Homeಮುಖಪುಟಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ಬಿಜೆಪಿಯು ಬಳಸಿ ಎಸೆಯುವ ನೀತಿಯನ್ನು ಪ್ರಯೋಗಿಸುತ್ತಿದೆ ಎಂದು ಆರೋಪಿಸಿರುವ ಅರವಿಂದ್‌ ಕೇಜ್ರಿವಾಲ್‌, ಪರಿಕ್ಕರ್‌ ಅವರ ಮಗನನ್ನು ಎಎಪಿ ಟಿಕೆಟ್‌ನಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿ ವಿಧಾನಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಮಗ ಉತ್ಪಲ್ ಪರಿಕ್ಕರ್‌ ಕೇಳಿದ್ದ ಕ್ಷೇತ್ರದಿಂದ ಟಿಕೆಟ್‌ ನೀಡಲು ನಿರಾಕರಿಸಿದೆ.

ಪಣಜಿ ಕ್ಷೇತ್ರವು ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಕ್ಷೇತ್ರವಾಗಿದ್ದು, ಅವರ ಮಗ ಉತ್ಪಲ್ ಪರಿಕ್ಕರ್‌ ಅಲ್ಲಿನ ಟಿಕೆಟ್‌ ಅಕಾಂಕ್ಷಿಯಾಗಿದ್ದರು. ಆದರೆ ಪಕ್ಷವು ಅವರಿಗೆ ಈ ಕ್ಷೇತ್ರದಿಂದ ಟಿಕೆಟ್‌ ನೀಡಲು ನಿರಾಕರಿಸಿದ್ದು, ಅಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಅಟಾನಾಸಿಯೊ ಮಾನ್ಸೆರೇಟ್ ‘ಬಾಬುಷ್’ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಉತ್ಪಲ್ ಪರಿಕ್ಕರ್ ತಾನು ಪಣಜಿಯಿಂದಲೆ ಸ್ಪರ್ಧಿಸುವುದಾಗಿ ಪಟ್ಟು ಹಿಡಿದಿದ್ದು, ಬಿಜೆಪಿ ಪ್ರಸ್ತಾಪಿಸಿದ್ದ ಇತರ ಎರಡು ಕ್ಷೇತ್ರಗಳನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉತ್ಪಲ್ ‌ಅವರಿಗೆ ಇನ್ನೆರಡು ಆಯ್ಕೆಗಳನ್ನು ನೀಡಲಾಗಿದೆ ಎಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. “ಅವರು ಅದನ್ನು ಒಪ್ಪಿಕೊಳ್ಳಬೇಕು ಎಂದು ನಾವು ಭಾವಿಸುತ್ತೇವೆ. ಬಿಜೆಪಿ ಯಾವಾಗಲೂ ಪರಿಕ್ಕರ್ ಪರಿವಾರಕ್ಕೆ ಗೌರವವನ್ನು ನೀಡುತ್ತದೆ” ಎಂದು ಫಡ್ನವಿಸ್‌ ಅವರು ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ತಡೆಯುವ ಉದ್ದೇಶದೊಂದಿಗೆ ಹೇಳಿದ್ದಾರೆ.

ಆದರೆ, ಉತ್ಪಲ್ ಪರಿಕ್ಕರ್‌ ಬಿಜೆಪಿಯ ಆಯ್ಕೆಯನ್ನು ನಿರಾಕರಿಸಲಿದ್ದಾರೆ ಎನ್ನಲಾಗಿದೆ. ಗೋವಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಉತ್ಪಲ್‌ಗೆ ಆನ್‌ ಆದ್ಮಿ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

“ಪರಿಕ್ಕರ್ ಕುಟುಂಬದೊಂದಿಗೆ ಬಿಜೆಪಿಯು ಬಳಸಿ ಎಸೆಯುವ ನೀತಿಯನ್ನು ಅಳವಡಿಸಿಕೊಂಡಿರುವುದಕ್ಕೆ ಗೋವಾ ಜನರು ತುಂಬಾ ದುಃಖಿತರಾಗಿದ್ದಾರೆ. ನಾನು ಮನೋಹರ್ ಪರಿಕ್ಕರ್ ಅವರನ್ನು ಯಾವಾಗಲೂ ಗೌರವಿಸುತ್ತೇನೆ. ಉತ್ಪಲ್ ಅವರು ಎಎಪಿ ಸೇರಿ, ಪಕ್ಷದ ಟಿಕೆಟ್‌ನೊಂದಿಗೆ ಚುನಾವಣೆ ಎದುರಿಸಲು ಸ್ವಾಗತ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ, ಶಿವಸೇನೆಯ ಸಂಜಯ್ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರು ಬಿಜೆಪಿಯಿಂದ ಹೊರಗುಳಿದು ಸ್ವತಂತ್ರವಾಗಿ ಸ್ಪರ್ಧಿಸಿದರೆ ಅವರನ್ನು ಬೆಂಬಲಿಸುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದರು.

ಮೂರು ಬಾರಿ ಗೋವಾ ಮುಖ್ಯಮಂತ್ರಿಯಾಗಿದ್ದ, ರಾಜ್ಯ ಬಿಜೆಪಿಯ ಉನ್ನತ ನಾಯಕರಾಗಿದ್ದ ಮನೋಹರ್ ಪರಿಕ್ಕರ್ ಅವರು 2019 ರಲ್ಲಿ ನಿಧನರಾಗಿದ್ದರು. ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಅವರ ಪ್ರತಿಸ್ಪರ್ಧಿಯಾಗಿದ್ದ ಬಾಬುಷ್ ಮಾನ್ಸೆರೆಟ್ ಅವರು, ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

ಪರಿಕ್ಕರ್ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಬಾಬುಷ್ ಮಾನ್ಸೆರೇಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಬಿಜೆಪಿಗೆ ಸೇರಿಕೊಂಡಿದ್ದರು.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

ಇಂಜಿನಿಯರಿಂಗ್ ಪದವೀಧರರಾದ ಉತ್ಪಲ್ ಪರಿಕ್ಕರ್ ಅವರು ಪಣಜಿಯನ್ನೇ ಕೇಂದ್ರೀಕರಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಷೇತ್ರದ ಜನರನ್ನು ಭೇಟಿ ಮಾಡುತ್ತಿದ್ದು, ದೇವಸ್ಥಾನಗಳಿಗೂ ಭೇಟಿ ನೀಡಿ ಚುನಾವಣೆ ಎದುರಿಸಲು ಸಿದ್ಧ ಎಂದು ಘೋಷಿಸಿದ್ದಾರೆ.

ಕುಟುಂಬ ಎಂಬ ಕಾರಣಕ್ಕಾಗಿ ಅಭ್ಯರ್ಥಿಯಾಗಬೇಕೆಂದು ಯಾರೂ ನಿರೀಕ್ಷಿಸಬಾರದು ಎಂದು ಫಡ್ನವಿಸ್ ಅವರು ಸ್ಪಷ್ಟಪಡಿಸಿದ್ದಾರೆ. “ಗೋವಾದಲ್ಲಿ ಬಿಜೆಪಿಯನ್ನು ಕಟ್ಟಲು ಮನೋಹರ್ ಪರಿಕ್ಕರ್ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಮನೋಹರ್ ಪರಿಕ್ಕರ್ ಅಥವಾ ನಾಯಕರ ಮಗ ಎಂಬ ಕಾರಣಕ್ಕಾಗಿ ಯಾರಿಗೂ ಬಿಜೆಪಿ ಟಿಕೆಟ್ ನೀಡುವುದಿಲ್ಲ. ಯಾರು ಕೆಲಸ ಮಾಡುತ್ತಾರೋ ಅವರನ್ನು ಪರಿಗಣಿಸಲಾಗುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿಯು ಬಾಬುಷ್ ಮೊನ್ಸೆರಾಡ್‌ ಮಾತ್ರವಲ್ಲದೆ ಅವರ ಪತ್ನಿ ಜೆನ್ನಿಫರ್ ಮೊನ್ಸೆರಾಟ್‌ ಅವರನ್ನು ತಾಲೀಗಾವ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಗೋವಾದ ಸಚಿವ ವಿಶ್ವಜಿತ್ ರಾಣೆ ಮತ್ತು ಅವರ ಪತ್ನಿ ದಿವ್ಯಾ ವಿಶ್ವಜಿತ್ ಇಬ್ಬರೂ ಪಟ್ಟಿಯಲ್ಲಿದ್ದಾರೆ. ದಿವ್ಯಾ ವಿಶ್ವಜಿತ್ ಅವರು ಪೊರಿಯಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಮಾವ ಪ್ರತಾಪ್‌ಸಿಂಹ ರಾಣೆ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...