Homeಮುಖಪುಟಗೋವಾ: ಅಧಿಕಾರಕ್ಕಾಗಿ ಟಿಎಂಸಿ ಮಿತ್ರ ಪಕ್ಷ ಎಂಜಿಪಿ ಜೊತೆ ಚರ್ಚೆ ಆರಂಭಿಸಿದ ಬಿಜೆಪಿ!

ಗೋವಾ: ಅಧಿಕಾರಕ್ಕಾಗಿ ಟಿಎಂಸಿ ಮಿತ್ರ ಪಕ್ಷ ಎಂಜಿಪಿ ಜೊತೆ ಚರ್ಚೆ ಆರಂಭಿಸಿದ ಬಿಜೆಪಿ!

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಇನ್ನೆರಡು ದಿನಗಳು ಬಾಕಿ ಇದೆ. ಇದೇ ವೇಳೆ ಹೆಚ್ಚಿನ ಎಕ್ಸಿಟ್‌ ಪೂಲ್‌ಗಳು ಗೋವಾದಲ್ಲಿ ಅತಂತ್ರ ಸ್ಥಿತಿ ಉಂಟಾಗಲಿದೆ ಎಂದು ಭವಿಷ್ಯ ನುಡಿದಿದೆ. ಈ ಹಿನ್ನಲೆಯಲ್ಲಿ ಅಧಿಕಾರ ಹಿಡಿಯುವ ಸಂಖ್ಯೆಯ ಬೆಂಬಲಕ್ಕಾಗಿ ಬಿಜೆಪಿ ಕಾರ್ಯಪ್ರವೃತ್ತವಾಗಿದೆ.

ಒಂದು ವೇಳೆ ಅಧಿಕಾರಕ್ಕೆ ಬರಲು ಸಂಖ್ಯಾಬಲ ಕಡಿಮೆಯಾದರೆ ಸರ್ಕಾರ ರಚಿಸುವ ಸಂಖ್ಯೆಯ ಬೆಂಬಲ ಪಡೆಯಲು ಕೇಂದ್ರದ ನಾಯಕತ್ವವು ಈಗಾಗಲೇ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಯೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಸಾವಂತ್, “ಬಿಜೆಪಿಯು 22 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಆಶಾವಾದದಲ್ಲಿದೆ (ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ). ಆದರೆ ಒಂದು ವೇಳೆ ಸಂಖ್ಯಾಬಲದ ಕೊರತೆಯಾದರೆ, ಪಕ್ಷೇತರರು ಮತ್ತು ಎಂಜಿಪಿಯೊಂದಿಗೆ ಪಕ್ಷವು ಬೆಂಬಲವನ್ನು ಪಡೆಯುವ ಆಯ್ಕೆಯನ್ನು ಸಹ ಮುಂದಿಟ್ಟಿದೆ” ಎಂದು ಹೇಳಿದ್ದಾರೆ.

ಚುನಾವಣೋತ್ತರ ಮೈತ್ರಿಗಾಗಿ ಕೇಂದ್ರ ಬಿಜೆಪಿ ನಾಯಕತ್ವವು ಎಂಜಿಪಿ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, 13 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ, ದೀಪಕ್ ಧವಲಿಕರ್ ನೇತೃತ್ವದ ಎಂಜಿಪಿ (ಗೋವಾದ ಅತ್ಯಂತ ಹಳೆಯ ಪ್ರಾದೇಶಿಕ ಸಂಘಟನೆ), ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಸ್ವತಂತ್ರ ಪಕ್ಷಗಳೊಂದಿಗೆ ತ್ವರಿತವಾಗಿ ಮೈತ್ರಿ ಮಾಡಿಕೊಂಡು ಮನೋಹರ್ ಪರಿಕ್ಕರ್ ನೇತೃತ್ವದ ಸರ್ಕಾರವನ್ನು ರಚಿಸಿತ್ತು.

2019 ರಲ್ಲಿ, ಪರಿಕ್ಕರ್ ಅವರ ನಿಧನದ ನಂತರ ಸಾವಂತ್ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ್ದರು. ಈ ವೇಳೆ ಇಬ್ಬರು ಎಂಜಿಪಿ ಮಂತ್ರಿಗಳನ್ನು ರಾಜ್ಯ ಸಂಪುಟದಿಂದ ಕೈಬಿಡಲಾಗಿತ್ತು.

ಈ ಬಾರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ಮೈತ್ರಿ ಮಾಡಿಕೊಂಡು ಎಂಜಿಪಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದೆ.

ಗೋವಾ ಚುನಾವಣಾ ಫಲಿತಾಂಶದ ನಂತರ ಟಿಎಂಸಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ತಮ್ಮ ಪಕ್ಷವು ತನ್ನ ನಿಲುವನ್ನು ನಿರ್ಧರಿಸುತ್ತದೆ ಆದರೆ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಎಂಜಿಪಿ ಶಾಸಕ ಸುದಿನ್ ಧವಲಿಕರ್ ಶನಿವಾರ ಹೇಳಿದ್ದಾರೆ.

ಸಾವಂತ್‌‌ ತಮ್ಮ ಸಂಪುಟದಿಂದ ಎಂಜಿಪಿ ಸಚಿವರನ್ನು ವಜಾಗೊಳಿಸಿದ್ದರು ಎಂದು ಹೇಳಿರುವ ಸುದಿನ್‌‌ ಅವರು ಹೇಳಿದ್ದಾರೆ. ಆದರೆ ಮತ್ತೆ ಬಿಜೆಪಿಯನ್ನು ಬೆಂಬಲಿಸುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿಲ್ಲ.

ಸುದಿನ್ ಧವಲಿಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಾವಂತ್, “ಯಾವುದೇ ಪಕ್ಷ ನಮಗೆ ಬೆಂಬಲ ನೀಡಿದರೂ ನಮ್ಮ ನಾಯಕತ್ವದ ಬಗ್ಗೆ ಅವರು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. 2017 ರ ಗೋವಾ ಚುನಾವಣೆಯಲ್ಲಿ ಮತ್ತು ಈ ವರ್ಷದ ಚುನಾವಣೆಗಳಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದು ಎಂಜಿಪಿಯಾಗಿದೆ” ಎಂದು ಹೇಳಿದ್ದಾರೆ.

2019ರಲ್ಲಿ ನಡೆದ ಉಪಚುನಾವಣೆಯಲ್ಲಿ ನಮ್ಮ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದರಿಂದ ಎಂಜಿಪಿಯನ್ನು ಸರ್ಕಾರದಿಂದ ಕೈಬಿಡಲಾಗಿದೆ ಎಂದು ಸಿಎಂ ಹೇಳಿದ್ದಾರೆ. “ಧವಲಿಕರ್ ಸಹೋದರರೊಂದಿಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳು ಮಾತ್ರ ಇದೆ” ಎಂದು ಅವರು ಹೇಳಿದ್ದಾರೆ.

ಈ ನಡುವೆ, ಪಕ್ಷಾಂತರದ ಬಗ್ಗೆ ಎನ್‌ಡಿಟಿವಿ ಜೊತೆಗೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಅವರು, ಈ ಬಾರಿ ಕಾಂಗ್ರೆಸ್‌‌ ಮನೆಗೆ ಕನ್ನ ಹಾಕಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಮಗ ಬಿಜೆಪಿಗೆ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...