Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

- Advertisement -
- Advertisement -

ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಸಿದ ಬೆನ್ನಿಗೆ ಸಚಿವ ಸ್ಥಾನಕ್ಕೆ ಮಿಲಿಂದ್ ನಾಯಕ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾದ ನಗರಾಭಿವೃದ್ಧಿ ಸಚಿವರಾಗಿದ್ದ ನಾಯಕ್ ಅವರು ಬುಧವಾರ ಪಣಜಿಯಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ಬಳಿಕ ರಾಜ್ಯ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ನಾಯಕ್ ಅವರು ಸಂಪುಟ ಸದಸ್ಯರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ಬಿಹಾರದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್ ಆರೋಪಿಸಿದ್ದರು.

“ಅದು ಅಪರಾಧವೋ ಅಥವಾ ಇಲ್ಲವೋ ಎಂಬುದು ಬೇರೆ ವಿಷಯ. ಆದರೆ ಸಚಿವರೊಬ್ಬರು ತಮ್ಮ ಅಧಿಕಾರ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದಾರೆ. ಇಂತಹ ಸಚಿವರು ಗೋವಾ ಮತ್ತು ಗೋವಾ ಜನರಿಗೆ ಅವಮಾನ. ಕೂಡಲೇ ಅವರನ್ನು ವಜಾಗೊಳಿಸಬೇಕು. ಮಹಿಳೆಯರನ್ನು ಶೋಷಿಸುವ ಮಿಲಿಂದ್ ನಾಯಕ್ ಅವರಂತಹ ಸಚಿವರಿಗೆ ಸ್ಥಾನವಿಲ್ಲ ಎಂಬುದನ್ನು ಸರ್ಕಾರ ಗೋವಾದ ಜನತೆಗೆ ತೋರಿಸಬೇಕು” ಎಂದು ಅವರು ಒತ್ತಾಯಿಸಿದ್ದರು.

ಸಂತ್ರಸ್ತ ಮಹಿಳೆ ಮತ್ತು ಶಾಸಕರ ನಡುವಿನ ಸಂಭಾಷಣೆಯ ಆಡಿಯೊವನ್ನು ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಸಂಕಲ್ಪ್ ಅಮೋನ್ಕರ್ ಅವರು ಬಿಡುಗಡೆ ಮಾಡಿದ್ದು, ನಾಯಕ್ ವಿರುದ್ಧ ಪೊಲೀಸ್ ದೂರನ್ನೂ ದಾಖಲಿಸಿದ್ದಾರೆ.

“ಪ್ರಕರಣದ ಮುಕ್ತ ಮತ್ತು ನ್ಯಾಯಯುತ ತನಿಖೆಗಾಗಿ ನಾಯಕ್ ರಾಜೀನಾಮೆ ನೀಡಿದ್ದಾರೆ. ನಾನು ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಅದನ್ನು ರಾಜ್ಯಪಾಲರಿಗೂ ಕಳುಹಿಸಿದ್ದೇನೆ. ಕಾಂಗ್ರೆಸ್ ಯಾವುದೇ ಸಾಕ್ಷ್ಯವನ್ನು ನೀಡಿದ್ದರೂ ನಾವು ತನಿಖೆ ನಡೆಸುತ್ತೇವೆ” ಎಂದು ಸಿಎಂ ಸಾವಂತ್ ಹೇಳಿದ್ದಾರೆ.  

ಈ ಪ್ರಕರಣದ ವಿರುದ್ಧ ವೈಯಕ್ತಿಕ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ನಾಯಕ್ ಹೇಳಿದ್ದಾರೆ. ಅವರ ವಿರುದ್ಧ ಮಾಡಿರುವ ಆರೋಪಗಳು ವೈಯಕ್ತಿಕವಾಗಿದ್ದು, ಅದರ ಬಗ್ಗೆ ಅವರು ಏನು ಮಾಡುತ್ತಾರೆ ಎಂಬುದು ಅವರ ವೈಯಕ್ತಿಕ ನಿರ್ಧಾರದ ವಿಷಯವಾಗಿದೆ ಎಂದು ಗೋವಾ ಸಿಎಂ ತಿಳಿಸಿದ್ದಾರೆ. 

ಕ್ಯಾಬಿನೆಟ್ ಹುದ್ದೆ ಖಾಲಿಯಾಗಿರುತ್ತದೆ. ಆದರೆ ಸದ್ಯಕ್ಕೆ ಆ ಹುದ್ದೆಗೆ ಹೊಸ ಸೇರ್ಪಡೆ ಇರುವುದಿಲ್ಲ. ಅವರು ನಿಭಾಯಿಸುತ್ತಿದ್ದ ಖಾತೆಗಳನ್ನು ನಾನೇ ನಿಭಾಯಿಸುತ್ತೇನೆ ಎಂದು ಸಾವಂತ್ ಹೇಳಿದ್ದಾರೆ.

ಫೆಬ್ರವರಿ 2022 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ನಾಯಕ್ ವಿರುದ್ಧದ ಆರೋಪದ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಬೇಕು ಎಂದು ಕಾಂಗ್ರೆಸ್‌ ನಾಯಕ ಚೋಡಂಕರ್ ಒತ್ತಾಯಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಡಿಸೆಂಬರ್ 10 ರಂದು ಬಿಹಾರದ ಮಹಿಳೆಯೊಬ್ಬರು ಅಮೋನ್ಕರ್ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಸುಲಿಗೆ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಪಿತೂರಿಗಾಗಿ ಪ್ರಕರಣ ದಾಖಲಿಸಿದ್ದರು. ಮಂಗಳವಾರ ಪ್ರಕರಣವನ್ನು ಗೋವಾ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಏತನ್ಮಧ್ಯೆ, ಅಮೋನ್ಕರ್ ಮತ್ತು ಇತರ ಕಾಂಗ್ರೆಸ್ ನಾಯಕರು ನಾಯಕ್ ವಿರುದ್ಧ ಪಣಜಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರ ದಾಖಲಿಸಿದ್ದಾರೆ. ಸಚಿವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಗರ್ಭಪಾತ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಸಾಬೀತುಪಡಿಸುವ ಸೆಲ್ ಫೋನ್ ದಾಖಲೆಗಳು ಮತ್ತು ಇತರ ಪುರಾವೆಗಳನ್ನು ಅವರು ಒದಗಿಸಿದ್ದಾರೆ. 

“ನಾವು ನಾಯಕ್ ವಿರುದ್ಧ ಮಹಿಳೆಯ ಮೂಲ ಫೋನ್ ಎಲ್ಲಾ ಸಾಕ್ಷ್ಯಗಳನ್ನು ನಾವು ಪೊಲೀಸರಿಗೆ ಸಲ್ಲಿಸಿದ್ದೇವೆ. ನಮ್ಮ ವಿರುದ್ಧ ದೂರು ದಾಖಲಿಸುವಂತೆ ಸಂತ್ರಸ್ತೆಗೆ ಒತ್ತಾಯಿಸಲಾಗಿದೆ. ನಾನು ಪೊಲೀಸರೊಂದಿಗೆ ಸಹಕರಿಸಲು ಸಿದ್ಧನಿದ್ದೇನೆ” ಎಂದು ಅಮೋನ್ಕರ್ ಹೇಳಿದ್ದಾರೆ.

ಸಂತ್ರಸ್ತ ಮಹಿಳೆಯು 2019ರ ನವೆಂಬರ್‌ನಲ್ಲಿ ನಮ್ಮನ್ನು ಸಂಪರ್ಕಿಸಿದ್ದರು. ಅವರು ನಮಗೆ ವಾಟ್ಸಾಪ್ ಚಾಟ್‌ಗಳು, ವಿಡಿಯೋ ಮತ್ತು ಆಡಿಯೋವನ್ನು ತೋರಿಸಿದರು. ನಾನು ಅದನ್ನು ಮೊದಲು ನೋಡಿದಾಗ ನನಗೆ ತುಂಬಾ ಕೋಪ ಬಂದಿತು. ಉದ್ಯೋಗದ ಭರವಸೆ ನೀಡಿ ತನ್ನನ್ನು ಬಳಸಿಕೊಳ್ಳಲಾಗಿದೆ, ಶೋಷಣೆ ಮಾಡಲಾಗಿದೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಆಕೆ ಹೇಳಿಕೊಂಡಿದದರು ಎಂದು ಅಮೋನ್ಕರ್ ಹೇಳಿದ್ದಾರೆ.

ಐದು ತಿಂಗಳ ಹಿಂದೆ, ತನಗೆ ಮತ್ತು ತನ್ನ ಮಗುವಿಗೆ ಭಯವಾಗುತ್ತಿದೆ ಎಂದು ಹೇಳಿದ್ದ ಮಹಿಳೆ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

2015-16ರಲ್ಲಿ ಮಹಿಳೆ ಮತ್ತು ನಾಯಕ್ ನಡುವೆ ಸಂಭಾಷಣೆ ನಡೆದಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದೇಶದಲ್ಲಿ ಯುವತಿಯರ ಮದುವೆಯ ವಯಸ್ಸು 21 ಕ್ಕೆ ಏರಿಕೆ: ಇತರ ದೇಶಗಳಲ್ಲಿ ಮದುವೆ ವಯಸ್ಸು ಹೇಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....