Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

- Advertisement -
- Advertisement -

ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಸಿದ ಬೆನ್ನಿಗೆ ಸಚಿವ ಸ್ಥಾನಕ್ಕೆ ಮಿಲಿಂದ್ ನಾಯಕ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾದ ನಗರಾಭಿವೃದ್ಧಿ ಸಚಿವರಾಗಿದ್ದ ನಾಯಕ್ ಅವರು ಬುಧವಾರ ಪಣಜಿಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ಬಳಿಕ ರಾಜ್ಯ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ನಾಯಕ್ ಅವರು ಸಂಪುಟ ಸದಸ್ಯರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ಬಿಹಾರದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್ ಆರೋಪಿಸಿದ್ದರು.

“ಅದು ಅಪರಾಧವೋ ಅಥವಾ ಇಲ್ಲವೋ ಎಂಬುದು ಬೇರೆ ವಿಷಯ. ಆದರೆ ಸಚಿವರೊಬ್ಬರು ತಮ್ಮ ಅಧಿಕಾರ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದಾರೆ. ಇಂತಹ ಸಚಿವರು ಗೋವಾ ಮತ್ತು ಗೋವಾ ಜನರಿಗೆ ಅವಮಾನ. ಕೂಡಲೇ ಅವರನ್ನು ವಜಾಗೊಳಿಸಬೇಕು. ಮಹಿಳೆಯರನ್ನು ಶೋಷಿಸುವ ಮಿಲಿಂದ್ ನಾಯಕ್ ಅವರಂತಹ ಸಚಿವರಿಗೆ ಸ್ಥಾನವಿಲ್ಲ ಎಂಬುದನ್ನು ಸರ್ಕಾರ ಗೋವಾದ ಜನತೆಗೆ ತೋರಿಸಬೇಕು” ಎಂದು ಅವರು ಒತ್ತಾಯಿಸಿದ್ದರು.

ಸಂತ್ರಸ್ತ ಮಹಿಳೆ ಮತ್ತು ಶಾಸಕರ ನಡುವಿನ ಸಂಭಾಷಣೆಯ ಆಡಿಯೊವನ್ನು ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಸಂಕಲ್ಪ್ ಅಮೋನ್ಕರ್ ಅವರು ಬಿಡುಗಡೆ ಮಾಡಿದ್ದು, ನಾಯಕ್ ವಿರುದ್ಧ ಪೊಲೀಸ್ ದೂರನ್ನೂ ದಾಖಲಿಸಿದ್ದಾರೆ.

“ಪ್ರಕರಣದ ಮುಕ್ತ ಮತ್ತು ನ್ಯಾಯಯುತ ತನಿಖೆಗಾಗಿ ನಾಯಕ್ ರಾಜೀನಾಮೆ ನೀಡಿದ್ದಾರೆ. ನಾನು ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಅದನ್ನು ರಾಜ್ಯಪಾಲರಿಗೂ ಕಳುಹಿಸಿದ್ದೇನೆ. ಕಾಂಗ್ರೆಸ್ ಯಾವುದೇ ಸಾಕ್ಷ್ಯವನ್ನು ನೀಡಿದ್ದರೂ ನಾವು ತನಿಖೆ ನಡೆಸುತ್ತೇವೆ” ಎಂದು ಸಿಎಂ ಸಾವಂತ್ ಹೇಳಿದ್ದಾರೆ.  

ಈ ಪ್ರಕರಣದ ವಿರುದ್ಧ ವೈಯಕ್ತಿಕ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ನಾಯಕ್ ಹೇಳಿದ್ದಾರೆ. ಅವರ ವಿರುದ್ಧ ಮಾಡಿರುವ ಆರೋಪಗಳು ವೈಯಕ್ತಿಕವಾಗಿದ್ದು, ಅದರ ಬಗ್ಗೆ ಅವರು ಏನು ಮಾಡುತ್ತಾರೆ ಎಂಬುದು ಅವರ ವೈಯಕ್ತಿಕ ನಿರ್ಧಾರದ ವಿಷಯವಾಗಿದೆ ಎಂದು ಗೋವಾ ಸಿಎಂ ತಿಳಿಸಿದ್ದಾರೆ. 

ಕ್ಯಾಬಿನೆಟ್ ಹುದ್ದೆ ಖಾಲಿಯಾಗಿರುತ್ತದೆ. ಆದರೆ ಸದ್ಯಕ್ಕೆ ಆ ಹುದ್ದೆಗೆ ಹೊಸ ಸೇರ್ಪಡೆ ಇರುವುದಿಲ್ಲ. ಅವರು ನಿಭಾಯಿಸುತ್ತಿದ್ದ ಖಾತೆಗಳನ್ನು ನಾನೇ ನಿಭಾಯಿಸುತ್ತೇನೆ ಎಂದು ಸಾವಂತ್ ಹೇಳಿದ್ದಾರೆ.

ಫೆಬ್ರವರಿ 2022 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ನಾಯಕ್ ವಿರುದ್ಧದ ಆರೋಪದ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಬೇಕು ಎಂದು ಕಾಂಗ್ರೆಸ್‌ ನಾಯಕ ಚೋಡಂಕರ್ ಒತ್ತಾಯಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಡಿಸೆಂಬರ್ 10 ರಂದು ಬಿಹಾರದ ಮಹಿಳೆಯೊಬ್ಬರು ಅಮೋನ್ಕರ್ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಸುಲಿಗೆ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಪಿತೂರಿಗಾಗಿ ಪ್ರಕರಣ ದಾಖಲಿಸಿದ್ದರು. ಮಂಗಳವಾರ ಪ್ರಕರಣವನ್ನು ಗೋವಾ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಏತನ್ಮಧ್ಯೆ, ಅಮೋನ್ಕರ್ ಮತ್ತು ಇತರ ಕಾಂಗ್ರೆಸ್ ನಾಯಕರು ನಾಯಕ್ ವಿರುದ್ಧ ಪಣಜಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರ ದಾಖಲಿಸಿದ್ದಾರೆ. ಸಚಿವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಗರ್ಭಪಾತ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಸಾಬೀತುಪಡಿಸುವ ಸೆಲ್ ಫೋನ್ ದಾಖಲೆಗಳು ಮತ್ತು ಇತರ ಪುರಾವೆಗಳನ್ನು ಅವರು ಒದಗಿಸಿದ್ದಾರೆ. 

“ನಾವು ನಾಯಕ್ ವಿರುದ್ಧ ಮಹಿಳೆಯ ಮೂಲ ಫೋನ್ ಎಲ್ಲಾ ಸಾಕ್ಷ್ಯಗಳನ್ನು ನಾವು ಪೊಲೀಸರಿಗೆ ಸಲ್ಲಿಸಿದ್ದೇವೆ. ನಮ್ಮ ವಿರುದ್ಧ ದೂರು ದಾಖಲಿಸುವಂತೆ ಸಂತ್ರಸ್ತೆಗೆ ಒತ್ತಾಯಿಸಲಾಗಿದೆ. ನಾನು ಪೊಲೀಸರೊಂದಿಗೆ ಸಹಕರಿಸಲು ಸಿದ್ಧನಿದ್ದೇನೆ” ಎಂದು ಅಮೋನ್ಕರ್ ಹೇಳಿದ್ದಾರೆ.

ಸಂತ್ರಸ್ತ ಮಹಿಳೆಯು 2019ರ ನವೆಂಬರ್‌ನಲ್ಲಿ ನಮ್ಮನ್ನು ಸಂಪರ್ಕಿಸಿದ್ದರು. ಅವರು ನಮಗೆ ವಾಟ್ಸಾಪ್ ಚಾಟ್‌ಗಳು, ವಿಡಿಯೋ ಮತ್ತು ಆಡಿಯೋವನ್ನು ತೋರಿಸಿದರು. ನಾನು ಅದನ್ನು ಮೊದಲು ನೋಡಿದಾಗ ನನಗೆ ತುಂಬಾ ಕೋಪ ಬಂದಿತು. ಉದ್ಯೋಗದ ಭರವಸೆ ನೀಡಿ ತನ್ನನ್ನು ಬಳಸಿಕೊಳ್ಳಲಾಗಿದೆ, ಶೋಷಣೆ ಮಾಡಲಾಗಿದೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಆಕೆ ಹೇಳಿಕೊಂಡಿದದರು ಎಂದು ಅಮೋನ್ಕರ್ ಹೇಳಿದ್ದಾರೆ.

ಐದು ತಿಂಗಳ ಹಿಂದೆ, ತನಗೆ ಮತ್ತು ತನ್ನ ಮಗುವಿಗೆ ಭಯವಾಗುತ್ತಿದೆ ಎಂದು ಹೇಳಿದ್ದ ಮಹಿಳೆ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

2015-16ರಲ್ಲಿ ಮಹಿಳೆ ಮತ್ತು ನಾಯಕ್ ನಡುವೆ ಸಂಭಾಷಣೆ ನಡೆದಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದೇಶದಲ್ಲಿ ಯುವತಿಯರ ಮದುವೆಯ ವಯಸ್ಸು 21 ಕ್ಕೆ ಏರಿಕೆ: ಇತರ ದೇಶಗಳಲ್ಲಿ ಮದುವೆ ವಯಸ್ಸು ಹೇಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...