Homeಮುಖಪುಟಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

- Advertisement -
- Advertisement -

ಮಾಜಿ ರಕ್ಷಣಾ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಪಣಜಿ ವಿಧಾನಸಭಾ ಕ್ಷೇತ್ರದಿಂದ 800 ಮತಗಳಿಂದ ಸೋಲು ಅನುಭವಿಸಿದ್ದಾರೆ. ಉತ್ಪಲ್ ಪರಿಕ್ಕರ್ 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಈ ಕ್ಷೇತ್ರದಿಂದ ಬಿಜೆಪಿಯ ಅಟಾನಾಸಿಯೊ ಮಾನ್ಸೆರೇಟ್ (ಬಾಬುಶ್‌) ಗೆದ್ದಿದ್ದಾರೆ. ಆದರೆ, ಕಡಿಮೆ ಅಂತರದಿಂದ ಗೆದ್ದಿರುವ ಕಾರಣ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿಲ್ಲ. ಬಿಜೆಪಿ ಬೆಂಬಲಿಗರು ತನಗೆ ಮತ ಹಾಕಲಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ಉತ್ಪಲ್ ಪರಿಕ್ಕರ್ ಅವರು ಭಾರತದ ಮಾಜಿ ರಕ್ಷಣಾ ಸಚಿವ ಮತ್ತು ಗೋವಾ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರರಾಗಿದ್ದಾರೆ. ಉತ್ಪಲ್ ತಮ್ಮ ತಂದೆಯ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಪಣಜಿಯಲ್ಲಿ ಟಿಕೆಟ್ ನೀಡದ ಕಾರಣ ಈ ಹಿಂದೆ ಬಿಜೆಪಿಯಿಂದ ಹೊರ ಬಂದಿದ್ದರು.

ಇದನ್ನೂ ಓದಿ: Uttar Pradesh Elections Result | ಉತ್ತರ ಪ್ರದೇಶ: ರೈತ ಹೋರಾಟದ ಕೇಂದ್ರ ಲಖಿಂಪುರದ 8 ಕ್ಷೇತ್ರದಲ್ಲಿ 6 BJP ಮುನ್ನಡೆ | Live

ಮೂರು ಬಾರಿ ಗೋವಾದ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019 ರಲ್ಲಿ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅವರ ಬಹುಕಾಲದ ಪ್ರತಿಸ್ಪರ್ಧಿ ಮಾನ್ಸೆರೇಟ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದರು. ಬಳಿಕ ಮಾನ್ಸೆರೇಟ್ ಬಿಜೆಪಿಗೆ ಪಕ್ಷಾಂತರವಾದರು.

ಶಿವಸೇನೆ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಉತ್ಪಲ್ ಪರಿಕ್ಕರ್ ಅವರನ್ನು ಬಹಿರಂಗವಾಗಿ ಬೆಂಬಲಿಸಿತ್ತು. ಶಿವಸೇನೆಯ ಸಂಜಯ್ ರಾವುತ್ ಅವರು ಉತ್ಪಲ್ ಪರಿಕ್ಕರ್ ಅವರ ತಂದೆಗೆ ಗೌರವ ಸಲ್ಲಿಸುವ ಸಲುವಾಗಿ ಬಿಜೆಪಿಯೇತರ ಪಕ್ಷಗಳಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಮನವಿ ಮಾಡಿದ್ದರು.

ಬಿಜೆಪಿಯು ಗೋವಾದ 40 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಗೆಲುವಿನತ್ತ ಸಾಗುತ್ತಿದೆ. ಈಗಾಗಲೇ ವಿಜೇತರಾಗಿ ಹೊರಹೊಮ್ಮಿದ ಮೂವರು ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.


ಇದನ್ನೂ ಓದಿ: ಅತಂತ್ರ ವಿಧಾನಸಭೆಯತ್ತ ಗೋವಾ: ಯಾರಿಗೂ ಬಹುಮತವಿಲ್ಲದಿದ್ದರೂ ಬಿಜೆಪಿ ಮೇಲುಗೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...