Homeಮುಖಪುಟಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

- Advertisement -
- Advertisement -

ಮಾಜಿ ರಕ್ಷಣಾ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಪಣಜಿ ವಿಧಾನಸಭಾ ಕ್ಷೇತ್ರದಿಂದ 800 ಮತಗಳಿಂದ ಸೋಲು ಅನುಭವಿಸಿದ್ದಾರೆ. ಉತ್ಪಲ್ ಪರಿಕ್ಕರ್ 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಈ ಕ್ಷೇತ್ರದಿಂದ ಬಿಜೆಪಿಯ ಅಟಾನಾಸಿಯೊ ಮಾನ್ಸೆರೇಟ್ (ಬಾಬುಶ್‌) ಗೆದ್ದಿದ್ದಾರೆ. ಆದರೆ, ಕಡಿಮೆ ಅಂತರದಿಂದ ಗೆದ್ದಿರುವ ಕಾರಣ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿಲ್ಲ. ಬಿಜೆಪಿ ಬೆಂಬಲಿಗರು ತನಗೆ ಮತ ಹಾಕಲಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ಉತ್ಪಲ್ ಪರಿಕ್ಕರ್ ಅವರು ಭಾರತದ ಮಾಜಿ ರಕ್ಷಣಾ ಸಚಿವ ಮತ್ತು ಗೋವಾ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರರಾಗಿದ್ದಾರೆ. ಉತ್ಪಲ್ ತಮ್ಮ ತಂದೆಯ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಪಣಜಿಯಲ್ಲಿ ಟಿಕೆಟ್ ನೀಡದ ಕಾರಣ ಈ ಹಿಂದೆ ಬಿಜೆಪಿಯಿಂದ ಹೊರ ಬಂದಿದ್ದರು.

ಇದನ್ನೂ ಓದಿ: Uttar Pradesh Elections Result | ಉತ್ತರ ಪ್ರದೇಶ: ರೈತ ಹೋರಾಟದ ಕೇಂದ್ರ ಲಖಿಂಪುರದ 8 ಕ್ಷೇತ್ರದಲ್ಲಿ 6 BJP ಮುನ್ನಡೆ | Live

ಮೂರು ಬಾರಿ ಗೋವಾದ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019 ರಲ್ಲಿ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅವರ ಬಹುಕಾಲದ ಪ್ರತಿಸ್ಪರ್ಧಿ ಮಾನ್ಸೆರೇಟ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದರು. ಬಳಿಕ ಮಾನ್ಸೆರೇಟ್ ಬಿಜೆಪಿಗೆ ಪಕ್ಷಾಂತರವಾದರು.

ಶಿವಸೇನೆ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಉತ್ಪಲ್ ಪರಿಕ್ಕರ್ ಅವರನ್ನು ಬಹಿರಂಗವಾಗಿ ಬೆಂಬಲಿಸಿತ್ತು. ಶಿವಸೇನೆಯ ಸಂಜಯ್ ರಾವುತ್ ಅವರು ಉತ್ಪಲ್ ಪರಿಕ್ಕರ್ ಅವರ ತಂದೆಗೆ ಗೌರವ ಸಲ್ಲಿಸುವ ಸಲುವಾಗಿ ಬಿಜೆಪಿಯೇತರ ಪಕ್ಷಗಳಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಮನವಿ ಮಾಡಿದ್ದರು.

ಬಿಜೆಪಿಯು ಗೋವಾದ 40 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಗೆಲುವಿನತ್ತ ಸಾಗುತ್ತಿದೆ. ಈಗಾಗಲೇ ವಿಜೇತರಾಗಿ ಹೊರಹೊಮ್ಮಿದ ಮೂವರು ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.


ಇದನ್ನೂ ಓದಿ: ಅತಂತ್ರ ವಿಧಾನಸಭೆಯತ್ತ ಗೋವಾ: ಯಾರಿಗೂ ಬಹುಮತವಿಲ್ಲದಿದ್ದರೂ ಬಿಜೆಪಿ ಮೇಲುಗೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...