Homeಮುಖಪುಟಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

- Advertisement -
- Advertisement -

ಮಾಜಿ ರಕ್ಷಣಾ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಪಣಜಿ ವಿಧಾನಸಭಾ ಕ್ಷೇತ್ರದಿಂದ 800 ಮತಗಳಿಂದ ಸೋಲು ಅನುಭವಿಸಿದ್ದಾರೆ. ಉತ್ಪಲ್ ಪರಿಕ್ಕರ್ 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಈ ಕ್ಷೇತ್ರದಿಂದ ಬಿಜೆಪಿಯ ಅಟಾನಾಸಿಯೊ ಮಾನ್ಸೆರೇಟ್ (ಬಾಬುಶ್‌) ಗೆದ್ದಿದ್ದಾರೆ. ಆದರೆ, ಕಡಿಮೆ ಅಂತರದಿಂದ ಗೆದ್ದಿರುವ ಕಾರಣ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿಲ್ಲ. ಬಿಜೆಪಿ ಬೆಂಬಲಿಗರು ತನಗೆ ಮತ ಹಾಕಲಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ಉತ್ಪಲ್ ಪರಿಕ್ಕರ್ ಅವರು ಭಾರತದ ಮಾಜಿ ರಕ್ಷಣಾ ಸಚಿವ ಮತ್ತು ಗೋವಾ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರರಾಗಿದ್ದಾರೆ. ಉತ್ಪಲ್ ತಮ್ಮ ತಂದೆಯ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಪಣಜಿಯಲ್ಲಿ ಟಿಕೆಟ್ ನೀಡದ ಕಾರಣ ಈ ಹಿಂದೆ ಬಿಜೆಪಿಯಿಂದ ಹೊರ ಬಂದಿದ್ದರು.

ಇದನ್ನೂ ಓದಿ: Uttar Pradesh Elections Result | ಉತ್ತರ ಪ್ರದೇಶ: ರೈತ ಹೋರಾಟದ ಕೇಂದ್ರ ಲಖಿಂಪುರದ 8 ಕ್ಷೇತ್ರದಲ್ಲಿ 6 BJP ಮುನ್ನಡೆ | Live

ಮೂರು ಬಾರಿ ಗೋವಾದ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019 ರಲ್ಲಿ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅವರ ಬಹುಕಾಲದ ಪ್ರತಿಸ್ಪರ್ಧಿ ಮಾನ್ಸೆರೇಟ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದರು. ಬಳಿಕ ಮಾನ್ಸೆರೇಟ್ ಬಿಜೆಪಿಗೆ ಪಕ್ಷಾಂತರವಾದರು.

ಶಿವಸೇನೆ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಉತ್ಪಲ್ ಪರಿಕ್ಕರ್ ಅವರನ್ನು ಬಹಿರಂಗವಾಗಿ ಬೆಂಬಲಿಸಿತ್ತು. ಶಿವಸೇನೆಯ ಸಂಜಯ್ ರಾವುತ್ ಅವರು ಉತ್ಪಲ್ ಪರಿಕ್ಕರ್ ಅವರ ತಂದೆಗೆ ಗೌರವ ಸಲ್ಲಿಸುವ ಸಲುವಾಗಿ ಬಿಜೆಪಿಯೇತರ ಪಕ್ಷಗಳಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಮನವಿ ಮಾಡಿದ್ದರು.

ಬಿಜೆಪಿಯು ಗೋವಾದ 40 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಗೆಲುವಿನತ್ತ ಸಾಗುತ್ತಿದೆ. ಈಗಾಗಲೇ ವಿಜೇತರಾಗಿ ಹೊರಹೊಮ್ಮಿದ ಮೂವರು ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.


ಇದನ್ನೂ ಓದಿ: ಅತಂತ್ರ ವಿಧಾನಸಭೆಯತ್ತ ಗೋವಾ: ಯಾರಿಗೂ ಬಹುಮತವಿಲ್ಲದಿದ್ದರೂ ಬಿಜೆಪಿ ಮೇಲುಗೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...