Homeಮುಖಪುಟಗೋವಾ ಚುನಾವಣೆ: ನಿರುದ್ಯೋಗಿಗಳಿಗೆ ಭತ್ಯೆ, ಸ್ಥಳೀಯರಿಗೆ 80% ಮೀಸಲಾತಿ - ಕೇಜ್ರಿವಾಲ್ ಘೋಷಣೆ

ಗೋವಾ ಚುನಾವಣೆ: ನಿರುದ್ಯೋಗಿಗಳಿಗೆ ಭತ್ಯೆ, ಸ್ಥಳೀಯರಿಗೆ 80% ಮೀಸಲಾತಿ – ಕೇಜ್ರಿವಾಲ್ ಘೋಷಣೆ

- Advertisement -
- Advertisement -

ಮುಂದಿನ ವರ್ಷ ಗೋವಾದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ(ಎಎಪಿ) ಸ್ಪರ್ಧಿಸಲು ತಯಾರಾಗಿದೆ. ಅದಕ್ಕಾಗಿ ಪಕ್ಷವು ಈಗಾಗಲೆ ಸಿದ್ದತೆ ಪ್ರಾರಂಭಿಸಿದ್ದು, ತಾವು ಅಧಿಕಾರಕ್ಕೆ ಬಂದರೆ, ನಿರುದ್ಯೋಗ ಭತ್ಯೆ ₹ 3,000 ಮತ್ತು ಸ್ಥಳೀಯರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ 80% ದಷ್ಟು ಮೀಸಲಾತಿ ನೀಡುತ್ತೇವೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.

ಇದೇ ರೀತಿಯ ಭರವಸೆಗಳನ್ನು ಉತ್ತರಾಖಂಡದ ಮತದಾರರಿಗೆ ಕೂಡಾ ಭಾನುವಾರ ಕೇಜ್ರಿವಾಲ್ ನೀಡಿದ್ದರು. ತಮ್ಮ ಪಕ್ಷಕ್ಕೆ ಮತಚಲಾಯಿಸಿದರೆ ಭ್ರಷ್ಟಾಚಾರದ ವಿರುದ್ಧ ಹೋರಾಡಲಿದ್ದು, ಪ್ರತಿ ಮನೆಯಿಂದ ಕನಿಷ್ಠ ಒಬ್ಬ ನಿರುದ್ಯೋಗಿ ಉದ್ಯೋಗ ಪಡೆಯುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ಅರವಿಂದ ಕೇಜ್ರಿವಾಲ್ ಮರು ಆಯ್ಕೆ

“ಗೋವಾ ಒಂದು ಸುಂದರ ರಾಜ್ಯ … ಜನರು ಒಳ್ಳೆಯವರು … ಮತ್ತು ದೇವರು ಗೋವಾಕ್ಕೆ ಎಲ್ಲವನ್ನೂ ಕೊಟ್ಟಿದ್ದಾನೆ. ಆದರೆ ರಾಜಕಾರಣಿಗಳು ಮತ್ತು ಪಕ್ಷಗಳು ಲೂಟಿ ಮಾಡಿದ್ದಾರೆ. ನಾವು ಈ ಲೂಟಿಯನ್ನು ನಿಲ್ಲಿಸಬೇಕು.ಇದಕ್ಕಾಗಿ ಒಂದು ವಿಸ್ತೃತವಾದ ಯೋಜನೆಯನ್ನು ಮಾಡಿದ್ದೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ರಾಜ್ಯದ ಹಣಕಾಸು ಪರಿಸ್ಥಿತಿಯ ಮೇಲೆ ಕೊರೊನಾ ಪ್ರಭಾವವನ್ನು ಎತ್ತಿ ತೋರಿಸಿದ ಕೇಜ್ರಿವಾಲ್, ಇದರಿಂದಾಗಿ ತೊಂದರೆಗೊಳಗಾದ ಜನರಿಗೆ ನಿರುದ್ಯೋಗ ಭತ್ಯೆಗಳು, ಗಣಿಗಾರಿಕೆ ಉದ್ಯಮದ ಮೇಲೆ ನಿರ್ಬಂಧಗಳು ಮತ್ತು ನಿಷೇಧದಿಂದಾಗಿ ಉದ್ಯೋಗ ಕಳೆದುಕೊಂಡವರಿಗೆ ತಿಂಗಳಿಗೆ ₹ 5,000 ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

 

ಗೋವಾದ ಹಾಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರು ಗೋವಾದಲ್ಲಿ ನೀರನ್ನು ಉಚಿತ ಮಾಡಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ಒಳ್ಳೆಯ ಸುದ್ದಿ, ಆದರೆ ಇದನ್ನು ನಾವು ನಾಲ್ಕು ವರ್ಷಗಳ ಹಿಂದೆ ದೆಹಲಿಯಲ್ಲಿ ಮಾಡಿದ್ದೆವು. ಅವರು ಮನೆ ಬಾಗಿಲಿಗೆ ನೀರು ವಿತರಣೆಯನ್ನು ಆರಂಭಿಸಿದ್ದಾರೆ ಎಂದು ನಾನು ಕೇಳಿದೆ… ಇದನ್ನು ನಾವು ಮೂರು ವರ್ಷಗಳ ಹಿಂದೆಯೆ ದೆಹಲಿಯಲ್ಲಿ ಮಾಡಿದ್ದೇವೆ” ಎಂದು ಹೇಳಿದ್ದಾರೆ.

‘‘ಪ್ರಮೋದ್‌ ಸಾವಂತ್ ಅವರು ಗೋವಾದಲ್ಲಿ ‘ದೆಹಲಿ ಮಾದರಿ’ಯನ್ನು ನಕಲು ಮಾಡುತ್ತಿದ್ದಾರೆ…ಮೂಲ ಪಕ್ಷವಾದ ಆಮ್ ಆದ್ಮಿಯೇ ಇರಬೇಕಾದರೆ… ನಕಲು ಮಾಡುವವರ ಅಗತ್ಯವೇನು?” ಎಂದು ಕೇಜ್ರಿವಾಲ್ ಹೇಳಿದ್ದಾರೆ.

300 ಯೂನಿಟ್ ವಿದ್ಯುತ್ ಉಚಿತ ಮತ್ತು ಮತದಾರರಿಗೆ 24 ಗಂಟೆಗಳ ವಿದ್ಯುತ್ ಪೂರೈಕೆಯ ಭರವಸೆಯನ್ನು ನೀಡಿದ್ದಾರೆ. ಕೇಜ್ರಿವಾಲ್ ಅವರು ಈ ಮಾದರಿಯನ್ನು ದೆಹಲಿಯಲ್ಲಿ ಇದನ್ನು ಕಾರ್ಯರೂಪಕ್ಕೆ ತಂದಿದ್ದು, ಉತ್ತರಾಖಂಡ್ ಮತ್ತು ಪಂಜಾಬ್ ಮತದಾರರಿಗೆ ಕೂಡಾ ಇದೇ ಭರವಸೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...