Homeಮುಖಪುಟಗೋವಾ ಚುನಾವಣೆ: ಗಣಿಗಾರಿಕೆ ಪುನರಾರಂಭ, ಮಹಿಳೆಯರಿಗೆ ಮೀಸಲಾತಿ ಭರವಸೆ ನೀಡಿದ ಟಿಎಂಸಿ-ಎಂಜಿಪಿ ಮೈತ್ರಿ

ಗೋವಾ ಚುನಾವಣೆ: ಗಣಿಗಾರಿಕೆ ಪುನರಾರಂಭ, ಮಹಿಳೆಯರಿಗೆ ಮೀಸಲಾತಿ ಭರವಸೆ ನೀಡಿದ ಟಿಎಂಸಿ-ಎಂಜಿಪಿ ಮೈತ್ರಿ

- Advertisement -
- Advertisement -

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷಗಳು ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ. ಎರಡೂ ಪಕ್ಷಗಳು ಜಂಟಿಯಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ತಾವು ಅಧಿಕಾರಕ್ಕೆ ಬಂದರೆ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿವೆ.

ಗೋವಾದಲ್ಲಿನ 88 ಗಣಿಗಾರಿಕೆ ಗುತ್ತಿಗೆಗಳನ್ನು ಸುಪ್ರೀಂ ಕೋರ್ಟ್ 2018ರ ಮಾರ್ಚ್‌ನಲ್ಲಿ ರದ್ದುಗೊಳಿಸಿತ್ತು. ನಂತರ ಗೋವಾದಲ್ಲಿ ಗಣಿಗಾರಿಗೆ ಸ್ಥಗಿತಗೊಂಡಿದೆ. ಗೋವಾಕ್ಕೆ ಆದಾಯದ ಮುಖ್ಯ ಮೂಲಗಳಲ್ಲಿ ಒಂದಾಗಿದ್ದ ಗಣಿಗಾರಿಕೆ ಕಾರ್ಯಾಚರಣೆಗಳನ್ನು ಕೂಡ ಪುನರಾರಂಭಿಸುವುದಾಗಿ ಈ ಪಕ್ಷಗಳು ಭರವಸೆ ನೀಡಿವೆ.

ಗೋವಾ ಮಿನರಲ್ ಕಾರ್ಪೊರೇಷನ್ ಮೂಲಕ ಉತ್ಪತ್ತಿಯಾಗುವ ಎಲ್ಲಾ ಆದಾಯವನ್ನು ರಾಜ್ಯದಲ್ಲಿ ಕಲ್ಯಾಣ ಯೋಜನೆಗಳಿಗೆ ಧನಸಹಾಯ ಮಾಡಲು ಬಳಸಿಕೊಳ್ಳಲಾಗುವುದು ಎಂದು ಶನಿವಾರ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಮೈತ್ರಿ ಪಕ್ಷಗಳು ತಿಳಿಸಿವೆ.

ಖಾಸಗಿ ವಲಯ ಸೇರಿದಂತೆ ಎಲ್ಲ ಉದ್ಯೋಗಗಳಲ್ಲಿ ಗೋವಾದ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡುವುದಾಗಿಯೂ ಭರವಸೆ ನೀಡಿವೆ.

ಇದನ್ನೂ ಓದಿ: ಸಿನಿಮಾದಲ್ಲಿ ಮಹಿಳೆಯರು, ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳು: ನಿರ್ದೇಶಕ ಮಹೇಶ್ ಮಂಜ್ರೇಕರ್‌ ವಿರುದ್ಧ ದೂರು

ಟಿಎಂಸಿ-ಎಂಜಿಪಿ ಮೈತ್ರಿಕೂಟವು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳನ್ನು ಪರಿಹರಿಸಲು ಎರಡು ತ್ವರಿತ ನ್ಯಾಯಾಲಯಗಳು ಮತ್ತು ಮಹಿಳೆಯರ ಸುರಕ್ಷತೆಗಾಗಿ ಮೊಬೈಲ್ ಅಪ್ಲಿಕೇಶನ್ ಅನ್ನು ಸ್ಥಾಪಿಸುವ ಭರವಸೆಯನ್ನು ನೀಡಿವೆ. ಪ್ರಣಾಳಿಕೆಯ ಪ್ರಕಾರ, TMC-MGP ಅಧಿಕಾರಕ್ಕೆ ಬಂದರೆ, ಸರ್ಕಾರವು ಗೋವಾದ ಒಟ್ಟು ಆಂತರಿಕ ಉತ್ಪನ್ನವನ್ನು 1.8 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವುದಾಗಿ ಮತ್ತು 2 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನೂ ನೀಡಿವೆ.

ಗೋವಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕಳೆದ ತಿಂಗಳು ರಾಜ್ಯದ ಅತ್ಯಂತ ಹಳೆಯ ಪ್ರಾದೇಶಿಕ ಪಕ್ಷ ಎಂಜಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. 2017 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ, MGP ಮೂರು ಸ್ಥಾನಗಳನ್ನು ಗೆದ್ದಿತ್ತು. ಗೋವಾದಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...