Homeರಾಷ್ಟ್ರೀಯಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ...

ಗೋವಾ: ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ಲೈಸನ್ಸ್‌ ಪಡೆದು ಅಕ್ರಮ ಬಾರ್‌ ನಡೆಸುತ್ತಿರುವ ಸಚಿವೆ ಸ್ಮೃತಿ ಇರಾನಿ ಪುತ್ರಿ

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಪುತ್ರಿ ಜೊಯಿಶ್ ಇರಾನಿ ನಡೆಸುತ್ತಿರುವ ರೆಸ್ಟೋರೆಂಟ್ ಅಕ್ರಮ ಬಾರ್ ಲೈಸೆನ್ಸ್ ಹೊಂದಿದೆ ಎಂಬ ಆರೋಪದ ಮೇಲೆ ಗೋವಾ ಅಬಕಾರಿ ಆಯುಕ್ತರು ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ‘ದಿ ವೈರ್‌’ ವರದಿ ಮಾಡಿದೆ.

‘ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್’ ಎಂಬ ಐಶಾರಾಮಿ ರೆಸ್ಟೋರೆಂಟ್‌ ಉತ್ತರ ಗೋವಾದ ಅಸ್ಸಾಗಾವೊದಲ್ಲಿದ್ದು, ಅದನ್ನು ಜೋಯಿಶ್ ಇರಾನಿ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ವರ್ಷಗಳ ಹಿಂದೆ ನಿಧನ ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ರೆಸ್ಟೋರೆಂಟ್‌ಗೆ ಅಕ್ರಮವಾಗಿ ಪರವಾನಗಿಯನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೋಯಿಶ್‌ ವಿರುದ್ಧ ವಕೀಲರಾದ ಐರಿಸ್ ರೋಡ್ರಿಗಸ್ ಅವರು, “ಜೋಯಿಶ್ ಅವರು ಮೋಸದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮದ್ಯದ ಪರವಾನಗಿಯನ್ನು ಪಡೆದುಕೊಂಡಿದ್ದಾರೆ” ಎಂದು ದೂರು ನೀಡಿದ್ದರು. ಅವರ ದೂರಿನಂತೆ, ಜುಲೈ 21 ರಂದು ಗೋವಾದ ಅಬಕಾರಿ ಕಮಿಷನರ್‌ ನಾರಾಯಣ್ ಎಂ. ಗಡ್ ಅವರು ಜೊಯಿಶ್ ಇರಾನಿ ನಡೆಸುತ್ತಿರುವ ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್‌ಗೆ ಷೋಕಾಸ್ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

“ಪರವಾನಗಿದಾರರು 17/05/2021 ರಂದು ನಿಧನರಾಗಿದ್ದರೂ ಸಹ, ಕಳೆದ ತಿಂಗಳು ಪರವಾನಗಿಯನ್ನು ನವೀಕರಿಸಲಾಗಿದೆ” ಎಂದು ಶೋಕಾಸ್ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕರಣದ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಲಾಗಿದೆ.

“ಪರವಾನಗಿ ನವೀಕರಣಕ್ಕಾಗಿ ಅರ್ಜಿಯನ್ನು ಜೂನ್ 22, 2022 ರಂದು ಆಂಥೋನಿ ದ್ಗಾಮಾ ಅವರ ಹೆಸರಿನಲ್ಲಿ ಮಾಡಲಾಗಿದೆ. ಆದರೆ ದ್ಗಾಮಾ ಅವರು ಕಳೆದ ವರ್ಷ ಮೇ ತಿಂಗಳಲ್ಲಿ ನಿಧನರಾದರು. ‘ದಯವಿಟ್ಟು 2022-23ನೇ ಸಾಲಿಗೆ ಈ ಪರವಾನಗಿಯನ್ನು ನವೀಕರಿಸಿ ಮತ್ತು ಆರು ತಿಂಗಳೊಳಗೆ ಈ ಪರವಾನಗಿಯನ್ನು ವರ್ಗಾಯಿಸಲಾಗುವುದು’ ಎಂದು ಲೈಸನ್ಸ್ ಹೊಂದಿರುವ ದ್ಗಾಮಾ ಪರವಾಗಿ ಬೇರೆ ಯಾರಾದರೂ ಸಹಿ ಮಾಡಿದ್ದಾರೆ” ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಆರ್‌ಟಿಐ ಅರ್ಜಿಯ ಮೂಲಕ ದಾಖಲೆಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿರುವ ವಕೀಲ ರೋಡ್ರಿಗಸ್ ಅವರು, “ಕೇಂದ್ರ ಸಚಿವರ ಕುಟುಂಬವು ಅಬಕಾರಿ ಅಧಿಕಾರಿಗಳು ಮತ್ತು ಸ್ಥಳೀಯ ಅಸ್ಸಾಗಾವೊ ಪಂಚಾಯತ್‌ನೊಂದಿಗೆ ಸೇರಿಸಿ ನಡೆಸಿದ ಈ ಮೆಗಾ ವಂಚನೆಯ ಬಗ್ಗೆ ಸಂಪೂರ್ಣ ತನಿಖೆಯನ್ನು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

“ಗೋವಾದಲ್ಲಿ ಅಬಕಾರಿ ನಿಯಮಗಳು ಅಸ್ತಿತ್ವದಲ್ಲಿರುವ ರೆಸ್ಟೋರೆಂಟ್‌ಗೆ ಮಾತ್ರ ಬಾರ್ ಪರವಾನಗಿಯನ್ನು ನೀಡುತ್ತವೆ. ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್ ಪ್ರಕರಣದಲ್ಲಿ, ಅಬಕಾರಿ ಇಲಾಖೆಯು ಕಳೆದ ವರ್ಷ ಫೆಬ್ರವರಿಯಲ್ಲಿ ಐಷಾರಾಮಿ ರೆಸ್ಟೋರೆಂಟ್ ಪರವಾನಗಿಯನ್ನು ಹೊಂದುವ ಮೊದಲೇ ಮಾಲೀಕರಿಗೆ ವಿದೇಶಿ ಮದ್ಯ, ಭಾರತೀಯ ನಿರ್ಮಿತ ವಿದೇಶಿ ಮದ್ಯ ಮತ್ತು ದೇಶೀಯ ಮದ್ಯಕ್ಕೆ ಪರವಾನಗಿ ನೀಡಲು ನಿಯಮಗಳನ್ನು ಉಲ್ಲಂಘಿಸಿತ್ತು” ಎಂದು ವಕೀಲ ರೋಡಿಗ್ರಸ್ ಅವರು ಹೇಳಿದ್ದಾರೆ.

ಎಲ್ಲಾ ಅಬಕಾರಿ ಅರ್ಜಿಗಳನ್ನು ಆಂಥೋನಿ ದ್ಗಾಮಾ ಹೆಸರಿನಲ್ಲಿ ಮಾಡಲಾಗಿದೆ, ಅವರ ಆಧಾರ್ ಕಾರ್ಡ್ ಡಿಸೆಂಬರ್ 2020 ರಲ್ಲಿ ನೀಡಲಾಗಿದ್ದು ಅವರನ್ನು ಮುಂಬೈನ ವಿಲೆ ಪಾರ್ಲೆ ನಿವಾಸಿ ಎಂದು ದಾಖಲೆ ಹೇಳುತ್ತದೆ.

ಪ್ರಕರಣದ ಸುಳಿವು ಸಿಕ್ಕ ನಂತರ ವಕೀಲ ರೋಡಿಗ್ರಸ್ ಅವರು, ತಿಂಗಳುಗಳ ಕಾಲ ಹುಡುಕಾಡಿ ಮುಂಬೈನ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ದ್ಗಾಮಾ ಅವರ ಮರಣ ಪ್ರಮಾಣಪತ್ರವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ವ್ಯಕ್ತಿಯು ಗೋವಾದಲ್ಲಿ 1,200 ಚದರ ಮೀಟರ್ ವಿಸ್ತಾರವಾದ ಆಸ್ತಿಯೊಂದಿಗೆ ಐಶಾರಾಮಿ ರೆಸ್ಟೋರೆಂಟ್ ಹೊಂದಲು ಸಾಧ್ಯವೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಚಿವೆ ಸ್ಮೃತಿ ಇರಾನಿ ಕುರಿತು ಅವಹೇಳನಕಾರಿ ಫೇಸ್‌ಬುಕ್ ಪೋಸ್ಟ್ ಆರೋಪ: ಯುಪಿ ಪ್ರಾಧ್ಯಾಪಕ ಜೈಲಿಗೆ

ಆಹಾರದ ಬಗ್ಗೆ ಕಾರ್ಯಕ್ರಮ ನಡೆಸುವ ಕುನಾಲ್ ವಿಜಯ್ಕರ್ ಅವರೊಂದಿಗೆ ಯುಟ್ಯೂಬ್‌ನಲ್ಲಿ ಮಾತನಾಡಿದ್ದ ಜೋಯಿಶ್ ಇರಾನಿ, “ಗೋವಾ ಒಂದು ದೊಡ್ಡ ಪ್ರವಾಸಿ ಕೇಂದ್ರವಾಗಿದ್ದರೂ, ಅದು ಅಂತರಾಷ್ಟ್ರೀಯ ಮಟ್ಟದ ಅತ್ಯುತ್ತಮ ಮಟ್ಟದ ಆಹಾರದ ವಿಷಯದಲ್ಲಿ ಹಿಂದುಳಿದಿದೆ. ಹಾಗಾಗಿ ಸಿಲ್ಲಿ ಸೋಲ್ಸ್ ಕೆಫೆಯನ್ನು ಗೋವಾದ ‘ಆಹಾರ ತಾಣ’ ಆಗಬೇಕು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಒಕ್ಕೂಟ ಸರಕಾರದ ಸಂಸ್ಕೃತಿ ಸಚಿವರ ಮಗಳು ಮಗಳು ನಿಯಮಗಳಿಗೆ ಅತೀತರಲ್ಲವಾ!?

  2. ದುಡ್ಡಿದ್ದವನೇ ದೊಡ್ಡಪ್ಪ…‌ ಭಾಜಪದವರೆಲ್ಲಾ ಮಾಡೋ ಎಲ್ಲಾ ಹಲ್ಕಟ್ ಕೆಲಸಗಳು ಮುಂದೆ ಬಿ ಫ಼ಾರ್ಮ್ ಹಾಕಿಕೊಂಡು ಖುಲಾಸೆಯಾಗ್ತಾರೆ… ಅತ್ಯಂತ ಸುಸ೦ಸ್ಕ್ರುತ ಪಕ್ಷ ನಮ್ಮ ಭಾಜಪ ಪಕ್ಷ.

  3. ಈ ಬಗ್ಗೆ ಇನ್ನಷ್ಟು ವಿಸ್ತೃತ ತನಿಖೆ ನಡೆಯಬೇಕು.

    ಸಂಪೂರ್ಣ ಆತ್ಮ ವಿಶ್ವಾಸದೊಂದಿಗೆ INC ನಾಯಕರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲು ಮಾಡುವ ಮಾತನಾಡುತ್ತಿರುವ ಮಂತ್ರಿಯವರ ವಿರುದ್ಧ Congress ನಾಯಕರು ವಾಗ್ಧಾಳಿ ಮಾಡದಿರುವುದು ವರದಿಯ ಸತ್ಯಾಸತ್ಯತೆಯ ಬಗ್ಗೆ ಅನುಮಾನ ಮೂಡಿಸುತ್ತಿದೆ.
    ಈಗಿನ ಪರಿಸ್ಥಿತಿಯಲ್ಲಿ ಮಾಧ್ಯಮಗಳು ವಸ್ತುಸ್ಥಿತಿಯ ಮನವರಿಕೆ ಮಾಡಿಕೊಡುವ ಜವಾಬ್ದಾರಿ ಹೊಂದಿವೆ ಮತ್ತು ಈ ವರದಿ ಸತ್ಯವಾಗಿದ್ದರೆ, ಅದು ಭಾಜಪ ಆಡಳಿತದ ಅಂತ್ಯದ ಆರಂಭವಾಗಬಲ್ಲದು

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...