Homeಮುಖಪುಟಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

ಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

- Advertisement -
- Advertisement -

ಕಳೆದ ವಾರ ಈಶಾನ್ಯ ದೆಹಲಿ ಹೊತ್ತಿ ಉರಿಯಿತು. 46ಜನ ಪ್ರಾಣ ಕಳೆದುಕೊಂಡರು. 500ಕ್ಕೂ ಹೆಚ್ಚು ಜನ ಗಾಯಗೊಂಡರು. ಪ್ರಕರಣ ದೆಹಲಿ ಹೈಕೋರ್ಟ್‌ ಮುಂದೆ ಬಂತು. ನ್ಯಾಯಮೂರ್ತಿ ಎಸ್‌.ಮುರಳೀಧರ್‌ ಬಿಜೆಪಿ ಮುಖಂಡರ ಕೋಮು ಪ್ರಚೋದಿತ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಹೇಳಿ ನಾಲ್ವರು ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿತು.

ಅದರಲ್ಲಿ ಒಬ್ಬಾತ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌. ಈಗ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರ್‍ಯಾಲಿಯೊಂದರಲ್ಲಿ ದೇಶ್‌ ಕೆ ಗದ್ದಾರೋಂಕೋ, ಗೋಲಿಮಾರೋ ಸಾಲೋಂಕೆ (ದೇಶದೊಳಗಿರುವ ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ನಾಲ್ಕೈದು ಬಾರಿ ಘೋಷಣೆ ಕೂಗಿದ್ದ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯುವಜನರು ಆ ಘೋಷಣೆಗೆ ಕೋರಸ್‌ ಕೊಟ್ಟಿದ್ದರು.

ಈತನ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಭಾರತ ಪಾಕಿಸ್ತಾನ ಯುದ್ಧಕ್ಕೆ ಹೋಲಿಸಿದ್ದ ಇನ್ನೊಬ್ಬ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ. ಆತನ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಮುನ್ನಾ ದಿನ ಪೊಲೀಸರೆದುರೆ “ಇನ್ನೆರೆಡು ದಿನದಲ್ಲಿ ಜಾಫ್ರಾಬಾದ್‌ ಮೆಟ್ರೋ ಬಳಿ ಪ್ರತಿಭಟನೆ ಮಾಡುತ್ತಿರುವ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಬೆದರಿಕೆಯ ಭಾಷಣ ಮಾಡಿದ್ದ.

ಆ ಎರಡು ದಿನದಲ್ಲಿ ಆತ ಹೇಳಿದಂತೆಯೇ ಆಯಿತು. ಗಲಭೆಗಳು ಭುಗಿಲೆದ್ದವು. ಜನರ ಆಸ್ತಿಪಾಸ್ತಿ, ಪ್ರಾಣ ಹಾನಿಯಾಯಿತು. ಪೊಲೀಸರು ಪ್ರಕರಣ ದಾಖಲಿಸದಿದ್ದಾಗ ಹೈಕೋರ್ಟ್‌ ನ್ಯಾಯಾಧೀಶರು ಈ ದ್ವೇಷ ಭಾಷಣವನ್ನು ಕೋರ್ಟ್‌ ಹಾಲಿನಲ್ಲಿ ಪ್ರಸಾರ ಮಾಡಿ ಎಫ್‌ಐಆರ್‌ ಮಾಡುವಂತೆ ಆದೇಶಿಸಿದ್ದರು.

ಸಂಸದ ಅನುರಾಗ್‌ ಠಾಕೂರ್‌ 2020 ರ ಮಾರ್ಚ್ 1 ರಂದು ಆದಾಯ ತೆರಿಗೆ ಇಲಾಖೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತದ್ದರು. ಆಗ ಪತ್ರಕರ್ತರು ನೀವು ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆ ಕೂಗಿದ್ದರ ಬಗ್ಗೆ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಆಗ ಠಾಕೂರ್‌ ‍ “ನೀವು ಸುಳ್ಳು ಹೇಳುತ್ತಿದ್ದೀರಿ. ನಾನೆಂದೂ ಆ ಘೋಷಣೆಯನ್ನು ಕೂಗಿಲ್ಲ. ಮಾಧ್ಯಮಗಳು ಅರ್ಧ ಸತ್ಯ ಮತ್ತು ಅಪಪ್ರಚಾರವನ್ನು ಮಾಡಬಾಡರು. ಅದಕ್ಕಾಗಿ ಅವು ತನ್ನ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಸಿಟ್ಟಿನಿಂದ ಉತ್ತರಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ನಿಜವೇನೆಂದರೆ ಜನವರಿ 27 ರಂದು ಅನುರಾಗ್‌ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿ, ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂಬ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿತ್ತು.

“ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ಗಲಭೆ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ, ನೀವು ಮಾದರಿ ನೀತಿ ಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಮೇಲಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದೀರಿ ಎಂದು ಆಯೋಗ ನೋಟಿಸ್‌ನಲ್ಲಿ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್ ಅವರು “ನಾನು ಗೋಲಿ ಮಾರೊ ಸಾಲೋ ಕೋ (ಗುಂಡಿಕ್ಕಿ)” ಎಂದು ಘೋಷಣೆ ಕೂಗಿಲ್ಲ. “ದೇಶ್ ಕೆ ಗದ್ದಾರಾಂಕೋ (ದೇಶದ ದೇಶದ್ರೋಹಿಗಳಿಗೆ)” ಎಂಬ ಘೋಷಣೆಯ ಮೊದಲಾರ್ಧವನ್ನು ಮಾತ್ರ ಕೂಗಿದ್ದೆ. ಜನರು ಕೂಗಿದ ಘೋಷಣೆಗೆ ನಾನು ಹೊಣೆಗಾರನಲ್ಲ ಎಂದಿದ್ದರು.

ಆದರೆ ಯಾರೋ ಆಗಲಿ ಜನವರಿ 27ರ ಆ ಕಾರ್ಯಕ್ರಮದ ಇಂಡಿಯನ್ ಎಕ್ಸ್‌ಪ್ರೆಸ್ ಆನ್‌ಲೈನ್ ಪ್ರಕಟಿಸಿದ ವೀಡಿಯೊವನ್ನು ನೋಡಿದರೆ ಆ ಘೋಷಣೆ ಅವರೇ ಸ್ವತಃ ಕೂಗಿದ್ದು, ಜನರೂ ಸಹ ಕೋರಸ್‌ ಕೊಡಲು ಪ್ರೇರಿಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಬಹುತೇಕ ಘೋಷಣೆಗಳು ಹೀಗೆಯೇ ಇದ್ದು ನಾಯಕ ಅಥವಾ ಮುನ್ನಡೆಸುವವರು ಅರ್ಧ ಘೋಷಣೆ ಕೂಗಿದ್ದರೆ ಇನ್ನರ್ಧವನ್ನು ಉಳಿದ ಜನರು ಕೂಗುವುದು ಸಾಮಾನ್ಯ. ಆದ್ದರಿಂದ ಆ ಘೋಷಣೆಗೆ ತಾನು ಹೊಣೆಗಾರನಲ್ಲ ಎನ್ನುವುದು ಹೇಡಿತನವಷ್ಟೆ..

ಘೋಷಣೆ ಕೂಗಿದ ವಿಡಿಯೋ ನೋಡಿ

ಅಂತೂ ಸ್ಪಷ್ಟವಾಗಿ ತಾನು ಘೋಷಣೆ ಕೂಗಿದ್ದರೂ ಸಹ ಕೇಸಿಗೆ ಹೆದರಿಕೊಂಡು ತಾನು ಕೂಗೇ ಇಲ್ಲ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ತಪ್ಪಿಸಿಕೊಳ್ಳಲು ಅನುರಾಗ್‌ ಠಾಕೂರ್‌ ಪ್ರಯತ್ನಿಸುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನ ಸ್ಥಾನದಲ್ಲಿದ್ದುಕೊಂಡು ಹಿಂಸೆಗೆ ಪ್ರಚೋದನೆ ನೀಡುವ ಘೋಷಣೆ ಕೂಗಿದ್ದು ಅಲ್ಲದೇ ಮತ್ತೆ ಜಾರಿಕೊಳ್ಳಲು ಯತ್ನಿಸಿರುವುದು ಉತ್ತಮ ನಡವಳಿಕೆ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....