Homeರಾಷ್ಟ್ರೀಯಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ...

ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಪುತ್ರಿ ಜೊಯಿಶ್ ಇರಾನಿ ನಡೆಸುತ್ತಿರುವ ರೆಸ್ಟೋರೆಂಟ್ ಅಕ್ರಮ ಬಾರ್ ಲೈಸೆನ್ಸ್ ಹೊಂದಿದೆ ಎಂಬ ಆರೋಪದ ಮೇಲೆ ಗೋವಾ ಅಬಕಾರಿ ಆಯುಕ್ತರು ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

‘ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್’ ಎಂಬ ಐಶಾರಾಮಿ ರೆಸ್ಟೋರೆಂಟ್‌ ಉತ್ತರ ಗೋವಾದ ಅಸ್ಸಾಗಾವೊದಲ್ಲಿದ್ದು, ಅದನ್ನು ಜೋಯಿಶ್ ಇರಾನಿ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ವರ್ಷಗಳ ಹಿಂದೆ ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ರೆಸ್ಟೋರೆಂಟ್‌ಗೆ ಅಕ್ರಮವಾಗಿ ಪರವಾನಗಿಯನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೋಯಿಶ್‌ ವಿರುದ್ಧ ವಕೀಲರಾದ ಐರಿಸ್ ರೋಡ್ರಿಗಸ್ ಅವರು, “ಜೋಯಿಶ್ ಅವರು ಮೋಸದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮದ್ಯದ ಪರವಾನಗಿಯನ್ನು ಪಡೆದುಕೊಂಡಿದ್ದಾರೆ” ಎಂದು ದೂರು ನೀಡಿದ್ದರು. ಅವರ ದೂರಿನಂತೆ, ಜುಲೈ 21 ರಂದು ಗೋವಾದ ಅಬಕಾರಿ ಕಮಿಷನರ್‌ ನಾರಾಯಣ್ ಎಂ. ಗಡ್ ಅವರು ಜೊಯಿಶ್ ಇರಾನಿ ನಡೆಸುತ್ತಿರುವ ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್‌ಗೆ ಷೋಕಾಸ್ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

“ಪರವಾನಗಿದಾರರು 17/05/2021 ರಂದು ನಿಧನರಾಗಿದ್ದರೂ ಸಹ, ಕಳೆದ ತಿಂಗಳು ಪರವಾನಗಿಯನ್ನು ನವೀಕರಿಸಲಾಗಿದೆ” ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕರಣದ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಲಾಗಿದೆ.

“ಪರವಾನಗಿ ನವೀಕರಣಕ್ಕಾಗಿ ಅರ್ಜಿಯನ್ನು ಜೂನ್ 22, 2022 ರಂದು ಆಂಥೋನಿ ದ್ಗಾಮಾ ಅವರ ಹೆಸರಿನಲ್ಲಿ ಮಾಡಲಾಗಿದೆ. ಆದರೆ ದ್ಗಾಮಾ ಅವರು ಕಳೆದ ವರ್ಷ ಮೇ ತಿಂಗಳಲ್ಲಿ ನಿಧನರಾದರು. ‘ದಯವಿಟ್ಟು 2022-23ನೇ ಸಾಲಿಗೆ ಈ ಪರವಾನಗಿಯನ್ನು ನವೀಕರಿಸಿ ಮತ್ತು ಆರು ತಿಂಗಳೊಳಗೆ ಈ ಪರವಾನಗಿಯನ್ನು ವರ್ಗಾಯಿಸಲಾಗುವುದು’ ಎಂದು ಲೈಸನ್ಸ್ ಹೊಂದಿರುವ ದ್ಗಾಮಾ ಪರವಾಗಿ ಬೇರೆ ಯಾರಾದರೂ ಸಹಿ ಮಾಡಿದ್ದಾರೆ” ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಆರ್‌ಟಿಐ ಅರ್ಜಿಯ ಮೂಲಕ ದಾಖಲೆಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿರುವ ವಕೀಲ ರೋಡ್ರಿಗಸ್ ಅವರು, “ಕೇಂದ್ರ ಸಚಿವರ ಕುಟುಂಬವು ಅಬಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ಅಸ್ಸಾಗಾವೊ ಪಂಚಾಯತ್‌ನೊಂದಿಗೆ ಸೇರಿಸಿ ನಡೆಸಿದ ಈ ಮೆಗಾ ವಂಚನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

“ಗೋವಾದಲ್ಲಿ ಅಬಕಾರಿ ನಿಯಮಗಳು ಅಸ್ತಿತ್ವದಲ್ಲಿರುವ ರೆಸ್ಟೋರೆಂಟ್‌ಗೆ ಮಾತ್ರ ಬಾರ್ ಪರವಾನಗಿಯನ್ನು ನೀಡುತ್ತವೆ. ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್ ಪ್ರಕರಣದಲ್ಲಿ, ಅಬಕಾರಿ ಇಲಾಖೆಯು ಕಳೆದ ವರ್ಷ ಫೆಬ್ರವರಿಯಲ್ಲಿ ಐಷಾರಾಮಿ ರೆಸ್ಟೋರೆಂಟ್ ಪರವಾನಗಿಯನ್ನು ಹೊಂದುವ ಮೊದಲೇ ಮಾಲೀಕರಿಗೆ ವಿದೇಶಿ ಮದ್ಯ, ಭಾರತೀಯ ನಿರ್ಮಿತ ವಿದೇಶಿ ಮದ್ಯ ಮತ್ತು ದೇಶೀಯ ಮದ್ಯಕ್ಕೆ ಪರವಾನಗಿ ನೀಡಲು ನಿಯಮಗಳನ್ನು ಉಲ್ಲಂಘಿಸಿತ್ತು” ಎಂದು ವಕೀಲ ರೋಡಿಗ್ರಸ್ ಅವರು ಹೇಳಿದ್ದಾರೆ.

ಎಲ್ಲಾ ಅಬಕಾರಿ ಅರ್ಜಿಗಳನ್ನು ಆಂಥೋನಿ ದ್ಗಾಮಾ ಹೆಸರಿನಲ್ಲಿ ಮಾಡಲಾಗಿದೆ, ಅವರ ಆಧಾರ್ ಕಾರ್ಡ್ ಡಿಸೆಂಬರ್ 2020 ರಲ್ಲಿ ನೀಡಲಾಗಿದ್ದು ಅವರನ್ನು ಮುಂಬೈನ ವಿಲೆ ಪಾರ್ಲೆ ನಿವಾಸಿ ಎಂದು ದಾಖಲೆ ಹೇಳುತ್ತದೆ.

ಪ್ರಕರಣದ ಸುಳಿವು ಸಿಕ್ಕ ನಂತರ ವಕೀಲ ರೋಡಿಗ್ರಸ್ ಅವರು, ತಿಂಗಳುಗಳ ಕಾಲ ಹುಡುಕಾಡಿ ಮುಂಬೈನ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ದ್ಗಾಮಾ ಅವರ ಮರಣ ಪ್ರಮಾಣಪತ್ರವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ವ್ಯಕ್ತಿಯು ಗೋವಾದಲ್ಲಿ 1,200 ಚದರ ಮೀಟರ್ ವಿಸ್ತಾರವಾದ ಆಸ್ತಿಯೊಂದಿಗೆ ಐಶಾರಾಮಿ ರೆಸ್ಟೋರೆಂಟ್ ಹೊಂದಲು ಸಾಧ್ಯವೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಆರೋಪ: ಯುಪಿ ಪ್ರಾಧ್ಯಾಪಕ ಜೈಲಿಗೆ

ಆಹಾರದ ಬಗ್ಗೆ ಕಾರ್ಯಕ್ರಮ ನಡೆಸುವ ಕುನಾಲ್ ವಿಜಯ್ಕರ್ ಅವರೊಂದಿಗೆ ಯುಟ್ಯೂಬ್‌ನಲ್ಲಿ ಮಾತನಾಡಿದ್ದ ಜೋಯಿಶ್ ಇರಾನಿ, “ಗೋವಾ ಒಂದು ದೊಡ್ಡ ಪ್ರವಾಸಿ ಕೇಂದ್ರವಾಗಿದ್ದರೂ, ಅದು ಅಂತರಾಷ್ಟ್ರೀಯ ಮಟ್ಟದ ಅತ್ಯುತ್ತಮ ಮಟ್ಟದ ಆಹಾರದ ವಿಷಯದಲ್ಲಿ ಹಿಂದುಳಿದಿದೆ. ಹಾಗಾಗಿ ಸಿಲ್ಲಿ ಸೋಲ್ಸ್ ಕೆಫೆಯನ್ನು ಗೋವಾದ ‘ಆಹಾರ ತಾಣ’ ಆಗಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಒಕ್ಕೂಟ ಸರಕಾರದ ಸಂಸ್ಕೃತಿ ಸಚಿವರ ಮಗಳು ಮಗಳು ನಿಯಮಗಳಿಗೆ ಅತೀತರಲ್ಲವಾ!?

  2. ದುಡ್ಡಿದ್ದವನೇ ದೊಡ್ಡಪ್ಪ…‌ ಭಾಜಪದವರೆಲ್ಲಾ ಮಾಡೋ ಎಲ್ಲಾ ಹಲ್ಕಟ್ ಕೆಲಸಗಳು ಮುಂದೆ ಬಿ ಫ಼ಾರ್ಮ್ ಹಾಕಿಕೊಂಡು ಖುಲಾಸೆಯಾಗ್ತಾರೆ… ಅತ್ಯಂತ ಸುಸ೦ಸ್ಕ್ರುತ ಪಕ್ಷ ನಮ್ಮ ಭಾಜಪ ಪಕ್ಷ.

  3. ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆ ನಡೆಯಬೇಕು.

    ಸಂಪೂರ್ಣ ಆತ್ಮ ವಿಶ್ವಾಸದೊಂದಿಗೆ INC ನಾಯಕರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲು ಮಾಡುವ ಮಾತನಾಡುತ್ತಿರುವ ಮಂತ್ರಿಯವರ ವಿರುದ್ಧ Congress ನಾಯಕರು ವಾಗ್ಧಾಳಿ ಮಾಡದಿರುವುದು ವರದಿಯ ಸತ್ಯಾಸತ್ಯತೆಯ ಬಗ್ಗೆ ಅನುಮಾನ ಮೂಡಿಸುತ್ತಿದೆ.
    ಈಗಿನ ಪರಿಸ್ಥಿತಿಯಲ್ಲಿ ಮಾಧ್ಯಮಗಳು ವಸ್ತುಸ್ಥಿತಿಯ ಮನವರಿಕೆ ಮಾಡಿಕೊಡುವ ಜವಾಬ್ದಾರಿ ಹೊಂದಿವೆ ಮತ್ತು ಈ ವರದಿ ಸತ್ಯವಾಗಿದ್ದರೆ, ಅದು ಭಾಜಪ ಆಡಳಿತದ ಅಂತ್ಯದ ಆರಂಭವಾಗಬಲ್ಲದು

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...