Homeರಾಷ್ಟ್ರೀಯಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ...

ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಪುತ್ರಿ ಜೊಯಿಶ್ ಇರಾನಿ ನಡೆಸುತ್ತಿರುವ ರೆಸ್ಟೋರೆಂಟ್ ಅಕ್ರಮ ಬಾರ್ ಲೈಸೆನ್ಸ್ ಹೊಂದಿದೆ ಎಂಬ ಆರೋಪದ ಮೇಲೆ ಗೋವಾ ಅಬಕಾರಿ ಆಯುಕ್ತರು ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

‘ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್’ ಎಂಬ ಐಶಾರಾಮಿ ರೆಸ್ಟೋರೆಂಟ್‌ ಉತ್ತರ ಗೋವಾದ ಅಸ್ಸಾಗಾವೊದಲ್ಲಿದ್ದು, ಅದನ್ನು ಜೋಯಿಶ್ ಇರಾನಿ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ವರ್ಷಗಳ ಹಿಂದೆ ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ರೆಸ್ಟೋರೆಂಟ್‌ಗೆ ಅಕ್ರಮವಾಗಿ ಪರವಾನಗಿಯನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೋಯಿಶ್‌ ವಿರುದ್ಧ ವಕೀಲರಾದ ಐರಿಸ್ ರೋಡ್ರಿಗಸ್ ಅವರು, “ಜೋಯಿಶ್ ಅವರು ಮೋಸದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮದ್ಯದ ಪರವಾನಗಿಯನ್ನು ಪಡೆದುಕೊಂಡಿದ್ದಾರೆ” ಎಂದು ದೂರು ನೀಡಿದ್ದರು. ಅವರ ದೂರಿನಂತೆ, ಜುಲೈ 21 ರಂದು ಗೋವಾದ ಅಬಕಾರಿ ಕಮಿಷನರ್‌ ನಾರಾಯಣ್ ಎಂ. ಗಡ್ ಅವರು ಜೊಯಿಶ್ ಇರಾನಿ ನಡೆಸುತ್ತಿರುವ ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್‌ಗೆ ಷೋಕಾಸ್ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

“ಪರವಾನಗಿದಾರರು 17/05/2021 ರಂದು ನಿಧನರಾಗಿದ್ದರೂ ಸಹ, ಕಳೆದ ತಿಂಗಳು ಪರವಾನಗಿಯನ್ನು ನವೀಕರಿಸಲಾಗಿದೆ” ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕರಣದ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಲಾಗಿದೆ.

“ಪರವಾನಗಿ ನವೀಕರಣಕ್ಕಾಗಿ ಅರ್ಜಿಯನ್ನು ಜೂನ್ 22, 2022 ರಂದು ಆಂಥೋನಿ ದ್ಗಾಮಾ ಅವರ ಹೆಸರಿನಲ್ಲಿ ಮಾಡಲಾಗಿದೆ. ಆದರೆ ದ್ಗಾಮಾ ಅವರು ಕಳೆದ ವರ್ಷ ಮೇ ತಿಂಗಳಲ್ಲಿ ನಿಧನರಾದರು. ‘ದಯವಿಟ್ಟು 2022-23ನೇ ಸಾಲಿಗೆ ಈ ಪರವಾನಗಿಯನ್ನು ನವೀಕರಿಸಿ ಮತ್ತು ಆರು ತಿಂಗಳೊಳಗೆ ಈ ಪರವಾನಗಿಯನ್ನು ವರ್ಗಾಯಿಸಲಾಗುವುದು’ ಎಂದು ಲೈಸನ್ಸ್ ಹೊಂದಿರುವ ದ್ಗಾಮಾ ಪರವಾಗಿ ಬೇರೆ ಯಾರಾದರೂ ಸಹಿ ಮಾಡಿದ್ದಾರೆ” ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಆರ್‌ಟಿಐ ಅರ್ಜಿಯ ಮೂಲಕ ದಾಖಲೆಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿರುವ ವಕೀಲ ರೋಡ್ರಿಗಸ್ ಅವರು, “ಕೇಂದ್ರ ಸಚಿವರ ಕುಟುಂಬವು ಅಬಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ಅಸ್ಸಾಗಾವೊ ಪಂಚಾಯತ್‌ನೊಂದಿಗೆ ಸೇರಿಸಿ ನಡೆಸಿದ ಈ ಮೆಗಾ ವಂಚನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

“ಗೋವಾದಲ್ಲಿ ಅಬಕಾರಿ ನಿಯಮಗಳು ಅಸ್ತಿತ್ವದಲ್ಲಿರುವ ರೆಸ್ಟೋರೆಂಟ್‌ಗೆ ಮಾತ್ರ ಬಾರ್ ಪರವಾನಗಿಯನ್ನು ನೀಡುತ್ತವೆ. ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್ ಪ್ರಕರಣದಲ್ಲಿ, ಅಬಕಾರಿ ಇಲಾಖೆಯು ಕಳೆದ ವರ್ಷ ಫೆಬ್ರವರಿಯಲ್ಲಿ ಐಷಾರಾಮಿ ರೆಸ್ಟೋರೆಂಟ್ ಪರವಾನಗಿಯನ್ನು ಹೊಂದುವ ಮೊದಲೇ ಮಾಲೀಕರಿಗೆ ವಿದೇಶಿ ಮದ್ಯ, ಭಾರತೀಯ ನಿರ್ಮಿತ ವಿದೇಶಿ ಮದ್ಯ ಮತ್ತು ದೇಶೀಯ ಮದ್ಯಕ್ಕೆ ಪರವಾನಗಿ ನೀಡಲು ನಿಯಮಗಳನ್ನು ಉಲ್ಲಂಘಿಸಿತ್ತು” ಎಂದು ವಕೀಲ ರೋಡಿಗ್ರಸ್ ಅವರು ಹೇಳಿದ್ದಾರೆ.

ಎಲ್ಲಾ ಅಬಕಾರಿ ಅರ್ಜಿಗಳನ್ನು ಆಂಥೋನಿ ದ್ಗಾಮಾ ಹೆಸರಿನಲ್ಲಿ ಮಾಡಲಾಗಿದೆ, ಅವರ ಆಧಾರ್ ಕಾರ್ಡ್ ಡಿಸೆಂಬರ್ 2020 ರಲ್ಲಿ ನೀಡಲಾಗಿದ್ದು ಅವರನ್ನು ಮುಂಬೈನ ವಿಲೆ ಪಾರ್ಲೆ ನಿವಾಸಿ ಎಂದು ದಾಖಲೆ ಹೇಳುತ್ತದೆ.

ಪ್ರಕರಣದ ಸುಳಿವು ಸಿಕ್ಕ ನಂತರ ವಕೀಲ ರೋಡಿಗ್ರಸ್ ಅವರು, ತಿಂಗಳುಗಳ ಕಾಲ ಹುಡುಕಾಡಿ ಮುಂಬೈನ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ದ್ಗಾಮಾ ಅವರ ಮರಣ ಪ್ರಮಾಣಪತ್ರವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ವ್ಯಕ್ತಿಯು ಗೋವಾದಲ್ಲಿ 1,200 ಚದರ ಮೀಟರ್ ವಿಸ್ತಾರವಾದ ಆಸ್ತಿಯೊಂದಿಗೆ ಐಶಾರಾಮಿ ರೆಸ್ಟೋರೆಂಟ್ ಹೊಂದಲು ಸಾಧ್ಯವೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಆರೋಪ: ಯುಪಿ ಪ್ರಾಧ್ಯಾಪಕ ಜೈಲಿಗೆ

ಆಹಾರದ ಬಗ್ಗೆ ಕಾರ್ಯಕ್ರಮ ನಡೆಸುವ ಕುನಾಲ್ ವಿಜಯ್ಕರ್ ಅವರೊಂದಿಗೆ ಯುಟ್ಯೂಬ್‌ನಲ್ಲಿ ಮಾತನಾಡಿದ್ದ ಜೋಯಿಶ್ ಇರಾನಿ, “ಗೋವಾ ಒಂದು ದೊಡ್ಡ ಪ್ರವಾಸಿ ಕೇಂದ್ರವಾಗಿದ್ದರೂ, ಅದು ಅಂತರಾಷ್ಟ್ರೀಯ ಮಟ್ಟದ ಅತ್ಯುತ್ತಮ ಮಟ್ಟದ ಆಹಾರದ ವಿಷಯದಲ್ಲಿ ಹಿಂದುಳಿದಿದೆ. ಹಾಗಾಗಿ ಸಿಲ್ಲಿ ಸೋಲ್ಸ್ ಕೆಫೆಯನ್ನು ಗೋವಾದ ‘ಆಹಾರ ತಾಣ’ ಆಗಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಒಕ್ಕೂಟ ಸರಕಾರದ ಸಂಸ್ಕೃತಿ ಸಚಿವರ ಮಗಳು ಮಗಳು ನಿಯಮಗಳಿಗೆ ಅತೀತರಲ್ಲವಾ!?

  2. ದುಡ್ಡಿದ್ದವನೇ ದೊಡ್ಡಪ್ಪ…‌ ಭಾಜಪದವರೆಲ್ಲಾ ಮಾಡೋ ಎಲ್ಲಾ ಹಲ್ಕಟ್ ಕೆಲಸಗಳು ಮುಂದೆ ಬಿ ಫ಼ಾರ್ಮ್ ಹಾಕಿಕೊಂಡು ಖುಲಾಸೆಯಾಗ್ತಾರೆ… ಅತ್ಯಂತ ಸುಸ೦ಸ್ಕ್ರುತ ಪಕ್ಷ ನಮ್ಮ ಭಾಜಪ ಪಕ್ಷ.

  3. ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆ ನಡೆಯಬೇಕು.

    ಸಂಪೂರ್ಣ ಆತ್ಮ ವಿಶ್ವಾಸದೊಂದಿಗೆ INC ನಾಯಕರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲು ಮಾಡುವ ಮಾತನಾಡುತ್ತಿರುವ ಮಂತ್ರಿಯವರ ವಿರುದ್ಧ Congress ನಾಯಕರು ವಾಗ್ಧಾಳಿ ಮಾಡದಿರುವುದು ವರದಿಯ ಸತ್ಯಾಸತ್ಯತೆಯ ಬಗ್ಗೆ ಅನುಮಾನ ಮೂಡಿಸುತ್ತಿದೆ.
    ಈಗಿನ ಪರಿಸ್ಥಿತಿಯಲ್ಲಿ ಮಾಧ್ಯಮಗಳು ವಸ್ತುಸ್ಥಿತಿಯ ಮನವರಿಕೆ ಮಾಡಿಕೊಡುವ ಜವಾಬ್ದಾರಿ ಹೊಂದಿವೆ ಮತ್ತು ಈ ವರದಿ ಸತ್ಯವಾಗಿದ್ದರೆ, ಅದು ಭಾಜಪ ಆಡಳಿತದ ಅಂತ್ಯದ ಆರಂಭವಾಗಬಲ್ಲದು

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...