Homeಮುಖಪುಟಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

ಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

- Advertisement -
- Advertisement -

ಕಳೆದ ವಾರ ಈಶಾನ್ಯ ದೆಹಲಿ ಹೊತ್ತಿ ಉರಿಯಿತು. 46ಜನ ಪ್ರಾಣ ಕಳೆದುಕೊಂಡರು. 500ಕ್ಕೂ ಹೆಚ್ಚು ಜನ ಗಾಯಗೊಂಡರು. ಪ್ರಕರಣ ದೆಹಲಿ ಹೈಕೋರ್ಟ್‌ ಮುಂದೆ ಬಂತು. ನ್ಯಾಯಮೂರ್ತಿ ಎಸ್‌.ಮುರಳೀಧರ್‌ ಬಿಜೆಪಿ ಮುಖಂಡರ ಕೋಮು ಪ್ರಚೋದಿತ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಹೇಳಿ ನಾಲ್ವರು ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿತು.

ಅದರಲ್ಲಿ ಒಬ್ಬಾತ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌. ಈಗ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರ್‍ಯಾಲಿಯೊಂದರಲ್ಲಿ ದೇಶ್‌ ಕೆ ಗದ್ದಾರೋಂಕೋ, ಗೋಲಿಮಾರೋ ಸಾಲೋಂಕೆ (ದೇಶದೊಳಗಿರುವ ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ನಾಲ್ಕೈದು ಬಾರಿ ಘೋಷಣೆ ಕೂಗಿದ್ದ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯುವಜನರು ಆ ಘೋಷಣೆಗೆ ಕೋರಸ್‌ ಕೊಟ್ಟಿದ್ದರು.

ಈತನ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಭಾರತ ಪಾಕಿಸ್ತಾನ ಯುದ್ಧಕ್ಕೆ ಹೋಲಿಸಿದ್ದ ಇನ್ನೊಬ್ಬ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ. ಆತನ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಮುನ್ನಾ ದಿನ ಪೊಲೀಸರೆದುರೆ “ಇನ್ನೆರೆಡು ದಿನದಲ್ಲಿ ಜಾಫ್ರಾಬಾದ್‌ ಮೆಟ್ರೋ ಬಳಿ ಪ್ರತಿಭಟನೆ ಮಾಡುತ್ತಿರುವ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಬೆದರಿಕೆಯ ಭಾಷಣ ಮಾಡಿದ್ದ.

ಆ ಎರಡು ದಿನದಲ್ಲಿ ಆತ ಹೇಳಿದಂತೆಯೇ ಆಯಿತು. ಗಲಭೆಗಳು ಭುಗಿಲೆದ್ದವು. ಜನರ ಆಸ್ತಿಪಾಸ್ತಿ, ಪ್ರಾಣ ಹಾನಿಯಾಯಿತು. ಪೊಲೀಸರು ಪ್ರಕರಣ ದಾಖಲಿಸದಿದ್ದಾಗ ಹೈಕೋರ್ಟ್‌ ನ್ಯಾಯಾಧೀಶರು ಈ ದ್ವೇಷ ಭಾಷಣವನ್ನು ಕೋರ್ಟ್‌ ಹಾಲಿನಲ್ಲಿ ಪ್ರಸಾರ ಮಾಡಿ ಎಫ್‌ಐಆರ್‌ ಮಾಡುವಂತೆ ಆದೇಶಿಸಿದ್ದರು.

ಸಂಸದ ಅನುರಾಗ್‌ ಠಾಕೂರ್‌ 2020 ರ ಮಾರ್ಚ್ 1 ರಂದು ಆದಾಯ ತೆರಿಗೆ ಇಲಾಖೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತದ್ದರು. ಆಗ ಪತ್ರಕರ್ತರು ನೀವು ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆ ಕೂಗಿದ್ದರ ಬಗ್ಗೆ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಆಗ ಠಾಕೂರ್‌ ‍ “ನೀವು ಸುಳ್ಳು ಹೇಳುತ್ತಿದ್ದೀರಿ. ನಾನೆಂದೂ ಆ ಘೋಷಣೆಯನ್ನು ಕೂಗಿಲ್ಲ. ಮಾಧ್ಯಮಗಳು ಅರ್ಧ ಸತ್ಯ ಮತ್ತು ಅಪಪ್ರಚಾರವನ್ನು ಮಾಡಬಾಡರು. ಅದಕ್ಕಾಗಿ ಅವು ತನ್ನ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಸಿಟ್ಟಿನಿಂದ ಉತ್ತರಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ನಿಜವೇನೆಂದರೆ ಜನವರಿ 27 ರಂದು ಅನುರಾಗ್‌ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿ, ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂಬ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿತ್ತು.

“ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ಗಲಭೆ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ, ನೀವು ಮಾದರಿ ನೀತಿ ಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಮೇಲಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದೀರಿ ಎಂದು ಆಯೋಗ ನೋಟಿಸ್‌ನಲ್ಲಿ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್ ಅವರು “ನಾನು ಗೋಲಿ ಮಾರೊ ಸಾಲೋ ಕೋ (ಗುಂಡಿಕ್ಕಿ)” ಎಂದು ಘೋಷಣೆ ಕೂಗಿಲ್ಲ. “ದೇಶ್ ಕೆ ಗದ್ದಾರಾಂಕೋ (ದೇಶದ ದೇಶದ್ರೋಹಿಗಳಿಗೆ)” ಎಂಬ ಘೋಷಣೆಯ ಮೊದಲಾರ್ಧವನ್ನು ಮಾತ್ರ ಕೂಗಿದ್ದೆ. ಜನರು ಕೂಗಿದ ಘೋಷಣೆಗೆ ನಾನು ಹೊಣೆಗಾರನಲ್ಲ ಎಂದಿದ್ದರು.

ಆದರೆ ಯಾರೋ ಆಗಲಿ ಜನವರಿ 27ರ ಆ ಕಾರ್ಯಕ್ರಮದ ಇಂಡಿಯನ್ ಎಕ್ಸ್‌ಪ್ರೆಸ್ ಆನ್‌ಲೈನ್ ಪ್ರಕಟಿಸಿದ ವೀಡಿಯೊವನ್ನು ನೋಡಿದರೆ ಆ ಘೋಷಣೆ ಅವರೇ ಸ್ವತಃ ಕೂಗಿದ್ದು, ಜನರೂ ಸಹ ಕೋರಸ್‌ ಕೊಡಲು ಪ್ರೇರಿಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಬಹುತೇಕ ಘೋಷಣೆಗಳು ಹೀಗೆಯೇ ಇದ್ದು ನಾಯಕ ಅಥವಾ ಮುನ್ನಡೆಸುವವರು ಅರ್ಧ ಘೋಷಣೆ ಕೂಗಿದ್ದರೆ ಇನ್ನರ್ಧವನ್ನು ಉಳಿದ ಜನರು ಕೂಗುವುದು ಸಾಮಾನ್ಯ. ಆದ್ದರಿಂದ ಆ ಘೋಷಣೆಗೆ ತಾನು ಹೊಣೆಗಾರನಲ್ಲ ಎನ್ನುವುದು ಹೇಡಿತನವಷ್ಟೆ..

ಘೋಷಣೆ ಕೂಗಿದ ವಿಡಿಯೋ ನೋಡಿ

ಅಂತೂ ಸ್ಪಷ್ಟವಾಗಿ ತಾನು ಘೋಷಣೆ ಕೂಗಿದ್ದರೂ ಸಹ ಕೇಸಿಗೆ ಹೆದರಿಕೊಂಡು ತಾನು ಕೂಗೇ ಇಲ್ಲ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ತಪ್ಪಿಸಿಕೊಳ್ಳಲು ಅನುರಾಗ್‌ ಠಾಕೂರ್‌ ಪ್ರಯತ್ನಿಸುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನ ಸ್ಥಾನದಲ್ಲಿದ್ದುಕೊಂಡು ಹಿಂಸೆಗೆ ಪ್ರಚೋದನೆ ನೀಡುವ ಘೋಷಣೆ ಕೂಗಿದ್ದು ಅಲ್ಲದೇ ಮತ್ತೆ ಜಾರಿಕೊಳ್ಳಲು ಯತ್ನಿಸಿರುವುದು ಉತ್ತಮ ನಡವಳಿಕೆ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...