Homeಮುಖಪುಟಗೋವಾ: ಪ್ರಧಾನಿ ಮೋದಿ ಮೇಲೆ ವಿಡಂಬನಾತ್ಮಕ ಕಾರ್ಟೂನ್ ಶೇರ್ ಮಾಡಿದ್ದಕ್ಕೆ ವ್ಯಕ್ತಿಯ ಬಂಧನ

ಗೋವಾ: ಪ್ರಧಾನಿ ಮೋದಿ ಮೇಲೆ ವಿಡಂಬನಾತ್ಮಕ ಕಾರ್ಟೂನ್ ಶೇರ್ ಮಾಡಿದ್ದಕ್ಕೆ ವ್ಯಕ್ತಿಯ ಬಂಧನ

- Advertisement -
- Advertisement -

“ಹರ್ ಘರ್ ತಿರಂಗ” ಅಭಿಯಾನವನ್ನು ಸೂಚಿಸುವ ವ್ಯಂಗ್ಯ ಚಿತ್ರವನ್ನು ಸಾಮಾಜಿಕ ಜಾಲತಾಣದ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಗೋವಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ರಾಷ್ಟ್ರಧ್ವಜ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅವಮಾನಿಸಲಾಗಿದೆ ಎಂದು ಆ ವ್ಯಕ್ತಿಯ ಮೇಲೆ ಆರೋಪ ಮಾಡಲಾಗಿದೆ.

ಕಲಾವಿದ ಮೀರ್ ಸುಹೇಲ್ ಅವರು ಬಿಡಿಸಿದ ವಿಡಂಬನಾತ್ಮಕ ಕಾರ್ಟೂನ್‌ನ್ನು ಪಣಜಿಯ ನಿವಾಸಿ ನಜಾರಿಯೋ ಡಿಸೋಜಾ ಅವರು ಆಗಸ್ಟ್ 13ರಂದು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ವ್ಯಂಗ್ಯಚಿತ್ರದಲ್ಲಿ ತ್ರಿವರ್ಣ ಧ್ವಜದ ಪಕ್ಕದಲ್ಲಿ ಊಸರವಳ್ಳಿಯ ರೂಪದಲ್ಲಿ ಮೋದಿಯನ್ನು ತೋರಿಸಿದ್ದಾರೆ.

ಈ ವ್ಯಂಗ್ಯಚಿತ್ರವು “ಹರ್ ಘರ್ ತಿರಂಗ” ಅಭಿಯಾನವನ್ನು ಸೂಚಿಸುತ್ತದೆ. ಅದರ ಭಾಗವಾಗಿ ಕೇಂದ್ರವು ಸ್ವಾತಂತ್ರ್ಯ ದಿನದಂದು ಸಾಮಾಜಿಕ ಮಾಧ್ಯಮದಲ್ಲಿ ರಾಷ್ಟ್ರಧ್ವಜದೊಂದಿಗೆ ಸೆಲ್ಫಿಗಳನ್ನು ಪೋಸ್ಟ್ ಮಾಡಲು ನಾಗರಿಕರನ್ನು ಪ್ರೋತ್ಸಾಹಿಸಿತು.

ಪಣಜಿಯ ಸಾಂತಾಕ್ರೂಜ್‌ನ ವಾರ್ಡ್‌ ಸದಸ್ಯ ಇನಾಸಿಯೊ ಡೊಮ್ನಿಕ್‌ ಪಿರೇರಾ ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ”ಸ್ವಾತಂತ್ರ್ಯ ದಿನದ ಮುನ್ನಾದಿನದಂದು ಡಿಸೋಜಾ ಅವರ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ‘ಅತ್ಯಂತ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪೋಸ್ಟ್’ನ್ನು ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ.

”ತಮ್ಮ ಪೋಸ್ಟ್‌ನಲ್ಲಿ ಅವರು ನಮ್ಮ ದೇಶದ ಪ್ರಧಾನಿಯನ್ನು ರಾಷ್ಟ್ರಧ್ವಜದ ಮೇಲೆ ಗೋಸುಂಬೆಯಂತೆ ಚಿತ್ರಿಸಿದ್ದಾರೆ. ಈ ಅಗೌರವವು ನಮ್ಮ ರಾಷ್ಟ್ರೀಯ ಚಿಹ್ನೆಗಳ ಘನತೆಯನ್ನು ಹಾಳುಮಾಡುತ್ತದೆ ಅದೇರೀತಿ ನಮ್ಮ ಗೌರವಾನ್ವಿತ ಪ್ರಧಾನಿಯನ್ನು ಅವಮಾನಿಸುತ್ತದೆ” ಎಂದು ದೂರಿನಲ್ಲಿ ಹೇಳಿದ್ದಾರೆ.

ಡಿಸೋಜಾ ವಿರುದ್ಧ ಐಪಿಸಿ ಸೆಕ್ಷನ್ 500 (ಮಾನನಷ್ಟಕ್ಕಾಗಿ ಶಿಕ್ಷೆ) ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನ ಮಾಡುವುದನ್ನು ತಡೆಯುವ ಕಾಯಿದೆ 1971ರ ಸೆಕ್ಷನ್ 2 (ಭಾರತದ ರಾಷ್ಟ್ರೀಯ ಧ್ವಜ ಮತ್ತು ಭಾರತದ ಸಂವಿಧಾನಕ್ಕೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಆರೋಪಿಯನ್ನು ತನಿಖೆಗೆ ಒಳಪಡಿಸಲು ನೋಟಿಸ್ ನೀಡಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...