Homeಮುಖಪುಟಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ರಾಜೀನಾಮೆ: ಟಿಎಂಸಿ ಸೇರ್ಪಡೆ ಸಾಧ್ಯತೆ

ಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ರಾಜೀನಾಮೆ: ಟಿಎಂಸಿ ಸೇರ್ಪಡೆ ಸಾಧ್ಯತೆ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಹೊಗಳಿದ ಸ್ಪಲ್ಪ ಸಮಯದಲ್ಲೇ ಗೋವಾ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಲುಯಿಜಿನೊ ಫೆಲೇರೊ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಲುಯಿಜಿನೊ ಫೆಲೇರೊ, ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಸೇರುವ ಸೂಚನೆಗಳಿವೆ. ಅಧಿಕೃತವಾಗಿ ಘೋಷಣೆಯೊಂದೆ ಬಾಕಿಯಿದೆ. ರಾಜೀನಾಮೆ ನೀಡುವ ಮೊದಲು, ಬಿಜೆಪಿಗೆ ಕಠಿಣ ಪೈಪೋಟೆ ನೀಡುವ ಏಕೈಕ ಪ್ರತಿಸ್ಪರ್ಧಿ ಮಮತಾ ಬ್ಯಾನರ್ಜಿ ಎಂದು ಹೊಗಳಿದ್ದರು.

ಮುಂದಿನ ವರ್ಷ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅದಷ್ಟು ಬೇಗ ಘೋಷಿಸಲಾಗುವುದು ಎಂದು ಟಿಎಂಸಿ ತಿಳಿಸಿತ್ತು. ಇದರ ಬೆನ್ನಲ್ಲೇ ಲುಯಿಜಿನೊ ಫೆಲೇರೊ ರಾಜೀನಾಮೆ ನೀಡಿರುವುದು ಅವರು ಟಿಎಂಸಿ ಸೇರುತ್ತಾರೆ ಎಂಬ ವದಂತಿಗೆ ಪುಷ್ಠಿ ನೀಡಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

“ನಾನು ಹಲವು ಜನರನ್ನು ಭೇಟಿಯಾಗಿದ್ದೇನೆ ಅವರೆಲ್ಲರೂ ನಾನು 40 ವರ್ಷದ ಕಾಂಗ್ರೆಸ್ಸಿಗ ಎಂದು ಹೇಳುತ್ತಾರೆ. ನಾನು ಮುಂದೆಯೂ ಕಾಂಗ್ರೆಸ್ ಕುಟುಂಬದ ಕಾಂಗ್ರೆಸ್ಸಿಗನಾಗಿ ಮುಂದುವರಿಯುತ್ತೇನೆ. ಎಲ್ಲಾ ನಾಲ್ಕು ಕಾಂಗ್ರೆಸ್‌ ಪಕ್ಷಗಳಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿಗೆ ಕಠಿಣ ಪೈಪೋಟಿ ನೀಡಿದ್ದಾರೆ. ಪ್ರಧಾನಿ ಮೋದಿ ಬಂಗಾಳದಲ್ಲಿ 200 ಸಭೆಗಳನ್ನು ನಡೆಸಿದ್ದರು. ಅಮಿತ್ ಶಾ 250 ಸಭೆಗಳನ್ನು ನಡೆಸಿದ್ದರು. ನಂತರ ಇಡಿ, ಸಿಬಿಐ ಕೂಡ ಅವರಿಗೆ ಸಹಾಯಕವಾಗಿದ್ದವು. ಆದರೆ ಮಮತಾ ಬ್ಯಾನರ್ಜಿ ಅವರ ಸೂತ್ರ ಗೆದ್ದಿದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಲುಯಿಜಿನೊ ಫಲೇರೋ ಅವರು 2019 ರ ರಾಷ್ಟ್ರೀಯ ಚುನಾವಣೆಗೆ ತ್ರಿಪುರಾದ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಇವರು ಟಿಎಂಸಿ ಸೇರುವುದರಿಂದ ಈಶಾನ್ಯ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ತನ್ನ ಹೆಜ್ಜೆಯಿಡಲು ಮತ್ತು ಬಿಜೆಪಿಯನ್ನು ಹಿಂದಿಕ್ಕಲು ಸಹಾಯಕವಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿವೆ.

ಕಾಂಗ್ರೆಸ್ ಹಿರಿಯ ನಾಯಕಿಯಾಗಿದ್ದ ಮಾಜಿ ಸಂಸದೆ ಸುಶ್ಮಿತಾ ದೇವ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಇತ್ತಿಚೆಗೆ ಟಿಎಂಸಿ ಸೇಪ್ಡೆಯಾಗಿದ್ದರು. ಇದಾದ ಬಳಿಕ ಕಾಂಗ್ರೆಸ್‌ಗೆ ಇದು ಎರಡನೇ ದೊಡ್ಡ ಹೊಡೆತ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದಾಗಿನಿಂದ ಬೇರೆ ಪಕ್ಷಗಳಿಂದ ಟಿಎಂಸಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿದೆ.


ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...