Homeಮುಖಪುಟಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

ಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

- Advertisement -
- Advertisement -

ಕಳೆದ ವಾರ ಈಶಾನ್ಯ ದೆಹಲಿ ಹೊತ್ತಿ ಉರಿಯಿತು. 46ಜನ ಪ್ರಾಣ ಕಳೆದುಕೊಂಡರು. 500ಕ್ಕೂ ಹೆಚ್ಚು ಜನ ಗಾಯಗೊಂಡರು. ಪ್ರಕರಣ ದೆಹಲಿ ಹೈಕೋರ್ಟ್‌ ಮುಂದೆ ಬಂತು. ನ್ಯಾಯಮೂರ್ತಿ ಎಸ್‌.ಮುರಳೀಧರ್‌ ಬಿಜೆಪಿ ಮುಖಂಡರ ಕೋಮು ಪ್ರಚೋದಿತ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಹೇಳಿ ನಾಲ್ವರು ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿತು.

ಅದರಲ್ಲಿ ಒಬ್ಬಾತ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌. ಈಗ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರ್‍ಯಾಲಿಯೊಂದರಲ್ಲಿ ದೇಶ್‌ ಕೆ ಗದ್ದಾರೋಂಕೋ, ಗೋಲಿಮಾರೋ ಸಾಲೋಂಕೆ (ದೇಶದೊಳಗಿರುವ ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ನಾಲ್ಕೈದು ಬಾರಿ ಘೋಷಣೆ ಕೂಗಿದ್ದ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯುವಜನರು ಆ ಘೋಷಣೆಗೆ ಕೋರಸ್‌ ಕೊಟ್ಟಿದ್ದರು.

ಈತನ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಭಾರತ ಪಾಕಿಸ್ತಾನ ಯುದ್ಧಕ್ಕೆ ಹೋಲಿಸಿದ್ದ ಇನ್ನೊಬ್ಬ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ. ಆತನ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಮುನ್ನಾ ದಿನ ಪೊಲೀಸರೆದುರೆ “ಇನ್ನೆರೆಡು ದಿನದಲ್ಲಿ ಜಾಫ್ರಾಬಾದ್‌ ಮೆಟ್ರೋ ಬಳಿ ಪ್ರತಿಭಟನೆ ಮಾಡುತ್ತಿರುವ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಬೆದರಿಕೆಯ ಭಾಷಣ ಮಾಡಿದ್ದ.

ಆ ಎರಡು ದಿನದಲ್ಲಿ ಆತ ಹೇಳಿದಂತೆಯೇ ಆಯಿತು. ಗಲಭೆಗಳು ಭುಗಿಲೆದ್ದವು. ಜನರ ಆಸ್ತಿಪಾಸ್ತಿ, ಪ್ರಾಣ ಹಾನಿಯಾಯಿತು. ಪೊಲೀಸರು ಪ್ರಕರಣ ದಾಖಲಿಸದಿದ್ದಾಗ ಹೈಕೋರ್ಟ್‌ ನ್ಯಾಯಾಧೀಶರು ಈ ದ್ವೇಷ ಭಾಷಣವನ್ನು ಕೋರ್ಟ್‌ ಹಾಲಿನಲ್ಲಿ ಪ್ರಸಾರ ಮಾಡಿ ಎಫ್‌ಐಆರ್‌ ಮಾಡುವಂತೆ ಆದೇಶಿಸಿದ್ದರು.

ಸಂಸದ ಅನುರಾಗ್‌ ಠಾಕೂರ್‌ 2020 ರ ಮಾರ್ಚ್ 1 ರಂದು ಆದಾಯ ತೆರಿಗೆ ಇಲಾಖೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತದ್ದರು. ಆಗ ಪತ್ರಕರ್ತರು ನೀವು ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆ ಕೂಗಿದ್ದರ ಬಗ್ಗೆ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಆಗ ಠಾಕೂರ್‌ ‍ “ನೀವು ಸುಳ್ಳು ಹೇಳುತ್ತಿದ್ದೀರಿ. ನಾನೆಂದೂ ಆ ಘೋಷಣೆಯನ್ನು ಕೂಗಿಲ್ಲ. ಮಾಧ್ಯಮಗಳು ಅರ್ಧ ಸತ್ಯ ಮತ್ತು ಅಪಪ್ರಚಾರವನ್ನು ಮಾಡಬಾಡರು. ಅದಕ್ಕಾಗಿ ಅವು ತನ್ನ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಸಿಟ್ಟಿನಿಂದ ಉತ್ತರಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ನಿಜವೇನೆಂದರೆ ಜನವರಿ 27 ರಂದು ಅನುರಾಗ್‌ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿ, ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂಬ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿತ್ತು.

“ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ಗಲಭೆ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ, ನೀವು ಮಾದರಿ ನೀತಿ ಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಮೇಲಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದೀರಿ ಎಂದು ಆಯೋಗ ನೋಟಿಸ್‌ನಲ್ಲಿ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್ ಅವರು “ನಾನು ಗೋಲಿ ಮಾರೊ ಸಾಲೋ ಕೋ (ಗುಂಡಿಕ್ಕಿ)” ಎಂದು ಘೋಷಣೆ ಕೂಗಿಲ್ಲ. “ದೇಶ್ ಕೆ ಗದ್ದಾರಾಂಕೋ (ದೇಶದ ದೇಶದ್ರೋಹಿಗಳಿಗೆ)” ಎಂಬ ಘೋಷಣೆಯ ಮೊದಲಾರ್ಧವನ್ನು ಮಾತ್ರ ಕೂಗಿದ್ದೆ. ಜನರು ಕೂಗಿದ ಘೋಷಣೆಗೆ ನಾನು ಹೊಣೆಗಾರನಲ್ಲ ಎಂದಿದ್ದರು.

ಆದರೆ ಯಾರೋ ಆಗಲಿ ಜನವರಿ 27ರ ಆ ಕಾರ್ಯಕ್ರಮದ ಇಂಡಿಯನ್ ಎಕ್ಸ್‌ಪ್ರೆಸ್ ಆನ್‌ಲೈನ್ ಪ್ರಕಟಿಸಿದ ವೀಡಿಯೊವನ್ನು ನೋಡಿದರೆ ಆ ಘೋಷಣೆ ಅವರೇ ಸ್ವತಃ ಕೂಗಿದ್ದು, ಜನರೂ ಸಹ ಕೋರಸ್‌ ಕೊಡಲು ಪ್ರೇರಿಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಬಹುತೇಕ ಘೋಷಣೆಗಳು ಹೀಗೆಯೇ ಇದ್ದು ನಾಯಕ ಅಥವಾ ಮುನ್ನಡೆಸುವವರು ಅರ್ಧ ಘೋಷಣೆ ಕೂಗಿದ್ದರೆ ಇನ್ನರ್ಧವನ್ನು ಉಳಿದ ಜನರು ಕೂಗುವುದು ಸಾಮಾನ್ಯ. ಆದ್ದರಿಂದ ಆ ಘೋಷಣೆಗೆ ತಾನು ಹೊಣೆಗಾರನಲ್ಲ ಎನ್ನುವುದು ಹೇಡಿತನವಷ್ಟೆ..

ಘೋಷಣೆ ಕೂಗಿದ ವಿಡಿಯೋ ನೋಡಿ

ಅಂತೂ ಸ್ಪಷ್ಟವಾಗಿ ತಾನು ಘೋಷಣೆ ಕೂಗಿದ್ದರೂ ಸಹ ಕೇಸಿಗೆ ಹೆದರಿಕೊಂಡು ತಾನು ಕೂಗೇ ಇಲ್ಲ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ತಪ್ಪಿಸಿಕೊಳ್ಳಲು ಅನುರಾಗ್‌ ಠಾಕೂರ್‌ ಪ್ರಯತ್ನಿಸುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನ ಸ್ಥಾನದಲ್ಲಿದ್ದುಕೊಂಡು ಹಿಂಸೆಗೆ ಪ್ರಚೋದನೆ ನೀಡುವ ಘೋಷಣೆ ಕೂಗಿದ್ದು ಅಲ್ಲದೇ ಮತ್ತೆ ಜಾರಿಕೊಳ್ಳಲು ಯತ್ನಿಸಿರುವುದು ಉತ್ತಮ ನಡವಳಿಕೆ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...