Homeಮುಖಪುಟಗೋವಾ ಚುನಾವಣೆ: ನಿರುದ್ಯೋಗಿಗಳಿಗೆ ಭತ್ಯೆ, ಸ್ಥಳೀಯರಿಗೆ 80% ಮೀಸಲಾತಿ - ಕೇಜ್ರಿವಾಲ್ ಘೋಷಣೆ

ಗೋವಾ ಚುನಾವಣೆ: ನಿರುದ್ಯೋಗಿಗಳಿಗೆ ಭತ್ಯೆ, ಸ್ಥಳೀಯರಿಗೆ 80% ಮೀಸಲಾತಿ – ಕೇಜ್ರಿವಾಲ್ ಘೋಷಣೆ

- Advertisement -
- Advertisement -

ಮುಂದಿನ ವರ್ಷ ಗೋವಾದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ(ಎಎಪಿ) ಸ್ಪರ್ಧಿಸಲು ತಯಾರಾಗಿದೆ. ಅದಕ್ಕಾಗಿ ಪಕ್ಷವು ಈಗಾಗಲೆ ಸಿದ್ದತೆ ಪ್ರಾರಂಭಿಸಿದ್ದು, ತಾವು ಅಧಿಕಾರಕ್ಕೆ ಬಂದರೆ, ನಿರುದ್ಯೋಗ ಭತ್ಯೆ ₹ 3,000 ಮತ್ತು ಸ್ಥಳೀಯರಿಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ 80% ದಷ್ಟು ಮೀಸಲಾತಿ ನೀಡುತ್ತೇವೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.

ಇದೇ ರೀತಿಯ ಭರವಸೆಗಳನ್ನು ಉತ್ತರಾಖಂಡದ ಮತದಾರರಿಗೆ ಕೂಡಾ ಭಾನುವಾರ ಕೇಜ್ರಿವಾಲ್ ನೀಡಿದ್ದರು. ತಮ್ಮ ಪಕ್ಷಕ್ಕೆ ಮತಚಲಾಯಿಸಿದರೆ ಭ್ರಷ್ಟಾಚಾರದ ವಿರುದ್ಧ ಹೋರಾಡಲಿದ್ದು, ಪ್ರತಿ ಮನೆಯಿಂದ ಕನಿಷ್ಠ ಒಬ್ಬ ನಿರುದ್ಯೋಗಿ ಉದ್ಯೋಗ ಪಡೆಯುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ಅರವಿಂದ ಕೇಜ್ರಿವಾಲ್ ಮರು ಆಯ್ಕೆ

“ಗೋವಾ ಒಂದು ಸುಂದರ ರಾಜ್ಯ … ಜನರು ಒಳ್ಳೆಯವರು … ಮತ್ತು ದೇವರು ಗೋವಾಕ್ಕೆ ಎಲ್ಲವನ್ನೂ ಕೊಟ್ಟಿದ್ದಾನೆ. ಆದರೆ ರಾಜಕಾರಣಿಗಳು ಮತ್ತು ಪಕ್ಷಗಳು ಲೂಟಿ ಮಾಡಿದ್ದಾರೆ. ನಾವು ಈ ಲೂಟಿಯನ್ನು ನಿಲ್ಲಿಸಬೇಕು.ಇದಕ್ಕಾಗಿ ಒಂದು ವಿಸ್ತೃತವಾದ ಯೋಜನೆಯನ್ನು ಮಾಡಿದ್ದೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ರಾಜ್ಯದ ಹಣಕಾಸು ಪರಿಸ್ಥಿತಿಯ ಮೇಲೆ ಕೊರೊನಾ ಪ್ರಭಾವವನ್ನು ಎತ್ತಿ ತೋರಿಸಿದ ಕೇಜ್ರಿವಾಲ್, ಇದರಿಂದಾಗಿ ತೊಂದರೆಗೊಳಗಾದ ಜನರಿಗೆ ನಿರುದ್ಯೋಗ ಭತ್ಯೆಗಳು, ಗಣಿಗಾರಿಕೆ ಉದ್ಯಮದ ಮೇಲೆ ನಿರ್ಬಂಧಗಳು ಮತ್ತು ನಿಷೇಧದಿಂದಾಗಿ ಉದ್ಯೋಗ ಕಳೆದುಕೊಂಡವರಿಗೆ ತಿಂಗಳಿಗೆ ₹ 5,000 ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ವಿಪಕ್ಷ ನಾಯಕರು ನಮ್ಮ ಕೆಲಸವನ್ನು ಹೊಗಳುತ್ತಿದ್ದಾರೆ-ಸಿಧು ಹೇಳಿಕೆಗೆ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ

 

ಗೋವಾದ ಹಾಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರು ಗೋವಾದಲ್ಲಿ ನೀರನ್ನು ಉಚಿತ ಮಾಡಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ಒಳ್ಳೆಯ ಸುದ್ದಿ, ಆದರೆ ಇದನ್ನು ನಾವು ನಾಲ್ಕು ವರ್ಷಗಳ ಹಿಂದೆ ದೆಹಲಿಯಲ್ಲಿ ಮಾಡಿದ್ದೆವು. ಅವರು ಮನೆ ಬಾಗಿಲಿಗೆ ನೀರು ವಿತರಣೆಯನ್ನು ಆರಂಭಿಸಿದ್ದಾರೆ ಎಂದು ನಾನು ಕೇಳಿದೆ… ಇದನ್ನು ನಾವು ಮೂರು ವರ್ಷಗಳ ಹಿಂದೆಯೆ ದೆಹಲಿಯಲ್ಲಿ ಮಾಡಿದ್ದೇವೆ” ಎಂದು ಹೇಳಿದ್ದಾರೆ.

‘‘ಪ್ರಮೋದ್‌ ಸಾವಂತ್ ಅವರು ಗೋವಾದಲ್ಲಿ ‘ದೆಹಲಿ ಮಾದರಿ’ಯನ್ನು ನಕಲು ಮಾಡುತ್ತಿದ್ದಾರೆ…ಮೂಲ ಪಕ್ಷವಾದ ಆಮ್ ಆದ್ಮಿಯೇ ಇರಬೇಕಾದರೆ… ನಕಲು ಮಾಡುವವರ ಅಗತ್ಯವೇನು?” ಎಂದು ಕೇಜ್ರಿವಾಲ್ ಹೇಳಿದ್ದಾರೆ.

300 ಯೂನಿಟ್ ವಿದ್ಯುತ್ ಉಚಿತ ಮತ್ತು ಮತದಾರರಿಗೆ 24 ಗಂಟೆಗಳ ವಿದ್ಯುತ್ ಪೂರೈಕೆಯ ಭರವಸೆಯನ್ನು ನೀಡಿದ್ದಾರೆ. ಕೇಜ್ರಿವಾಲ್ ಅವರು ಈ ಮಾದರಿಯನ್ನು ದೆಹಲಿಯಲ್ಲಿ ಇದನ್ನು ಕಾರ್ಯರೂಪಕ್ಕೆ ತಂದಿದ್ದು, ಉತ್ತರಾಖಂಡ್ ಮತ್ತು ಪಂಜಾಬ್ ಮತದಾರರಿಗೆ ಕೂಡಾ ಇದೇ ಭರವಸೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...