Homeಮುಖಪುಟಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ ಆಚರಿಸದ ಗೋವಾ; ಕಾರಣ ಇಲ್ಲಿದೆ

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ ಆಚರಿಸದ ಗೋವಾ; ಕಾರಣ ಇಲ್ಲಿದೆ

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಭಾನುವಾರ ದೇಶದಲ್ಲಿ ಸರಳವಾಗಿ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಆಗಸ್ಟ್ 15 ರಂದು ಆಚರಿಸಲಾಗುವ ಈ ದಿನದಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ನೆನಪಿಸಿಕೊಳ್ಳಲಾಗುತ್ತದೆ.

ದೇಶದಾದ್ಯಂತ ತ್ರಿವರ್ಣ ಧ್ವಜ ಹಾರಿಸಿ, ಮೆರವಣಿಗೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆದಸಲಾಗುತ್ತದೆ. ಆದರೆ, ಗೋವಾದಲ್ಲಿ ಮಾತ್ರ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದಿಲ್ಲ.

ಭಾರತ 1947ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದರೂ ಕೂಡ ಗೋವಾ ಪೋರ್ಚುಗೀಸ್ ವಸಾಹತಿನ ಅಡಿಯಲ್ಲಿತ್ತು. ಪೋರ್ಚುಗೀಸರು ಗೋವಾದ ಸುಂದರವಾದ ಭೂಮಿ ಮತ್ತು ರಮಣೀಯ ಸೌಂದರ್ಯಕ್ಕಾಗಿ 450 ವರ್ಷಗಳಿಗೂ ಹೆಚ್ಚು ಕಾಲ ಆ ರಾಜ್ಯವನ್ನು ಆಳಿದ್ದಾರೆ. ಭಾರತವನ್ನು ಆಳದ ವಿದೇಶಿಗರಲ್ಲಿ ಪೋರ್ಚುಗೀಸರು ಮೊದಲ ವಸಾಹತುದಾರರು ಮತ್ತು ಕೊನೆಯದಾಗಿ ದೇಶವನ್ನು ತೊರೆದರು ಕೂಡ ಪೋರ್ಚುಗೀಸರು.

ಇದನ್ನೂ ಓದಿ: 75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

1510ರಲ್ಲಿ ಪೋರ್ಚುಗೀಸರು ಗೋವಾವನ್ನು ಆಕ್ರಮಿಸಿದ್ದರು. ನಾಲ್ಕು ಶತಮಾನಗಳಿಗೂ ಹೆಚ್ಚು ಕಾಲ, ಗೋವಾದಲ್ಲಿ ಜನರು ಡಯಾಬಾಲಿಕ್ ಚಿತ್ರಹಿಂಸೆಗೆ ಒಳಗಾಗಿದ್ದರು. ಕೊಂಕಣಿ ಭಾಷೆಯನ್ನು ನಿಗ್ರಹಿಸುವುದು, ಹಿಂದೂಗಳು ಮತ್ತು ಗೋವಾ ಕ್ಯಾಥೊಲಿಕ್‌ಗಳ ಮೇಲೆ ಕಿರುಕುಳ ನೀಡುವುದರಿಂದ ಹಿಡಿದು ಹಿಂದೂ ದೇವಾಲಯಗಳ ನಾಶ ಮತ್ತು ಹಿಂದೂ ವಿವಾಹದ ಆಚರಣೆಗಳ ಮೇಲಿನ ನಿಷೇಧಗಳು ಗೋವಾದಲ್ಲಿದ್ದವು.

ಪೋರ್ಚುಗೀಸರ ಆಳ್ವಿಕೆಯ ಅಂತ್ಯ 18 ಜೂನ್, 1946 ರಂದು ಆರಂಭವಾಯಿತು. ಭಾರತದ ಉಳಿದ ಭಾಗಗಳು ಸ್ವಾತಂತ್ರ್ಯದತ್ತ ಸಾಗುತ್ತಿದ್ದಾಗ, ರಾಜಕೀಯ ನಾಯಕ ರಾಮ್ ಮನೋಹರ್ ಲೋಹಿಯಾ ಅವರು ಬರಹಗಾರ ಡಾ. ಜೂಲಿಯೊ ಮೆನೆಜೆಸ್ ಅವರೊಂದಿಗೆ ಗೋವಾಕ್ಕೆ ಭೇಟಿ ನೀಡಿದ್ದರು. ಗೋವಾ ಜನರ ಕಷ್ಟ ತಿಳಿದ ನಂತರ, ಲೋಹಿಯಾ ರಾಜ್ಯದಲ್ಲಿ ನಾಗರಿಕ ಅಸಹಕಾರ ಚಳುವಳಿಯನ್ನು ಆರಂಭಿಸಿದರು.

ಪ್ರಭಾಕರ ವಿಠ್ಠಲ್ ಸಿನಾರಿ ಮತ್ತು ಅವರ ಆಪ್ತರು ಕ್ರಾಂತಿಕಾರಿ ಸಂಘಟನೆಯನ್ನು ಆಜಾದ್ ಗೋಮಂತಕ್ ದಳ(Azad Gomantak Dal) ರಚಿಸಿ, ಪೋರ್ಚುಗೀಸರ ವಿರುದ್ಧ ಹೋರಾಡಲು ಸಜ್ಜಾಯಿತು. ಇದರೊಂದಿಗೆ ಅನೇಕ ಸಂಘಟನೆಗಳು ಸೇರಿ ಯುನೈಟೆಡ್ ಫ್ರಂಟ್ ಆಫ್ ಲಿಬರೇಶನ್ ಎಂಬ ದೊಡ್ಡ ಒಕ್ಕೂಟವನ್ನು ರಚಿಸಿದರು.

ಗೋವಾ ವಿಮೋಚನೆಗಾಗಿ 1946 ರಲ್ಲಿ ಆರಂಭವಾದ ಸುದೀರ್ಘ ಹೋರಾಟದ ಫಲವಾಗಿ ಗೋವಾ ಪೋರ್ಚುಗೀಸರ ಆಳ್ವಿಕೆಯಿಂದ ಡಿಸೆಂಬರ್ 19, 1961 ರಂದು ಬಿಡುಗಡೆಯಾಯಿತು. ಹೀಗಾಗಿ ಪ್ರತಿ ವರ್ಷ ಡಿಸೆಂಬರ್‌ 19ರಂದು ಗೋವಾ ವಿಮೋಚನೆ ದಿನವನ್ನು ಆಚರಿಸಲಾಗುತ್ತದೆ.


ಇದನ್ನೂ ಓದಿ: ದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...