Homeಮುಖಪುಟಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

ಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

- Advertisement -
- Advertisement -

ಕಳೆದ ವಾರ ಈಶಾನ್ಯ ದೆಹಲಿ ಹೊತ್ತಿ ಉರಿಯಿತು. 46ಜನ ಪ್ರಾಣ ಕಳೆದುಕೊಂಡರು. 500ಕ್ಕೂ ಹೆಚ್ಚು ಜನ ಗಾಯಗೊಂಡರು. ಪ್ರಕರಣ ದೆಹಲಿ ಹೈಕೋರ್ಟ್‌ ಮುಂದೆ ಬಂತು. ನ್ಯಾಯಮೂರ್ತಿ ಎಸ್‌.ಮುರಳೀಧರ್‌ ಬಿಜೆಪಿ ಮುಖಂಡರ ಕೋಮು ಪ್ರಚೋದಿತ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಹೇಳಿ ನಾಲ್ವರು ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿತು.

ಅದರಲ್ಲಿ ಒಬ್ಬಾತ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌. ಈಗ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರ್‍ಯಾಲಿಯೊಂದರಲ್ಲಿ ದೇಶ್‌ ಕೆ ಗದ್ದಾರೋಂಕೋ, ಗೋಲಿಮಾರೋ ಸಾಲೋಂಕೆ (ದೇಶದೊಳಗಿರುವ ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ನಾಲ್ಕೈದು ಬಾರಿ ಘೋಷಣೆ ಕೂಗಿದ್ದ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯುವಜನರು ಆ ಘೋಷಣೆಗೆ ಕೋರಸ್‌ ಕೊಟ್ಟಿದ್ದರು.

ಈತನ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಭಾರತ ಪಾಕಿಸ್ತಾನ ಯುದ್ಧಕ್ಕೆ ಹೋಲಿಸಿದ್ದ ಇನ್ನೊಬ್ಬ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ. ಆತನ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಮುನ್ನಾ ದಿನ ಪೊಲೀಸರೆದುರೆ “ಇನ್ನೆರೆಡು ದಿನದಲ್ಲಿ ಜಾಫ್ರಾಬಾದ್‌ ಮೆಟ್ರೋ ಬಳಿ ಪ್ರತಿಭಟನೆ ಮಾಡುತ್ತಿರುವ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಬೆದರಿಕೆಯ ಭಾಷಣ ಮಾಡಿದ್ದ.

ಆ ಎರಡು ದಿನದಲ್ಲಿ ಆತ ಹೇಳಿದಂತೆಯೇ ಆಯಿತು. ಗಲಭೆಗಳು ಭುಗಿಲೆದ್ದವು. ಜನರ ಆಸ್ತಿಪಾಸ್ತಿ, ಪ್ರಾಣ ಹಾನಿಯಾಯಿತು. ಪೊಲೀಸರು ಪ್ರಕರಣ ದಾಖಲಿಸದಿದ್ದಾಗ ಹೈಕೋರ್ಟ್‌ ನ್ಯಾಯಾಧೀಶರು ಈ ದ್ವೇಷ ಭಾಷಣವನ್ನು ಕೋರ್ಟ್‌ ಹಾಲಿನಲ್ಲಿ ಪ್ರಸಾರ ಮಾಡಿ ಎಫ್‌ಐಆರ್‌ ಮಾಡುವಂತೆ ಆದೇಶಿಸಿದ್ದರು.

ಸಂಸದ ಅನುರಾಗ್‌ ಠಾಕೂರ್‌ 2020 ರ ಮಾರ್ಚ್ 1 ರಂದು ಆದಾಯ ತೆರಿಗೆ ಇಲಾಖೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತದ್ದರು. ಆಗ ಪತ್ರಕರ್ತರು ನೀವು ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆ ಕೂಗಿದ್ದರ ಬಗ್ಗೆ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಆಗ ಠಾಕೂರ್‌ ‍ “ನೀವು ಸುಳ್ಳು ಹೇಳುತ್ತಿದ್ದೀರಿ. ನಾನೆಂದೂ ಆ ಘೋಷಣೆಯನ್ನು ಕೂಗಿಲ್ಲ. ಮಾಧ್ಯಮಗಳು ಅರ್ಧ ಸತ್ಯ ಮತ್ತು ಅಪಪ್ರಚಾರವನ್ನು ಮಾಡಬಾಡರು. ಅದಕ್ಕಾಗಿ ಅವು ತನ್ನ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಸಿಟ್ಟಿನಿಂದ ಉತ್ತರಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ನಿಜವೇನೆಂದರೆ ಜನವರಿ 27 ರಂದು ಅನುರಾಗ್‌ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿ, ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂಬ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿತ್ತು.

“ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ಗಲಭೆ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ, ನೀವು ಮಾದರಿ ನೀತಿ ಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಮೇಲಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದೀರಿ ಎಂದು ಆಯೋಗ ನೋಟಿಸ್‌ನಲ್ಲಿ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್ ಅವರು “ನಾನು ಗೋಲಿ ಮಾರೊ ಸಾಲೋ ಕೋ (ಗುಂಡಿಕ್ಕಿ)” ಎಂದು ಘೋಷಣೆ ಕೂಗಿಲ್ಲ. “ದೇಶ್ ಕೆ ಗದ್ದಾರಾಂಕೋ (ದೇಶದ ದೇಶದ್ರೋಹಿಗಳಿಗೆ)” ಎಂಬ ಘೋಷಣೆಯ ಮೊದಲಾರ್ಧವನ್ನು ಮಾತ್ರ ಕೂಗಿದ್ದೆ. ಜನರು ಕೂಗಿದ ಘೋಷಣೆಗೆ ನಾನು ಹೊಣೆಗಾರನಲ್ಲ ಎಂದಿದ್ದರು.

ಆದರೆ ಯಾರೋ ಆಗಲಿ ಜನವರಿ 27ರ ಆ ಕಾರ್ಯಕ್ರಮದ ಇಂಡಿಯನ್ ಎಕ್ಸ್‌ಪ್ರೆಸ್ ಆನ್‌ಲೈನ್ ಪ್ರಕಟಿಸಿದ ವೀಡಿಯೊವನ್ನು ನೋಡಿದರೆ ಆ ಘೋಷಣೆ ಅವರೇ ಸ್ವತಃ ಕೂಗಿದ್ದು, ಜನರೂ ಸಹ ಕೋರಸ್‌ ಕೊಡಲು ಪ್ರೇರಿಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಬಹುತೇಕ ಘೋಷಣೆಗಳು ಹೀಗೆಯೇ ಇದ್ದು ನಾಯಕ ಅಥವಾ ಮುನ್ನಡೆಸುವವರು ಅರ್ಧ ಘೋಷಣೆ ಕೂಗಿದ್ದರೆ ಇನ್ನರ್ಧವನ್ನು ಉಳಿದ ಜನರು ಕೂಗುವುದು ಸಾಮಾನ್ಯ. ಆದ್ದರಿಂದ ಆ ಘೋಷಣೆಗೆ ತಾನು ಹೊಣೆಗಾರನಲ್ಲ ಎನ್ನುವುದು ಹೇಡಿತನವಷ್ಟೆ..

ಘೋಷಣೆ ಕೂಗಿದ ವಿಡಿಯೋ ನೋಡಿ

ಅಂತೂ ಸ್ಪಷ್ಟವಾಗಿ ತಾನು ಘೋಷಣೆ ಕೂಗಿದ್ದರೂ ಸಹ ಕೇಸಿಗೆ ಹೆದರಿಕೊಂಡು ತಾನು ಕೂಗೇ ಇಲ್ಲ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ತಪ್ಪಿಸಿಕೊಳ್ಳಲು ಅನುರಾಗ್‌ ಠಾಕೂರ್‌ ಪ್ರಯತ್ನಿಸುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನ ಸ್ಥಾನದಲ್ಲಿದ್ದುಕೊಂಡು ಹಿಂಸೆಗೆ ಪ್ರಚೋದನೆ ನೀಡುವ ಘೋಷಣೆ ಕೂಗಿದ್ದು ಅಲ್ಲದೇ ಮತ್ತೆ ಜಾರಿಕೊಳ್ಳಲು ಯತ್ನಿಸಿರುವುದು ಉತ್ತಮ ನಡವಳಿಕೆ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...