Homeರಾಷ್ಟ್ರೀಯಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ...

ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಪುತ್ರಿ ಜೊಯಿಶ್ ಇರಾನಿ ನಡೆಸುತ್ತಿರುವ ರೆಸ್ಟೋರೆಂಟ್ ಅಕ್ರಮ ಬಾರ್ ಲೈಸೆನ್ಸ್ ಹೊಂದಿದೆ ಎಂಬ ಆರೋಪದ ಮೇಲೆ ಗೋವಾ ಅಬಕಾರಿ ಆಯುಕ್ತರು ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

‘ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್’ ಎಂಬ ಐಶಾರಾಮಿ ರೆಸ್ಟೋರೆಂಟ್‌ ಉತ್ತರ ಗೋವಾದ ಅಸ್ಸಾಗಾವೊದಲ್ಲಿದ್ದು, ಅದನ್ನು ಜೋಯಿಶ್ ಇರಾನಿ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ವರ್ಷಗಳ ಹಿಂದೆ ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ರೆಸ್ಟೋರೆಂಟ್‌ಗೆ ಅಕ್ರಮವಾಗಿ ಪರವಾನಗಿಯನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೋಯಿಶ್‌ ವಿರುದ್ಧ ವಕೀಲರಾದ ಐರಿಸ್ ರೋಡ್ರಿಗಸ್ ಅವರು, “ಜೋಯಿಶ್ ಅವರು ಮೋಸದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮದ್ಯದ ಪರವಾನಗಿಯನ್ನು ಪಡೆದುಕೊಂಡಿದ್ದಾರೆ” ಎಂದು ದೂರು ನೀಡಿದ್ದರು. ಅವರ ದೂರಿನಂತೆ, ಜುಲೈ 21 ರಂದು ಗೋವಾದ ಅಬಕಾರಿ ಕಮಿಷನರ್‌ ನಾರಾಯಣ್ ಎಂ. ಗಡ್ ಅವರು ಜೊಯಿಶ್ ಇರಾನಿ ನಡೆಸುತ್ತಿರುವ ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್‌ಗೆ ಷೋಕಾಸ್ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

“ಪರವಾನಗಿದಾರರು 17/05/2021 ರಂದು ನಿಧನರಾಗಿದ್ದರೂ ಸಹ, ಕಳೆದ ತಿಂಗಳು ಪರವಾನಗಿಯನ್ನು ನವೀಕರಿಸಲಾಗಿದೆ” ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕರಣದ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಲಾಗಿದೆ.

“ಪರವಾನಗಿ ನವೀಕರಣಕ್ಕಾಗಿ ಅರ್ಜಿಯನ್ನು ಜೂನ್ 22, 2022 ರಂದು ಆಂಥೋನಿ ದ್ಗಾಮಾ ಅವರ ಹೆಸರಿನಲ್ಲಿ ಮಾಡಲಾಗಿದೆ. ಆದರೆ ದ್ಗಾಮಾ ಅವರು ಕಳೆದ ವರ್ಷ ಮೇ ತಿಂಗಳಲ್ಲಿ ನಿಧನರಾದರು. ‘ದಯವಿಟ್ಟು 2022-23ನೇ ಸಾಲಿಗೆ ಈ ಪರವಾನಗಿಯನ್ನು ನವೀಕರಿಸಿ ಮತ್ತು ಆರು ತಿಂಗಳೊಳಗೆ ಈ ಪರವಾನಗಿಯನ್ನು ವರ್ಗಾಯಿಸಲಾಗುವುದು’ ಎಂದು ಲೈಸನ್ಸ್ ಹೊಂದಿರುವ ದ್ಗಾಮಾ ಪರವಾಗಿ ಬೇರೆ ಯಾರಾದರೂ ಸಹಿ ಮಾಡಿದ್ದಾರೆ” ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಆರ್‌ಟಿಐ ಅರ್ಜಿಯ ಮೂಲಕ ದಾಖಲೆಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿರುವ ವಕೀಲ ರೋಡ್ರಿಗಸ್ ಅವರು, “ಕೇಂದ್ರ ಸಚಿವರ ಕುಟುಂಬವು ಅಬಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ಅಸ್ಸಾಗಾವೊ ಪಂಚಾಯತ್‌ನೊಂದಿಗೆ ಸೇರಿಸಿ ನಡೆಸಿದ ಈ ಮೆಗಾ ವಂಚನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

“ಗೋವಾದಲ್ಲಿ ಅಬಕಾರಿ ನಿಯಮಗಳು ಅಸ್ತಿತ್ವದಲ್ಲಿರುವ ರೆಸ್ಟೋರೆಂಟ್‌ಗೆ ಮಾತ್ರ ಬಾರ್ ಪರವಾನಗಿಯನ್ನು ನೀಡುತ್ತವೆ. ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್ ಪ್ರಕರಣದಲ್ಲಿ, ಅಬಕಾರಿ ಇಲಾಖೆಯು ಕಳೆದ ವರ್ಷ ಫೆಬ್ರವರಿಯಲ್ಲಿ ಐಷಾರಾಮಿ ರೆಸ್ಟೋರೆಂಟ್ ಪರವಾನಗಿಯನ್ನು ಹೊಂದುವ ಮೊದಲೇ ಮಾಲೀಕರಿಗೆ ವಿದೇಶಿ ಮದ್ಯ, ಭಾರತೀಯ ನಿರ್ಮಿತ ವಿದೇಶಿ ಮದ್ಯ ಮತ್ತು ದೇಶೀಯ ಮದ್ಯಕ್ಕೆ ಪರವಾನಗಿ ನೀಡಲು ನಿಯಮಗಳನ್ನು ಉಲ್ಲಂಘಿಸಿತ್ತು” ಎಂದು ವಕೀಲ ರೋಡಿಗ್ರಸ್ ಅವರು ಹೇಳಿದ್ದಾರೆ.

ಎಲ್ಲಾ ಅಬಕಾರಿ ಅರ್ಜಿಗಳನ್ನು ಆಂಥೋನಿ ದ್ಗಾಮಾ ಹೆಸರಿನಲ್ಲಿ ಮಾಡಲಾಗಿದೆ, ಅವರ ಆಧಾರ್ ಕಾರ್ಡ್ ಡಿಸೆಂಬರ್ 2020 ರಲ್ಲಿ ನೀಡಲಾಗಿದ್ದು ಅವರನ್ನು ಮುಂಬೈನ ವಿಲೆ ಪಾರ್ಲೆ ನಿವಾಸಿ ಎಂದು ದಾಖಲೆ ಹೇಳುತ್ತದೆ.

ಪ್ರಕರಣದ ಸುಳಿವು ಸಿಕ್ಕ ನಂತರ ವಕೀಲ ರೋಡಿಗ್ರಸ್ ಅವರು, ತಿಂಗಳುಗಳ ಕಾಲ ಹುಡುಕಾಡಿ ಮುಂಬೈನ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ದ್ಗಾಮಾ ಅವರ ಮರಣ ಪ್ರಮಾಣಪತ್ರವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ವ್ಯಕ್ತಿಯು ಗೋವಾದಲ್ಲಿ 1,200 ಚದರ ಮೀಟರ್ ವಿಸ್ತಾರವಾದ ಆಸ್ತಿಯೊಂದಿಗೆ ಐಶಾರಾಮಿ ರೆಸ್ಟೋರೆಂಟ್ ಹೊಂದಲು ಸಾಧ್ಯವೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಆರೋಪ: ಯುಪಿ ಪ್ರಾಧ್ಯಾಪಕ ಜೈಲಿಗೆ

ಆಹಾರದ ಬಗ್ಗೆ ಕಾರ್ಯಕ್ರಮ ನಡೆಸುವ ಕುನಾಲ್ ವಿಜಯ್ಕರ್ ಅವರೊಂದಿಗೆ ಯುಟ್ಯೂಬ್‌ನಲ್ಲಿ ಮಾತನಾಡಿದ್ದ ಜೋಯಿಶ್ ಇರಾನಿ, “ಗೋವಾ ಒಂದು ದೊಡ್ಡ ಪ್ರವಾಸಿ ಕೇಂದ್ರವಾಗಿದ್ದರೂ, ಅದು ಅಂತರಾಷ್ಟ್ರೀಯ ಮಟ್ಟದ ಅತ್ಯುತ್ತಮ ಮಟ್ಟದ ಆಹಾರದ ವಿಷಯದಲ್ಲಿ ಹಿಂದುಳಿದಿದೆ. ಹಾಗಾಗಿ ಸಿಲ್ಲಿ ಸೋಲ್ಸ್ ಕೆಫೆಯನ್ನು ಗೋವಾದ ‘ಆಹಾರ ತಾಣ’ ಆಗಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಒಕ್ಕೂಟ ಸರಕಾರದ ಸಂಸ್ಕೃತಿ ಸಚಿವರ ಮಗಳು ಮಗಳು ನಿಯಮಗಳಿಗೆ ಅತೀತರಲ್ಲವಾ!?

  2. ದುಡ್ಡಿದ್ದವನೇ ದೊಡ್ಡಪ್ಪ…‌ ಭಾಜಪದವರೆಲ್ಲಾ ಮಾಡೋ ಎಲ್ಲಾ ಹಲ್ಕಟ್ ಕೆಲಸಗಳು ಮುಂದೆ ಬಿ ಫ಼ಾರ್ಮ್ ಹಾಕಿಕೊಂಡು ಖುಲಾಸೆಯಾಗ್ತಾರೆ… ಅತ್ಯಂತ ಸುಸ೦ಸ್ಕ್ರುತ ಪಕ್ಷ ನಮ್ಮ ಭಾಜಪ ಪಕ್ಷ.

  3. ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆ ನಡೆಯಬೇಕು.

    ಸಂಪೂರ್ಣ ಆತ್ಮ ವಿಶ್ವಾಸದೊಂದಿಗೆ INC ನಾಯಕರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲು ಮಾಡುವ ಮಾತನಾಡುತ್ತಿರುವ ಮಂತ್ರಿಯವರ ವಿರುದ್ಧ Congress ನಾಯಕರು ವಾಗ್ಧಾಳಿ ಮಾಡದಿರುವುದು ವರದಿಯ ಸತ್ಯಾಸತ್ಯತೆಯ ಬಗ್ಗೆ ಅನುಮಾನ ಮೂಡಿಸುತ್ತಿದೆ.
    ಈಗಿನ ಪರಿಸ್ಥಿತಿಯಲ್ಲಿ ಮಾಧ್ಯಮಗಳು ವಸ್ತುಸ್ಥಿತಿಯ ಮನವರಿಕೆ ಮಾಡಿಕೊಡುವ ಜವಾಬ್ದಾರಿ ಹೊಂದಿವೆ ಮತ್ತು ಈ ವರದಿ ಸತ್ಯವಾಗಿದ್ದರೆ, ಅದು ಭಾಜಪ ಆಡಳಿತದ ಅಂತ್ಯದ ಆರಂಭವಾಗಬಲ್ಲದು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...