Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

- Advertisement -
- Advertisement -

ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಸಿದ ಬೆನ್ನಿಗೆ ಸಚಿವ ಸ್ಥಾನಕ್ಕೆ ಮಿಲಿಂದ್ ನಾಯಕ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾದ ನಗರಾಭಿವೃದ್ಧಿ ಸಚಿವರಾಗಿದ್ದ ನಾಯಕ್ ಅವರು ಬುಧವಾರ ಪಣಜಿಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ಬಳಿಕ ರಾಜ್ಯ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ನಾಯಕ್ ಅವರು ಸಂಪುಟ ಸದಸ್ಯರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ಬಿಹಾರದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್ ಆರೋಪಿಸಿದ್ದರು.

“ಅದು ಅಪರಾಧವೋ ಅಥವಾ ಇಲ್ಲವೋ ಎಂಬುದು ಬೇರೆ ವಿಷಯ. ಆದರೆ ಸಚಿವರೊಬ್ಬರು ತಮ್ಮ ಅಧಿಕಾರ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದಾರೆ. ಇಂತಹ ಸಚಿವರು ಗೋವಾ ಮತ್ತು ಗೋವಾ ಜನರಿಗೆ ಅವಮಾನ. ಕೂಡಲೇ ಅವರನ್ನು ವಜಾಗೊಳಿಸಬೇಕು. ಮಹಿಳೆಯರನ್ನು ಶೋಷಿಸುವ ಮಿಲಿಂದ್ ನಾಯಕ್ ಅವರಂತಹ ಸಚಿವರಿಗೆ ಸ್ಥಾನವಿಲ್ಲ ಎಂಬುದನ್ನು ಸರ್ಕಾರ ಗೋವಾದ ಜನತೆಗೆ ತೋರಿಸಬೇಕು” ಎಂದು ಅವರು ಒತ್ತಾಯಿಸಿದ್ದರು.

ಸಂತ್ರಸ್ತ ಮಹಿಳೆ ಮತ್ತು ಶಾಸಕರ ನಡುವಿನ ಸಂಭಾಷಣೆಯ ಆಡಿಯೊವನ್ನು ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಸಂಕಲ್ಪ್ ಅಮೋನ್ಕರ್ ಅವರು ಬಿಡುಗಡೆ ಮಾಡಿದ್ದು, ನಾಯಕ್ ವಿರುದ್ಧ ಪೊಲೀಸ್ ದೂರನ್ನೂ ದಾಖಲಿಸಿದ್ದಾರೆ.

“ಪ್ರಕರಣದ ಮುಕ್ತ ಮತ್ತು ನ್ಯಾಯಯುತ ತನಿಖೆಗಾಗಿ ನಾಯಕ್ ರಾಜೀನಾಮೆ ನೀಡಿದ್ದಾರೆ. ನಾನು ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಅದನ್ನು ರಾಜ್ಯಪಾಲರಿಗೂ ಕಳುಹಿಸಿದ್ದೇನೆ. ಕಾಂಗ್ರೆಸ್ ಯಾವುದೇ ಸಾಕ್ಷ್ಯವನ್ನು ನೀಡಿದ್ದರೂ ನಾವು ತನಿಖೆ ನಡೆಸುತ್ತೇವೆ” ಎಂದು ಸಿಎಂ ಸಾವಂತ್ ಹೇಳಿದ್ದಾರೆ.  

ಈ ಪ್ರಕರಣದ ವಿರುದ್ಧ ವೈಯಕ್ತಿಕ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ನಾಯಕ್ ಹೇಳಿದ್ದಾರೆ. ಅವರ ವಿರುದ್ಧ ಮಾಡಿರುವ ಆರೋಪಗಳು ವೈಯಕ್ತಿಕವಾಗಿದ್ದು, ಅದರ ಬಗ್ಗೆ ಅವರು ಏನು ಮಾಡುತ್ತಾರೆ ಎಂಬುದು ಅವರ ವೈಯಕ್ತಿಕ ನಿರ್ಧಾರದ ವಿಷಯವಾಗಿದೆ ಎಂದು ಗೋವಾ ಸಿಎಂ ತಿಳಿಸಿದ್ದಾರೆ. 

ಕ್ಯಾಬಿನೆಟ್ ಹುದ್ದೆ ಖಾಲಿಯಾಗಿರುತ್ತದೆ. ಆದರೆ ಸದ್ಯಕ್ಕೆ ಆ ಹುದ್ದೆಗೆ ಹೊಸ ಸೇರ್ಪಡೆ ಇರುವುದಿಲ್ಲ. ಅವರು ನಿಭಾಯಿಸುತ್ತಿದ್ದ ಖಾತೆಗಳನ್ನು ನಾನೇ ನಿಭಾಯಿಸುತ್ತೇನೆ ಎಂದು ಸಾವಂತ್ ಹೇಳಿದ್ದಾರೆ.

ಫೆಬ್ರವರಿ 2022 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ನಾಯಕ್ ವಿರುದ್ಧದ ಆರೋಪದ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಬೇಕು ಎಂದು ಕಾಂಗ್ರೆಸ್‌ ನಾಯಕ ಚೋಡಂಕರ್ ಒತ್ತಾಯಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಡಿಸೆಂಬರ್ 10 ರಂದು ಬಿಹಾರದ ಮಹಿಳೆಯೊಬ್ಬರು ಅಮೋನ್ಕರ್ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಸುಲಿಗೆ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಪಿತೂರಿಗಾಗಿ ಪ್ರಕರಣ ದಾಖಲಿಸಿದ್ದರು. ಮಂಗಳವಾರ ಪ್ರಕರಣವನ್ನು ಗೋವಾ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಏತನ್ಮಧ್ಯೆ, ಅಮೋನ್ಕರ್ ಮತ್ತು ಇತರ ಕಾಂಗ್ರೆಸ್ ನಾಯಕರು ನಾಯಕ್ ವಿರುದ್ಧ ಪಣಜಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರ ದಾಖಲಿಸಿದ್ದಾರೆ. ಸಚಿವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಗರ್ಭಪಾತ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಸಾಬೀತುಪಡಿಸುವ ಸೆಲ್ ಫೋನ್ ದಾಖಲೆಗಳು ಮತ್ತು ಇತರ ಪುರಾವೆಗಳನ್ನು ಅವರು ಒದಗಿಸಿದ್ದಾರೆ. 

“ನಾವು ನಾಯಕ್ ವಿರುದ್ಧ ಮಹಿಳೆಯ ಮೂಲ ಫೋನ್ ಎಲ್ಲಾ ಸಾಕ್ಷ್ಯಗಳನ್ನು ನಾವು ಪೊಲೀಸರಿಗೆ ಸಲ್ಲಿಸಿದ್ದೇವೆ. ನಮ್ಮ ವಿರುದ್ಧ ದೂರು ದಾಖಲಿಸುವಂತೆ ಸಂತ್ರಸ್ತೆಗೆ ಒತ್ತಾಯಿಸಲಾಗಿದೆ. ನಾನು ಪೊಲೀಸರೊಂದಿಗೆ ಸಹಕರಿಸಲು ಸಿದ್ಧನಿದ್ದೇನೆ” ಎಂದು ಅಮೋನ್ಕರ್ ಹೇಳಿದ್ದಾರೆ.

ಸಂತ್ರಸ್ತ ಮಹಿಳೆಯು 2019ರ ನವೆಂಬರ್‌ನಲ್ಲಿ ನಮ್ಮನ್ನು ಸಂಪರ್ಕಿಸಿದ್ದರು. ಅವರು ನಮಗೆ ವಾಟ್ಸಾಪ್ ಚಾಟ್‌ಗಳು, ವಿಡಿಯೋ ಮತ್ತು ಆಡಿಯೋವನ್ನು ತೋರಿಸಿದರು. ನಾನು ಅದನ್ನು ಮೊದಲು ನೋಡಿದಾಗ ನನಗೆ ತುಂಬಾ ಕೋಪ ಬಂದಿತು. ಉದ್ಯೋಗದ ಭರವಸೆ ನೀಡಿ ತನ್ನನ್ನು ಬಳಸಿಕೊಳ್ಳಲಾಗಿದೆ, ಶೋಷಣೆ ಮಾಡಲಾಗಿದೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಆಕೆ ಹೇಳಿಕೊಂಡಿದದರು ಎಂದು ಅಮೋನ್ಕರ್ ಹೇಳಿದ್ದಾರೆ.

ಐದು ತಿಂಗಳ ಹಿಂದೆ, ತನಗೆ ಮತ್ತು ತನ್ನ ಮಗುವಿಗೆ ಭಯವಾಗುತ್ತಿದೆ ಎಂದು ಹೇಳಿದ್ದ ಮಹಿಳೆ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

2015-16ರಲ್ಲಿ ಮಹಿಳೆ ಮತ್ತು ನಾಯಕ್ ನಡುವೆ ಸಂಭಾಷಣೆ ನಡೆದಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದೇಶದಲ್ಲಿ ಯುವತಿಯರ ಮದುವೆಯ ವಯಸ್ಸು 21 ಕ್ಕೆ ಏರಿಕೆ: ಇತರ ದೇಶಗಳಲ್ಲಿ ಮದುವೆ ವಯಸ್ಸು ಹೇಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...