Homeಮುಖಪುಟಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ನಿನ್ನೆ ಗೋವಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ 'ಟಿಎಂಸಿ' ಎಂದರೆ ಟೆಂಪಲ್, ಮಸ್ಜಿದ್, ಚರ್ಚ್ ಎಂದು ಕರೆದಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಸೋಲಿಸೋಣ ಎಂದು ಗೋವಾ ಫಾರ್ವಾಡ್ ಪಾರ್ಟಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಕರೆ ನೀಡಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಬಿಜೆಪಿ ಮೈತ್ರಿಯಿಂದ ಹೊರಬಂದಿರುವ ಅವರು ಇಂದು ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಲಿದ್ದಾರೆ.

“ಭ್ರಷ್ಟ, ಕೋಮುವಾದಿ ಬಿಜೆಪಿಯ ಆಳ್ವಿಕೆಯನ್ನು ಕೊನೆಗೊಳಿಸಲು ವಿರೋಧ ಪಕ್ಷಗಳ ಐಕ್ಯತೆ ಅತಿ ಮುಖ್ಯವಾಗಿದೆ. ಹಾಗಾಗಿ 2022ರ ಚುನಾವಣೆ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಮಮತಾ ಬ್ಯಾನರ್ಜಿಯವರ ಆಹ್ವಾನದ ಮೇರೆಗೆ ನಾನು ಮತ್ತು ನಮ್ಮ ಹಿರಿಯ ಸಹೋದ್ಯೋಗಿಗಳು ಇಂದು ಬೆಳಿಗ್ಗೆ 10 ಗಂಟೆಗೆ ಅವರನ್ನು ಭೇಟಿಯಾಗುತ್ತಿದ್ದೇವೆ” ಎಂದು ವಿಜಯ್ ಸರ್ದೇಸಾಯಿ ತಿಳಿಸಿದ್ದಾರೆ.

ಮೂವರು ವಿಧಾನಸಭಾ ಸದಸ್ಯರನ್ನು ಹೊಂದಿರುವ ಗೋವಾ ಫಾರ್ವಾಡ್ ಪಾರ್ಟಿ ಬಿಜೆಪಿಯೊಂದಿಗೆ ಸರ್ಕಾರದ ಭಾಗವಾಗಿತ್ತು. ವಿಜಯ್ ಸರ್ದೇಸಾಯಿ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ ಬಿಜೆಪಿಯೊಂದಿಗೆ ಬಿರುಕು ಕಾಣಿಸಿಕೊಂಡ ನಂತರ ಬಿಜೆಪಿಯನ್ನು ಸಮಾಜ ವಿರೋಧ ಪಕ್ಷ ಎಂದು ಕರೆದ ಅವರು 2021ರ ಏಪ್ರಿಲ್‌ನಲ್ಲಿ ಮೈತ್ರಿಯಿಂದ ಹೊರಬಂದಿದ್ದರು.

ಅವರು ಮೊದಲು ಕಾಂಗ್ರೆಸ್‌ನೊಂದಿಗೆ ಮೈತ್ರಿಗೆ ಯತ್ನಿಸಿದ್ದರು. ಆದರೆ ಕಾಂಗ್ರೆಸ್ ಒಪ್ಪದಿದ್ದಾಗ ಟಿಎಂಸಿ ಜೊತೆ ಮಾತುಕತೆಗೆ ಮುಂದಾಗಿದ್ದಾರೆ. ಟಿಎಂಸಿ ಸಹ ಗೋವಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಸ್ಪರ್ಧಿಸಲು ನಿರ್ಧರಿಸಿದೆ. ಮೂರು ದಿನಗಳ ಗೋವಾ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಭರ್ಜರಿ ಚುನಾವಣಾ ತಯಾರಿ ನಡೆಸಿದ್ದಾರೆ.

ನಿನ್ನೆ ಗೋವಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ‘ಟಿಎಂಸಿ’ ಎಂದರೆ ಟೆಂಪಲ್ (ದೇವಾಲಯ), ಮಸ್ಜಿದ್ (ಮಸೀದಿ), ಚರ್ಚ್ (ಇಗರ್ಜಿ) ಎಂದು ಕರೆದಿದ್ದಾರೆ. ಹಲವು ದೇವಾಲಯಗಳಿಗೆ ಭೇಟಿ ಕೊಟ್ಟಿರುವ ಅವರು, “ನಾನು ನಿಮ್ಮ ಸಹೋದರಿ. ನಿಮ್ಮ ಅಧಿಕಾರ ಹಿಡಿಯಲು ನಾನು ಬಂದಿಲ್ಲ. ಆದರೆ ಜನರು ತೊಂದರೆ ಎದುರಿಸುತ್ತಿರುವಾಗ ಅವರನ್ನು ನೋಡಲು ನನ್ನ ಹೃದಯ ಬಯಸುತ್ತದೆ” ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಟೆನಿಸ್ ತಾರೆ ‘ಲಿಯಾಂಡರ್‌ ಪೇಸ್’ ಮತ್ತು ನಟಿ, ಕಾರ್ಯಕರ್ತೆ ನಫೀಸಾ ಅಲಿ ಟಿಎಂಸಿ ಸೇರಿರುವುದು ಪಕ್ಷ ಬಲ ತಂದುಕೊಟ್ಟಿದೆ.

40 ಸದಸ್ಯಬಲದ ಗೋವಾ ವಿಧಾನಸಭೆ ಚುನಾವಣೆ ದೇಶದ ಗಮನ ಸೆಳೆದಿದೆ. 2017ರಲ್ಲಿ ನಡೆದ ಚುನವಣೆಯಲ್ಲಿ ಕಾಂಗ್ರೆಸ್ ಪಕ್ಷ 17 ಸ್ಥಾನಗಳಲ್ಲಿ ಜಯಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನ ಗೆದ್ದಿದ್ದ ಬಿಜೆಪಿಯು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿದೆ.


ಇದನ್ನೂ ಓದಿ: ಗೋವಾ: ಟಿಎಂಸಿ ಸೇರಿದ ಮಾಜಿ ಟೆನಿಸ್ ತಾರೆ ‘ಲಿಯಾಂಡರ್‌ ಪೇಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...