Homeಮುಖಪುಟಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ನಿನ್ನೆ ಗೋವಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ 'ಟಿಎಂಸಿ' ಎಂದರೆ ಟೆಂಪಲ್, ಮಸ್ಜಿದ್, ಚರ್ಚ್ ಎಂದು ಕರೆದಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಸೋಲಿಸೋಣ ಎಂದು ಗೋವಾ ಫಾರ್ವಾಡ್ ಪಾರ್ಟಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಕರೆ ನೀಡಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಬಿಜೆಪಿ ಮೈತ್ರಿಯಿಂದ ಹೊರಬಂದಿರುವ ಅವರು ಇಂದು ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಲಿದ್ದಾರೆ.

“ಭ್ರಷ್ಟ, ಕೋಮುವಾದಿ ಬಿಜೆಪಿಯ ಆಳ್ವಿಕೆಯನ್ನು ಕೊನೆಗೊಳಿಸಲು ವಿರೋಧ ಪಕ್ಷಗಳ ಐಕ್ಯತೆ ಅತಿ ಮುಖ್ಯವಾಗಿದೆ. ಹಾಗಾಗಿ 2022ರ ಚುನಾವಣೆ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಮಮತಾ ಬ್ಯಾನರ್ಜಿಯವರ ಆಹ್ವಾನದ ಮೇರೆಗೆ ನಾನು ಮತ್ತು ನಮ್ಮ ಹಿರಿಯ ಸಹೋದ್ಯೋಗಿಗಳು ಇಂದು ಬೆಳಿಗ್ಗೆ 10 ಗಂಟೆಗೆ ಅವರನ್ನು ಭೇಟಿಯಾಗುತ್ತಿದ್ದೇವೆ” ಎಂದು ವಿಜಯ್ ಸರ್ದೇಸಾಯಿ ತಿಳಿಸಿದ್ದಾರೆ.

ಮೂವರು ವಿಧಾನಸಭಾ ಸದಸ್ಯರನ್ನು ಹೊಂದಿರುವ ಗೋವಾ ಫಾರ್ವಾಡ್ ಪಾರ್ಟಿ ಬಿಜೆಪಿಯೊಂದಿಗೆ ಸರ್ಕಾರದ ಭಾಗವಾಗಿತ್ತು. ವಿಜಯ್ ಸರ್ದೇಸಾಯಿ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ ಬಿಜೆಪಿಯೊಂದಿಗೆ ಬಿರುಕು ಕಾಣಿಸಿಕೊಂಡ ನಂತರ ಬಿಜೆಪಿಯನ್ನು ಸಮಾಜ ವಿರೋಧ ಪಕ್ಷ ಎಂದು ಕರೆದ ಅವರು 2021ರ ಏಪ್ರಿಲ್‌ನಲ್ಲಿ ಮೈತ್ರಿಯಿಂದ ಹೊರಬಂದಿದ್ದರು.

ಅವರು ಮೊದಲು ಕಾಂಗ್ರೆಸ್‌ನೊಂದಿಗೆ ಮೈತ್ರಿಗೆ ಯತ್ನಿಸಿದ್ದರು. ಆದರೆ ಕಾಂಗ್ರೆಸ್ ಒಪ್ಪದಿದ್ದಾಗ ಟಿಎಂಸಿ ಜೊತೆ ಮಾತುಕತೆಗೆ ಮುಂದಾಗಿದ್ದಾರೆ. ಟಿಎಂಸಿ ಸಹ ಗೋವಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಸ್ಪರ್ಧಿಸಲು ನಿರ್ಧರಿಸಿದೆ. ಮೂರು ದಿನಗಳ ಗೋವಾ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಭರ್ಜರಿ ಚುನಾವಣಾ ತಯಾರಿ ನಡೆಸಿದ್ದಾರೆ.

ನಿನ್ನೆ ಗೋವಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ‘ಟಿಎಂಸಿ’ ಎಂದರೆ ಟೆಂಪಲ್ (ದೇವಾಲಯ), ಮಸ್ಜಿದ್ (ಮಸೀದಿ), ಚರ್ಚ್ (ಇಗರ್ಜಿ) ಎಂದು ಕರೆದಿದ್ದಾರೆ. ಹಲವು ದೇವಾಲಯಗಳಿಗೆ ಭೇಟಿ ಕೊಟ್ಟಿರುವ ಅವರು, “ನಾನು ನಿಮ್ಮ ಸಹೋದರಿ. ನಿಮ್ಮ ಅಧಿಕಾರ ಹಿಡಿಯಲು ನಾನು ಬಂದಿಲ್ಲ. ಆದರೆ ಜನರು ತೊಂದರೆ ಎದುರಿಸುತ್ತಿರುವಾಗ ಅವರನ್ನು ನೋಡಲು ನನ್ನ ಹೃದಯ ಬಯಸುತ್ತದೆ” ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಟೆನಿಸ್ ತಾರೆ ‘ಲಿಯಾಂಡರ್‌ ಪೇಸ್’ ಮತ್ತು ನಟಿ, ಕಾರ್ಯಕರ್ತೆ ನಫೀಸಾ ಅಲಿ ಟಿಎಂಸಿ ಸೇರಿರುವುದು ಪಕ್ಷ ಬಲ ತಂದುಕೊಟ್ಟಿದೆ.

40 ಸದಸ್ಯಬಲದ ಗೋವಾ ವಿಧಾನಸಭೆ ಚುನಾವಣೆ ದೇಶದ ಗಮನ ಸೆಳೆದಿದೆ. 2017ರಲ್ಲಿ ನಡೆದ ಚುನವಣೆಯಲ್ಲಿ ಕಾಂಗ್ರೆಸ್ ಪಕ್ಷ 17 ಸ್ಥಾನಗಳಲ್ಲಿ ಜಯಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನ ಗೆದ್ದಿದ್ದ ಬಿಜೆಪಿಯು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿದೆ.


ಇದನ್ನೂ ಓದಿ: ಗೋವಾ: ಟಿಎಂಸಿ ಸೇರಿದ ಮಾಜಿ ಟೆನಿಸ್ ತಾರೆ ‘ಲಿಯಾಂಡರ್‌ ಪೇಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...