Homeಮುಖಪುಟಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

- Advertisement -
- Advertisement -

ಕೆಲವೇ ತಿಂಗಳುಗಳಲ್ಲಿ ಗೋವಾದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಕಳೆದ ಭಾರೀ ಅತಿ ದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಪಡೆಯಲಾಗದ ಕಾಂಗ್ರೆಸ್ ಈ ಬಾರಿ ಶತಾಯಗತಾಯ ಅಧಿಕ್ಕಾರಕ್ಕೇರಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಟಿಎಂಸಿ, ಆಪ್ ಸೇರಿದಂತೆ ಇನ್ನಿತರ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

2017ರಲ್ಲಿ ಇತರೆ ಪಕ್ಷಗಳ ಶಾಸಕರನ್ನು ಎಳೆತಂದು ಸರ್ಕಾರ ರಚಿಸಿದ್ದ ಬಿಜೆಪಿ, ಅಂತೂ ಇಂತೂ ಅಧಿಕಾರ ನಡೆಸಿದೆ. ಇದೀಗ ಮುಂದಿನ ಚುನಾವಣೆಯಲ್ಲಿಯೂ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ. ಆದರೆ ಗೋವಾ ಫಾರ್ವರ್ಡ್ ಪಾರ್ಟಿ ಮೈತ್ರಿಯಿಂದ ಹೊರನಡೆದು ಕಾಂಗ್ರೆಸ್ ಜೊತೆಸೇರಿದೆ. ಇದು ಬಿಜೆಪಿಗೆ ಕೊಂಚ ಹಿನ್ನಡೆಯಾದಂತಿದೆ.

ಇನ್ನೊಂದೆಡೆ ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದು, ಗೋವಾದ ಹಿಂದಿನ ರಾಜ್ಯಪಾಲರಾಗಿದ್ದ, ಹಾಲಿ ಮೇಘಾಲಯದ ರಾಜ್ಯಪಾಲರಾಗಿರುವ ಸತ್ಯಪಾಲ್ ಮಲ್ಲಿಕ್ ಪ್ರಮೋದ್ ಸಾವಂತ್ ವಿರುದ್ಧ ಕಿಡಿಕಾರಿದ್ದಾರೆ. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ.

2019 ರಲ್ಲಿ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ವಲಸೆ ಹೋದಾಗಿನಿಂದ, ಪಕ್ಷವು ತನ್ನ ಪಡೆಗಳನ್ನು ಗಟ್ಟಿಗೊಳಿಸಲು ಹೆಣಗಾಡುತ್ತಿದೆ. ಎಲ್ಲಾ ಪ್ರಾದೇಶಿಕ ಮತ್ತು ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪಕ್ಷವು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ತಿಳಿಸಿದ್ದಾರೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಮೂವರು ಶಾಸಕರನ್ನು ಹೊಂದಿರುವ ಗೋವಾ ಫಾರ್ವರ್ಡ್ ಪಾರ್ಟಿಯೊಂದಿಗೆ ಕಾಂಗ್ರೆಸ್ ಈಗಾಗಲೇ ಮೈತ್ರಿ ಮಾಡಿಕೊಂಡಿದೆ. ಇದೀಗ, ಇತರ ಪಕ್ಷಗಳಾದ ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿಯೊಂದಿಗೆ ಕೈಜೋಡಿಸಲು ಉತ್ಸುಕವಾಗಿದೆ. ಶನಿವಾರ ಪಕ್ಷದ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ಬಂದಿದ್ದ ಕಾಮತ್ ಅವರು, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ಟಿಎಂಸಿ, ಎಎಪಿ, ಜಿಎಫ್‌ಪಿ, ಎಂಜಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದ ಹೊರತು ಬೇರೆ ದಾರಿಯಿಲ್ಲ. ಕಾಂಗ್ರೆಸ್, ಟಿಎಂಸಿ ಮತ್ತು ಎಎಪಿಯ ರಾಷ್ಟ್ರೀಯ ನಾಯಕರು ಚುನಾವಣೆಗೆ ಮುಂಚಿತವಾಗಿ ಮಹಾಮೈತ್ರಿಕೂಟವನ್ನು ರೂಪಿಸಲು ಉನ್ನತ ಮಟ್ಟದಲ್ಲಿ ಮಾತುಕತೆ ನಡೆಸಬೇಕು ಎಂದು ಕೆಲ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ.

ಆದರೆ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಆಪ್ ಕೂಡ ಕಾಂಗ್ರೆಸ್‌ನಿಂದ ದೂರ ನಿಂತಿದೆ. ಅಲ್ಲದೆ ಟಿಎಂಸಿ ಮತ್ತು ಆಪ್ ಸಹ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿವೆ. ಇಂತಹ ಸಂದರ್ಭದಲ್ಲಿ ಮೈತ್ರಿ ಸಾಧ್ಯವೇ ಎಂಬ ಪ್ರಶ್ನೆಗಳು ಮೂಡಿವೆ. ಇವೆಲ್ಲಕ್ಕೂ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.


ಇದನ್ನೂ ಓದಿ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಕೋನರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...