Homeಮುಖಪುಟಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ ಆಚರಿಸದ ಗೋವಾ; ಕಾರಣ ಇಲ್ಲಿದೆ

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ ಆಚರಿಸದ ಗೋವಾ; ಕಾರಣ ಇಲ್ಲಿದೆ

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಭಾನುವಾರ ದೇಶದಲ್ಲಿ ಸರಳವಾಗಿ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಆಗಸ್ಟ್ 15 ರಂದು ಆಚರಿಸಲಾಗುವ ಈ ದಿನದಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ನೆನಪಿಸಿಕೊಳ್ಳಲಾಗುತ್ತದೆ.

ದೇಶದಾದ್ಯಂತ ತ್ರಿವರ್ಣ ಧ್ವಜ ಹಾರಿಸಿ, ಮೆರವಣಿಗೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆದಸಲಾಗುತ್ತದೆ. ಆದರೆ, ಗೋವಾದಲ್ಲಿ ಮಾತ್ರ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದಿಲ್ಲ.

ಭಾರತ 1947ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದರೂ ಕೂಡ ಗೋವಾ ಪೋರ್ಚುಗೀಸ್ ವಸಾಹತಿನ ಅಡಿಯಲ್ಲಿತ್ತು. ಪೋರ್ಚುಗೀಸರು ಗೋವಾದ ಸುಂದರವಾದ ಭೂಮಿ ಮತ್ತು ರಮಣೀಯ ಸೌಂದರ್ಯಕ್ಕಾಗಿ 450 ವರ್ಷಗಳಿಗೂ ಹೆಚ್ಚು ಕಾಲ ಆ ರಾಜ್ಯವನ್ನು ಆಳಿದ್ದಾರೆ. ಭಾರತವನ್ನು ಆಳದ ವಿದೇಶಿಗರಲ್ಲಿ ಪೋರ್ಚುಗೀಸರು ಮೊದಲ ವಸಾಹತುದಾರರು ಮತ್ತು ಕೊನೆಯದಾಗಿ ದೇಶವನ್ನು ತೊರೆದರು ಕೂಡ ಪೋರ್ಚುಗೀಸರು.

ಇದನ್ನೂ ಓದಿ: 75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

1510ರಲ್ಲಿ ಪೋರ್ಚುಗೀಸರು ಗೋವಾವನ್ನು ಆಕ್ರಮಿಸಿದ್ದರು. ನಾಲ್ಕು ಶತಮಾನಗಳಿಗೂ ಹೆಚ್ಚು ಕಾಲ, ಗೋವಾದಲ್ಲಿ ಜನರು ಡಯಾಬಾಲಿಕ್ ಚಿತ್ರಹಿಂಸೆಗೆ ಒಳಗಾಗಿದ್ದರು. ಕೊಂಕಣಿ ಭಾಷೆಯನ್ನು ನಿಗ್ರಹಿಸುವುದು, ಹಿಂದೂಗಳು ಮತ್ತು ಗೋವಾ ಕ್ಯಾಥೊಲಿಕ್‌ಗಳ ಮೇಲೆ ಕಿರುಕುಳ ನೀಡುವುದರಿಂದ ಹಿಡಿದು ಹಿಂದೂ ದೇವಾಲಯಗಳ ನಾಶ ಮತ್ತು ಹಿಂದೂ ವಿವಾಹದ ಆಚರಣೆಗಳ ಮೇಲಿನ ನಿಷೇಧಗಳು ಗೋವಾದಲ್ಲಿದ್ದವು.

ಪೋರ್ಚುಗೀಸರ ಆಳ್ವಿಕೆಯ ಅಂತ್ಯ 18 ಜೂನ್, 1946 ರಂದು ಆರಂಭವಾಯಿತು. ಭಾರತದ ಉಳಿದ ಭಾಗಗಳು ಸ್ವಾತಂತ್ರ್ಯದತ್ತ ಸಾಗುತ್ತಿದ್ದಾಗ, ರಾಜಕೀಯ ನಾಯಕ ರಾಮ್ ಮನೋಹರ್ ಲೋಹಿಯಾ ಅವರು ಬರಹಗಾರ ಡಾ. ಜೂಲಿಯೊ ಮೆನೆಜೆಸ್ ಅವರೊಂದಿಗೆ ಗೋವಾಕ್ಕೆ ಭೇಟಿ ನೀಡಿದ್ದರು. ಗೋವಾ ಜನರ ಕಷ್ಟ ತಿಳಿದ ನಂತರ, ಲೋಹಿಯಾ ರಾಜ್ಯದಲ್ಲಿ ನಾಗರಿಕ ಅಸಹಕಾರ ಚಳುವಳಿಯನ್ನು ಆರಂಭಿಸಿದರು.

ಪ್ರಭಾಕರ ವಿಠ್ಠಲ್ ಸಿನಾರಿ ಮತ್ತು ಅವರ ಆಪ್ತರು ಕ್ರಾಂತಿಕಾರಿ ಸಂಘಟನೆಯನ್ನು ಆಜಾದ್ ಗೋಮಂತಕ್ ದಳ(Azad Gomantak Dal) ರಚಿಸಿ, ಪೋರ್ಚುಗೀಸರ ವಿರುದ್ಧ ಹೋರಾಡಲು ಸಜ್ಜಾಯಿತು. ಇದರೊಂದಿಗೆ ಅನೇಕ ಸಂಘಟನೆಗಳು ಸೇರಿ ಯುನೈಟೆಡ್ ಫ್ರಂಟ್ ಆಫ್ ಲಿಬರೇಶನ್ ಎಂಬ ದೊಡ್ಡ ಒಕ್ಕೂಟವನ್ನು ರಚಿಸಿದರು.

ಗೋವಾ ವಿಮೋಚನೆಗಾಗಿ 1946 ರಲ್ಲಿ ಆರಂಭವಾದ ಸುದೀರ್ಘ ಹೋರಾಟದ ಫಲವಾಗಿ ಗೋವಾ ಪೋರ್ಚುಗೀಸರ ಆಳ್ವಿಕೆಯಿಂದ ಡಿಸೆಂಬರ್ 19, 1961 ರಂದು ಬಿಡುಗಡೆಯಾಯಿತು. ಹೀಗಾಗಿ ಪ್ರತಿ ವರ್ಷ ಡಿಸೆಂಬರ್‌ 19ರಂದು ಗೋವಾ ವಿಮೋಚನೆ ದಿನವನ್ನು ಆಚರಿಸಲಾಗುತ್ತದೆ.


ಇದನ್ನೂ ಓದಿ: ದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...