Homeಮುಖಪುಟಗೋವಾ ಚುನಾವಣೆ: ನಿರುದ್ಯೋಗಿಗಳಿಗೆ ಭತ್ಯೆ, ಸ್ಥಳೀಯರಿಗೆ 80% ಮೀಸಲಾತಿ - ಕೇಜ್ರಿವಾಲ್ ಘೋಷಣೆ

ಗೋವಾ ಚುನಾವಣೆ: ನಿರುದ್ಯೋಗಿಗಳಿಗೆ ಭತ್ಯೆ, ಸ್ಥಳೀಯರಿಗೆ 80% ಮೀಸಲಾತಿ – ಕೇಜ್ರಿವಾಲ್ ಘೋಷಣೆ

- Advertisement -
- Advertisement -

ಮುಂದಿನ ವರ್ಷ ಗೋವಾದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ(ಎಎಪಿ) ಸ್ಪರ್ಧಿಸಲು ತಯಾರಾಗಿದೆ. ಅದಕ್ಕಾಗಿ ಪಕ್ಷವು ಈಗಾಗಲೆ ಸಿದ್ದತೆ ಪ್ರಾರಂಭಿಸಿದ್ದು, ತಾವು ಅಧಿಕಾರಕ್ಕೆ ಬಂದರೆ, ನಿರುದ್ಯೋಗ ಭತ್ಯೆ ₹ 3,000 ಮತ್ತು ಸ್ಥಳೀಯರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ 80% ದಷ್ಟು ಮೀಸಲಾತಿ ನೀಡುತ್ತೇವೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.

ಇದೇ ರೀತಿಯ ಭರವಸೆಗಳನ್ನು ಉತ್ತರಾಖಂಡದ ಮತದಾರರಿಗೆ ಕೂಡಾ ಭಾನುವಾರ ಕೇಜ್ರಿವಾಲ್ ನೀಡಿದ್ದರು. ತಮ್ಮ ಪಕ್ಷಕ್ಕೆ ಮತಚಲಾಯಿಸಿದರೆ ಭ್ರಷ್ಟಾಚಾರದ ವಿರುದ್ಧ ಹೋರಾಡಲಿದ್ದು, ಪ್ರತಿ ಮನೆಯಿಂದ ಕನಿಷ್ಠ ಒಬ್ಬ ನಿರುದ್ಯೋಗಿ ಉದ್ಯೋಗ ಪಡೆಯುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ಅರವಿಂದ ಕೇಜ್ರಿವಾಲ್ ಮರು ಆಯ್ಕೆ

“ಗೋವಾ ಒಂದು ಸುಂದರ ರಾಜ್ಯ … ಜನರು ಒಳ್ಳೆಯವರು … ಮತ್ತು ದೇವರು ಗೋವಾಕ್ಕೆ ಎಲ್ಲವನ್ನೂ ಕೊಟ್ಟಿದ್ದಾನೆ. ಆದರೆ ರಾಜಕಾರಣಿಗಳು ಮತ್ತು ಪಕ್ಷಗಳು ಲೂಟಿ ಮಾಡಿದ್ದಾರೆ. ನಾವು ಈ ಲೂಟಿಯನ್ನು ನಿಲ್ಲಿಸಬೇಕು.ಇದಕ್ಕಾಗಿ ಒಂದು ವಿಸ್ತೃತವಾದ ಯೋಜನೆಯನ್ನು ಮಾಡಿದ್ದೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ರಾಜ್ಯದ ಹಣಕಾಸು ಪರಿಸ್ಥಿತಿಯ ಮೇಲೆ ಕೊರೊನಾ ಪ್ರಭಾವವನ್ನು ಎತ್ತಿ ತೋರಿಸಿದ ಕೇಜ್ರಿವಾಲ್, ಇದರಿಂದಾಗಿ ತೊಂದರೆಗೊಳಗಾದ ಜನರಿಗೆ ನಿರುದ್ಯೋಗ ಭತ್ಯೆಗಳು, ಗಣಿಗಾರಿಕೆ ಉದ್ಯಮದ ಮೇಲೆ ನಿರ್ಬಂಧಗಳು ಮತ್ತು ನಿಷೇಧದಿಂದಾಗಿ ಉದ್ಯೋಗ ಕಳೆದುಕೊಂಡವರಿಗೆ ತಿಂಗಳಿಗೆ ₹ 5,000 ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

 

ಗೋವಾದ ಹಾಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರು ಗೋವಾದಲ್ಲಿ ನೀರನ್ನು ಉಚಿತ ಮಾಡಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ಒಳ್ಳೆಯ ಸುದ್ದಿ, ಆದರೆ ಇದನ್ನು ನಾವು ನಾಲ್ಕು ವರ್ಷಗಳ ಹಿಂದೆ ದೆಹಲಿಯಲ್ಲಿ ಮಾಡಿದ್ದೆವು. ಅವರು ಮನೆ ಬಾಗಿಲಿಗೆ ನೀರು ವಿತರಣೆಯನ್ನು ಆರಂಭಿಸಿದ್ದಾರೆ ಎಂದು ನಾನು ಕೇಳಿದೆ… ಇದನ್ನು ನಾವು ಮೂರು ವರ್ಷಗಳ ಹಿಂದೆಯೆ ದೆಹಲಿಯಲ್ಲಿ ಮಾಡಿದ್ದೇವೆ” ಎಂದು ಹೇಳಿದ್ದಾರೆ.

‘‘ಪ್ರಮೋದ್‌ ಸಾವಂತ್ ಅವರು ಗೋವಾದಲ್ಲಿ ‘ದೆಹಲಿ ಮಾದರಿ’ಯನ್ನು ನಕಲು ಮಾಡುತ್ತಿದ್ದಾರೆ…ಮೂಲ ಪಕ್ಷವಾದ ಆಮ್ ಆದ್ಮಿಯೇ ಇರಬೇಕಾದರೆ… ನಕಲು ಮಾಡುವವರ ಅಗತ್ಯವೇನು?” ಎಂದು ಕೇಜ್ರಿವಾಲ್ ಹೇಳಿದ್ದಾರೆ.

300 ಯೂನಿಟ್ ವಿದ್ಯುತ್ ಉಚಿತ ಮತ್ತು ಮತದಾರರಿಗೆ 24 ಗಂಟೆಗಳ ವಿದ್ಯುತ್ ಪೂರೈಕೆಯ ಭರವಸೆಯನ್ನು ನೀಡಿದ್ದಾರೆ. ಕೇಜ್ರಿವಾಲ್ ಅವರು ಈ ಮಾದರಿಯನ್ನು ದೆಹಲಿಯಲ್ಲಿ ಇದನ್ನು ಕಾರ್ಯರೂಪಕ್ಕೆ ತಂದಿದ್ದು, ಉತ್ತರಾಖಂಡ್ ಮತ್ತು ಪಂಜಾಬ್ ಮತದಾರರಿಗೆ ಕೂಡಾ ಇದೇ ಭರವಸೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...