Homeಮುಖಪುಟಗೋವಾ: ಪಾಕ್ ತಂಡ ಬೆಂಬಲಿಸಿದ ವ್ಯಕ್ತಿಗೆ 'ಭಾರತ್ ಮಾತಾ ಕಿ ಜೈ' ಘೋಷಣೆ ಕೂಗುವಂತೆ ಒತ್ತಾಯ

ಗೋವಾ: ಪಾಕ್ ತಂಡ ಬೆಂಬಲಿಸಿದ ವ್ಯಕ್ತಿಗೆ ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಒತ್ತಾಯ

- Advertisement -
- Advertisement -

ಗೋವಾದ ಕ್ಯಾಲಂಗುಟ್‌ನಲ್ಲಿನ ಅಂಗಡಿ ಮಾಲೀಕರೊಬ್ಬರು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಮತ್ತು ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಬಲವಂತಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಟ್ರಾವೆಲ್ ವ್ಲೋಗರ್ ದಿನಾಂಕವಿಲ್ಲದ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಈ ಘಟನೆ ನಡೆದಿದೆ. ಉತ್ತರ ಗೋವಾದ ಕ್ಯಾಲಂಗುಟ್‌ನಲ್ಲಿರುವ ಅಂಗಡಿ ಮಾಲೀಕರು, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ವೇಳೆ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.

ವಿಡಿಯೋದಲ್ಲಿ ವ್ಲಾಗರ್, ಆ ವ್ಯಕ್ತಿಯೊಂದಿಗೆ ಸಂಕ್ಷಿಪ್ತ ಸಂಭಾಷಣೆ ನಡೆಸುತ್ತಿರುವುದು ಕಂಡುಬಂದಿದೆ. ”ಯಾರು ಆಡುತ್ತಿದ್ದಾರೆ? ನೀವು ನ್ಯೂಜಿಲೆಂಡ್‌ಗೆ ಬೆಂಬಲ ವ್ಯಕ್ತಪಡಿಸುತ್ತಿದ್ದೀರಾ?” ಎಂದು ಅಂಗಡಿ ಮಾಲೀಕರನ್ನು ವ್ಲಾಗರ್ ಕೇಳುತ್ತಾನೆ. ಆಗ ಆ ವ್ಯಕ್ತಿ “ಪಾಕಿಸ್ತಾನಕ್ಕೆ” ಎಂದು ಉತ್ತರಿಸುತ್ತಾನೆ. ನಂತರ ವ್ಲಾಗರ್ ಅವನನ್ನು ಏಕೆ ಎಂದು ಕೇಳುತ್ತಾನೆ, ಅದಕ್ಕೆ ಆ ವ್ಯಕ್ತಿ ಇದು ಮುಸ್ಲಿಂ ಪ್ರದೇಶ ಎಂದು ಉತ್ತರಿಸುತ್ತಾನೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು: ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದೇನು?

ಈ ವಿಡಿಯೋ ವೈರಲ್ ಆದ ಬಳಿಕ ಗುರುವಾರದಂದು ಜನರ ಗುಂಪೊಂದು ಅಂಗಡಿ ಮಾಲೀಕರನ್ನು ಸಂಪರ್ಕಿಸಿ ಪಾಕಿಸ್ತಾನವನ್ನು ಬೆಂಬಲಿಸಿದ್ದಕ್ಕಾಗಿ ಪ್ರಶ್ನಿಸಿದ್ದಾರೆ. ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ದೃಶ್ಯಾವಳಿಯಲ್ಲಿ, ಗುಂಪಿನ ಸದಸ್ಯರೊಬ್ಬರು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡುತ್ತಿರುವುದನ್ನು ಕಾಣಬಹುದು, ”ಇಡೀ ಗ್ರಾಮವು ಕಲಾಂಗುಟೆಗೆ ಸೇರಿದೆ ಮತ್ತು ಇದು ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪಿಗೆ ಸೇರಿದ್ದಲ್ಲ” ಎಂದು ಹೇಳಿದ್ದಾನೆ.

ಆ ಬಳಿಕ ಅಂಗಡಿಯ ಮಾಲೀಕನಿಗೆ ಮಂಡಿಯೂರಿ ದೇಶವಾಸಿಗಳ ಕ್ಷಮೆಯಾಚಿಸುವಂತೆ ಕೇಳಲಾಗುತ್ತದೆ. ಆರಂಭದಲ್ಲಿ ಹಿಂಜರಿದ ಅಂಗಡಿ ಮಾಲೀಕರು ಕೊನೆಗೆ ಮಂಡಿಯೂರಿ ಕಿವಿಗಳನ್ನು ಹಿಡಿದುಕೊಂಡು ಕ್ಷಮೆಯಾಚಿಸಿದರು. ”ಭಾರತ್ ಮಾತಾ ಕಿ ಜೈ” ಘೋಷಣೆಗೆ ಒತ್ತಾಯಿಸಿ, ಅವರಿಂದ ಹೇಳಿರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರಿಗೆ ಈವರೆಗೂ ಯಾವುದೇ ದೂರುಗಳು ಬಂದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು...

ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್‌ನಲ್ಲಿ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು...

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...

ಯುಪಿ: ತಂದೆ ಮತ್ತು ಮಾನಸಿಕ ಅಸ್ವಸ್ಥ ಮಗಳನ್ನು ಐದು ವರ್ಷ ಕೋಣೆಯಲ್ಲಿ ಕೂಡಿ ಹಾಕಿದ ಸೇವಕ ದಂಪತಿ: ತಂದೆ ಸಾವು, ಅಸ್ಥಿಪಂಜರದಂತೆ ಪತ್ತೆಯಾದ ಮಗಳು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಮಾನಸಿಕ ಅಸ್ವಸ್ಥ ಮಗಳನ್ನು ಅವರ ಆರೈಕೆದಾರರು ಐದು ವರ್ಷಗಳ ಕಾಲ ಬಂಧಿಯಾಗಿಟ್ಟು ಚಿತ್ರಹಿಂಸೆ ನೀಡಿ, ಆ ವ್ಯಕ್ತಿಯ ಸಾವಿಗೆ ಕಾರಣವಾದ...

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ...