Homeರಾಷ್ಟ್ರೀಯಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ...

ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಪುತ್ರಿ ಜೊಯಿಶ್ ಇರಾನಿ ನಡೆಸುತ್ತಿರುವ ರೆಸ್ಟೋರೆಂಟ್ ಅಕ್ರಮ ಬಾರ್ ಲೈಸೆನ್ಸ್ ಹೊಂದಿದೆ ಎಂಬ ಆರೋಪದ ಮೇಲೆ ಗೋವಾ ಅಬಕಾರಿ ಆಯುಕ್ತರು ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

‘ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್’ ಎಂಬ ಐಶಾರಾಮಿ ರೆಸ್ಟೋರೆಂಟ್‌ ಉತ್ತರ ಗೋವಾದ ಅಸ್ಸಾಗಾವೊದಲ್ಲಿದ್ದು, ಅದನ್ನು ಜೋಯಿಶ್ ಇರಾನಿ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ವರ್ಷಗಳ ಹಿಂದೆ ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ರೆಸ್ಟೋರೆಂಟ್‌ಗೆ ಅಕ್ರಮವಾಗಿ ಪರವಾನಗಿಯನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೋಯಿಶ್‌ ವಿರುದ್ಧ ವಕೀಲರಾದ ಐರಿಸ್ ರೋಡ್ರಿಗಸ್ ಅವರು, “ಜೋಯಿಶ್ ಅವರು ಮೋಸದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮದ್ಯದ ಪರವಾನಗಿಯನ್ನು ಪಡೆದುಕೊಂಡಿದ್ದಾರೆ” ಎಂದು ದೂರು ನೀಡಿದ್ದರು. ಅವರ ದೂರಿನಂತೆ, ಜುಲೈ 21 ರಂದು ಗೋವಾದ ಅಬಕಾರಿ ಕಮಿಷನರ್‌ ನಾರಾಯಣ್ ಎಂ. ಗಡ್ ಅವರು ಜೊಯಿಶ್ ಇರಾನಿ ನಡೆಸುತ್ತಿರುವ ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್‌ಗೆ ಷೋಕಾಸ್ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

“ಪರವಾನಗಿದಾರರು 17/05/2021 ರಂದು ನಿಧನರಾಗಿದ್ದರೂ ಸಹ, ಕಳೆದ ತಿಂಗಳು ಪರವಾನಗಿಯನ್ನು ನವೀಕರಿಸಲಾಗಿದೆ” ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕರಣದ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಲಾಗಿದೆ.

“ಪರವಾನಗಿ ನವೀಕರಣಕ್ಕಾಗಿ ಅರ್ಜಿಯನ್ನು ಜೂನ್ 22, 2022 ರಂದು ಆಂಥೋನಿ ದ್ಗಾಮಾ ಅವರ ಹೆಸರಿನಲ್ಲಿ ಮಾಡಲಾಗಿದೆ. ಆದರೆ ದ್ಗಾಮಾ ಅವರು ಕಳೆದ ವರ್ಷ ಮೇ ತಿಂಗಳಲ್ಲಿ ನಿಧನರಾದರು. ‘ದಯವಿಟ್ಟು 2022-23ನೇ ಸಾಲಿಗೆ ಈ ಪರವಾನಗಿಯನ್ನು ನವೀಕರಿಸಿ ಮತ್ತು ಆರು ತಿಂಗಳೊಳಗೆ ಈ ಪರವಾನಗಿಯನ್ನು ವರ್ಗಾಯಿಸಲಾಗುವುದು’ ಎಂದು ಲೈಸನ್ಸ್ ಹೊಂದಿರುವ ದ್ಗಾಮಾ ಪರವಾಗಿ ಬೇರೆ ಯಾರಾದರೂ ಸಹಿ ಮಾಡಿದ್ದಾರೆ” ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಆರ್‌ಟಿಐ ಅರ್ಜಿಯ ಮೂಲಕ ದಾಖಲೆಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿರುವ ವಕೀಲ ರೋಡ್ರಿಗಸ್ ಅವರು, “ಕೇಂದ್ರ ಸಚಿವರ ಕುಟುಂಬವು ಅಬಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ಅಸ್ಸಾಗಾವೊ ಪಂಚಾಯತ್‌ನೊಂದಿಗೆ ಸೇರಿಸಿ ನಡೆಸಿದ ಈ ಮೆಗಾ ವಂಚನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

“ಗೋವಾದಲ್ಲಿ ಅಬಕಾರಿ ನಿಯಮಗಳು ಅಸ್ತಿತ್ವದಲ್ಲಿರುವ ರೆಸ್ಟೋರೆಂಟ್‌ಗೆ ಮಾತ್ರ ಬಾರ್ ಪರವಾನಗಿಯನ್ನು ನೀಡುತ್ತವೆ. ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್ ಪ್ರಕರಣದಲ್ಲಿ, ಅಬಕಾರಿ ಇಲಾಖೆಯು ಕಳೆದ ವರ್ಷ ಫೆಬ್ರವರಿಯಲ್ಲಿ ಐಷಾರಾಮಿ ರೆಸ್ಟೋರೆಂಟ್ ಪರವಾನಗಿಯನ್ನು ಹೊಂದುವ ಮೊದಲೇ ಮಾಲೀಕರಿಗೆ ವಿದೇಶಿ ಮದ್ಯ, ಭಾರತೀಯ ನಿರ್ಮಿತ ವಿದೇಶಿ ಮದ್ಯ ಮತ್ತು ದೇಶೀಯ ಮದ್ಯಕ್ಕೆ ಪರವಾನಗಿ ನೀಡಲು ನಿಯಮಗಳನ್ನು ಉಲ್ಲಂಘಿಸಿತ್ತು” ಎಂದು ವಕೀಲ ರೋಡಿಗ್ರಸ್ ಅವರು ಹೇಳಿದ್ದಾರೆ.

ಎಲ್ಲಾ ಅಬಕಾರಿ ಅರ್ಜಿಗಳನ್ನು ಆಂಥೋನಿ ದ್ಗಾಮಾ ಹೆಸರಿನಲ್ಲಿ ಮಾಡಲಾಗಿದೆ, ಅವರ ಆಧಾರ್ ಕಾರ್ಡ್ ಡಿಸೆಂಬರ್ 2020 ರಲ್ಲಿ ನೀಡಲಾಗಿದ್ದು ಅವರನ್ನು ಮುಂಬೈನ ವಿಲೆ ಪಾರ್ಲೆ ನಿವಾಸಿ ಎಂದು ದಾಖಲೆ ಹೇಳುತ್ತದೆ.

ಪ್ರಕರಣದ ಸುಳಿವು ಸಿಕ್ಕ ನಂತರ ವಕೀಲ ರೋಡಿಗ್ರಸ್ ಅವರು, ತಿಂಗಳುಗಳ ಕಾಲ ಹುಡುಕಾಡಿ ಮುಂಬೈನ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ದ್ಗಾಮಾ ಅವರ ಮರಣ ಪ್ರಮಾಣಪತ್ರವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ವ್ಯಕ್ತಿಯು ಗೋವಾದಲ್ಲಿ 1,200 ಚದರ ಮೀಟರ್ ವಿಸ್ತಾರವಾದ ಆಸ್ತಿಯೊಂದಿಗೆ ಐಶಾರಾಮಿ ರೆಸ್ಟೋರೆಂಟ್ ಹೊಂದಲು ಸಾಧ್ಯವೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಆರೋಪ: ಯುಪಿ ಪ್ರಾಧ್ಯಾಪಕ ಜೈಲಿಗೆ

ಆಹಾರದ ಬಗ್ಗೆ ಕಾರ್ಯಕ್ರಮ ನಡೆಸುವ ಕುನಾಲ್ ವಿಜಯ್ಕರ್ ಅವರೊಂದಿಗೆ ಯುಟ್ಯೂಬ್‌ನಲ್ಲಿ ಮಾತನಾಡಿದ್ದ ಜೋಯಿಶ್ ಇರಾನಿ, “ಗೋವಾ ಒಂದು ದೊಡ್ಡ ಪ್ರವಾಸಿ ಕೇಂದ್ರವಾಗಿದ್ದರೂ, ಅದು ಅಂತರಾಷ್ಟ್ರೀಯ ಮಟ್ಟದ ಅತ್ಯುತ್ತಮ ಮಟ್ಟದ ಆಹಾರದ ವಿಷಯದಲ್ಲಿ ಹಿಂದುಳಿದಿದೆ. ಹಾಗಾಗಿ ಸಿಲ್ಲಿ ಸೋಲ್ಸ್ ಕೆಫೆಯನ್ನು ಗೋವಾದ ‘ಆಹಾರ ತಾಣ’ ಆಗಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಒಕ್ಕೂಟ ಸರಕಾರದ ಸಂಸ್ಕೃತಿ ಸಚಿವರ ಮಗಳು ಮಗಳು ನಿಯಮಗಳಿಗೆ ಅತೀತರಲ್ಲವಾ!?

  2. ದುಡ್ಡಿದ್ದವನೇ ದೊಡ್ಡಪ್ಪ…‌ ಭಾಜಪದವರೆಲ್ಲಾ ಮಾಡೋ ಎಲ್ಲಾ ಹಲ್ಕಟ್ ಕೆಲಸಗಳು ಮುಂದೆ ಬಿ ಫ಼ಾರ್ಮ್ ಹಾಕಿಕೊಂಡು ಖುಲಾಸೆಯಾಗ್ತಾರೆ… ಅತ್ಯಂತ ಸುಸ೦ಸ್ಕ್ರುತ ಪಕ್ಷ ನಮ್ಮ ಭಾಜಪ ಪಕ್ಷ.

  3. ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆ ನಡೆಯಬೇಕು.

    ಸಂಪೂರ್ಣ ಆತ್ಮ ವಿಶ್ವಾಸದೊಂದಿಗೆ INC ನಾಯಕರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲು ಮಾಡುವ ಮಾತನಾಡುತ್ತಿರುವ ಮಂತ್ರಿಯವರ ವಿರುದ್ಧ Congress ನಾಯಕರು ವಾಗ್ಧಾಳಿ ಮಾಡದಿರುವುದು ವರದಿಯ ಸತ್ಯಾಸತ್ಯತೆಯ ಬಗ್ಗೆ ಅನುಮಾನ ಮೂಡಿಸುತ್ತಿದೆ.
    ಈಗಿನ ಪರಿಸ್ಥಿತಿಯಲ್ಲಿ ಮಾಧ್ಯಮಗಳು ವಸ್ತುಸ್ಥಿತಿಯ ಮನವರಿಕೆ ಮಾಡಿಕೊಡುವ ಜವಾಬ್ದಾರಿ ಹೊಂದಿವೆ ಮತ್ತು ಈ ವರದಿ ಸತ್ಯವಾಗಿದ್ದರೆ, ಅದು ಭಾಜಪ ಆಡಳಿತದ ಅಂತ್ಯದ ಆರಂಭವಾಗಬಲ್ಲದು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...