Homeಚಳವಳಿಗೋವಾ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸಂವಾದ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ವೈದ್ಯರ ಪ್ರತಿಭಟನೆ

ಗೋವಾ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸಂವಾದ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ವೈದ್ಯರ ಪ್ರತಿಭಟನೆ

- Advertisement -
- Advertisement -

ಗೋವಾದ ಖಾಸಗಿ ದಂತವೈದ್ಯರ ಗುಂಪೊಂದು ಪಣಜಿಯಲ್ಲಿ ನಡೆದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕೈಗೆ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರವು ಇತ್ತೀಚೆಗೆ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಶುಲ್ಕವನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ವೈದ್ಯರು ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಬಿಜೆಪಿಯ ರಾಜ್ಯ ವೈದ್ಯಕೀಯ ಘಟಕವು ಬುಧವಾರ ಸಂಜೆ ವೈದ್ಯಕೀಯ ವೃತ್ತಿಪರರೊಂದಿಗೆ ಜೆ.ಪಿ. ನಡ್ಡಾ ಅವರ ಸಂವಾದ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ಇಂಡಿಯನ್ ಡೆಂಟಲ್ ಅಸೋಸಿಯೇಷನ್‌(ಐಡಿಎ) ದಂತವೈದ್ಯರು ಪ್ರತಿಭಟನೆ ನಡೆಸಿದ್ದಾರೆ.

ಸಂವಾದದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ , ಬಿಜೆಪಿ ಅಧ್ಯಕ್ಷರ ಮುಂದೆ ಈ ರೀತಿಯ ಪ್ರತಿಭಟನೆ ನಡೆಸಿರುವುದು “ರಾಜಕೀಯ ಪ್ರೇರಿತ” ಎಂದು ಘನಟೆ ಬಳಿಕ ಆರೋಪಿಸಿದ್ದಾರೆ.

ಇದನ್ನೂ ಓದಿ: 2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ನಡ್ಡಾ ಅವರೊಂದಿಗಿನ ಪ್ರಶ್ನೋತ್ತರ ಅವಧಿಯಲ್ಲಿ ವೈದ್ಯರು, ಗೋವಾ ಸರ್ಕಾರವು ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಶುಲ್ಕವನ್ನು ಹೆಚ್ಚಿಸಿರುವುದನ್ನು ವಿರೋಧಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರತಿಭಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಐಡಿಎ ಸದಸ್ಯ ಡಾ.ಅನಿಲ್ ಡಿಸಿಲ್ವಾ, “ಹೆಚ್ಚಿನ ಮಟ್ಟದಲ್ಲಿ ಬಯೋಮೆಡಿಕಲ್ ತ್ಯಾಜ್ಯವನ್ನು ಉತ್ಪಾದಿಸುವ ವೈದ್ಯರ ಗುಂಪಿಗೆ ದಂತ ವೈದ್ಯರನ್ನು ಸೇರಿಸಿರುವುದು ಸರಿಯಲ್ಲ. ಬಯೋಮೆಡಿಕಲ್ ತ್ಯಾಜ್ಯವನ್ನು ಸಂಗ್ರಹಿಸಲು ದೆಹಲಿಯ ಹೊಸ ಖಾಸಗಿ ಗುತ್ತಿಗೆದಾರರನ್ನು ನೇಮಿಸಲಾಗಿದೆ. ಹೆಚ್ಚಿನ ಪ್ರಮಾಣದ ತ್ಯಾಜ್ಯವನ್ನು ಉತ್ಪಾದಿಸುವ ವರ್ಗದಲ್ಲಿ ದಂತವೈದ್ಯರನ್ನು ಆ ಸಂಸ್ಥೆ ಸೇರಿಸಿದೆ, ಇದರಿಂದಾಗಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಶುಲ್ಕಗಳು ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಪ್ರತಿಭಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಪ್ರಮೋದ್ ಸಾವಂತ್, “ಈ ಹಿಂದೆ ದಂತ ವೈದ್ಯರು ತಮ್ಮನ್ನು ಭೇಟಿ ಮಾಡಿದ್ದು, ಅವರ ಬೇಡಿಕೆ ಪರಿಶೀಲನೆಯಲ್ಲಿದೆ. ಇದು ರಾಜ್ಯ ವಿಷಯವಾಗಿರುವುದರಿಂದ ಇಂತಹ ಸಮಾರಂಭದಲ್ಲಿ ಪ್ರತಿಭಟನೆ ಮಾಡುವ ಅಗತ್ಯವಿರಲಿಲ್ಲ. ಅವರ ಪ್ರಶ್ನೆಗಳಿಗೆ ನಾನು ಸರಿಯಾಗಿ ಉತ್ತರ ನೀಡಿದ್ದೆ’ ಎಂದಿದ್ದಾರೆ.

————————

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...