ಧವಲಿಕರ್ ಸಹೋದರರೊಂದಿಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳು ಮಾತ್ರ ಇದೆ” ಎಂದು ಅವರು ಹೇಳಿದ್ದಾರೆ.

ಈ ನಡುವೆ, ಪಕ್ಷಾಂತರದ ಬಗ್ಗೆ ಎನ್‌ಡಿಟಿವಿ ಜೊತೆಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಅವರು, ಈ ಬಾರಿ ಕಾಂಗ್ರೆಸ್‌‌ ಮನೆಗೆ ಕನ್ನ ಹಾಕಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...