Homeಮುಖಪುಟಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

ಗೋಲಿಮಾರೋ ಘೋಷಣೆ ಕೂಗಿಲ್ಲವೆಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌: ವಿಡಿಯೋ ನೋಡಿ

- Advertisement -
- Advertisement -

ಕಳೆದ ವಾರ ಈಶಾನ್ಯ ದೆಹಲಿ ಹೊತ್ತಿ ಉರಿಯಿತು. 46ಜನ ಪ್ರಾಣ ಕಳೆದುಕೊಂಡರು. 500ಕ್ಕೂ ಹೆಚ್ಚು ಜನ ಗಾಯಗೊಂಡರು. ಪ್ರಕರಣ ದೆಹಲಿ ಹೈಕೋರ್ಟ್‌ ಮುಂದೆ ಬಂತು. ನ್ಯಾಯಮೂರ್ತಿ ಎಸ್‌.ಮುರಳೀಧರ್‌ ಬಿಜೆಪಿ ಮುಖಂಡರ ಕೋಮು ಪ್ರಚೋದಿತ ಹೇಳಿಕೆಗಳೇ ಗಲಭೆಗೆ ಕಾರಣ ಎಂದು ಹೇಳಿ ನಾಲ್ವರು ಬಿಜೆಪಿ ಮುಖಂಡರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿತು.

ಅದರಲ್ಲಿ ಒಬ್ಬಾತ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌. ಈಗ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರ್‍ಯಾಲಿಯೊಂದರಲ್ಲಿ ದೇಶ್‌ ಕೆ ಗದ್ದಾರೋಂಕೋ, ಗೋಲಿಮಾರೋ ಸಾಲೋಂಕೆ (ದೇಶದೊಳಗಿರುವ ದೇಶದ್ರೋಹಿಗಳಿಗೆ ಗುಂಡಿಕ್ಕಿ) ಎಂದು ನಾಲ್ಕೈದು ಬಾರಿ ಘೋಷಣೆ ಕೂಗಿದ್ದ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಯುವಜನರು ಆ ಘೋಷಣೆಗೆ ಕೋರಸ್‌ ಕೊಟ್ಟಿದ್ದರು.

ಈತನ ಜೊತೆಗೆ ದೆಹಲಿ ವಿಧಾನಸಭಾ ಚುನಾವಣೆಯನ್ನು ಭಾರತ ಪಾಕಿಸ್ತಾನ ಯುದ್ಧಕ್ಕೆ ಹೋಲಿಸಿದ್ದ ಇನ್ನೊಬ್ಬ ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ. ಆತನ ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಮುನ್ನಾ ದಿನ ಪೊಲೀಸರೆದುರೆ “ಇನ್ನೆರೆಡು ದಿನದಲ್ಲಿ ಜಾಫ್ರಾಬಾದ್‌ ಮೆಟ್ರೋ ಬಳಿ ಪ್ರತಿಭಟನೆ ಮಾಡುತ್ತಿರುವ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಬೆದರಿಕೆಯ ಭಾಷಣ ಮಾಡಿದ್ದ.

ಆ ಎರಡು ದಿನದಲ್ಲಿ ಆತ ಹೇಳಿದಂತೆಯೇ ಆಯಿತು. ಗಲಭೆಗಳು ಭುಗಿಲೆದ್ದವು. ಜನರ ಆಸ್ತಿಪಾಸ್ತಿ, ಪ್ರಾಣ ಹಾನಿಯಾಯಿತು. ಪೊಲೀಸರು ಪ್ರಕರಣ ದಾಖಲಿಸದಿದ್ದಾಗ ಹೈಕೋರ್ಟ್‌ ನ್ಯಾಯಾಧೀಶರು ಈ ದ್ವೇಷ ಭಾಷಣವನ್ನು ಕೋರ್ಟ್‌ ಹಾಲಿನಲ್ಲಿ ಪ್ರಸಾರ ಮಾಡಿ ಎಫ್‌ಐಆರ್‌ ಮಾಡುವಂತೆ ಆದೇಶಿಸಿದ್ದರು.

ಸಂಸದ ಅನುರಾಗ್‌ ಠಾಕೂರ್‌ 2020 ರ ಮಾರ್ಚ್ 1 ರಂದು ಆದಾಯ ತೆರಿಗೆ ಇಲಾಖೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತದ್ದರು. ಆಗ ಪತ್ರಕರ್ತರು ನೀವು ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಘೋಷಣೆ ಕೂಗಿದ್ದರ ಬಗ್ಗೆ ಅಭಿಪ್ರಾಯವೇನು ಎಂದು ಪ್ರಶ್ನಿಸಿದರು. ಆಗ ಠಾಕೂರ್‌ ‍ “ನೀವು ಸುಳ್ಳು ಹೇಳುತ್ತಿದ್ದೀರಿ. ನಾನೆಂದೂ ಆ ಘೋಷಣೆಯನ್ನು ಕೂಗಿಲ್ಲ. ಮಾಧ್ಯಮಗಳು ಅರ್ಧ ಸತ್ಯ ಮತ್ತು ಅಪಪ್ರಚಾರವನ್ನು ಮಾಡಬಾಡರು. ಅದಕ್ಕಾಗಿ ಅವು ತನ್ನ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಸಿಟ್ಟಿನಿಂದ ಉತ್ತರಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ನಿಜವೇನೆಂದರೆ ಜನವರಿ 27 ರಂದು ಅನುರಾಗ್‌ ಠಾಕೂರ್ ಪ್ರಚೋದನಾಕಾರಿ ಭಾಷಣ ಮಾಡಿ, ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂಬ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿತ್ತು.

“ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಸಮುದಾಯಗಳ ನಡುವೆ ಗಲಭೆ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ, ನೀವು ಮಾದರಿ ನೀತಿ ಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಮೇಲಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದೀರಿ ಎಂದು ಆಯೋಗ ನೋಟಿಸ್‌ನಲ್ಲಿ ತಿಳಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್ ಅವರು “ನಾನು ಗೋಲಿ ಮಾರೊ ಸಾಲೋ ಕೋ (ಗುಂಡಿಕ್ಕಿ)” ಎಂದು ಘೋಷಣೆ ಕೂಗಿಲ್ಲ. “ದೇಶ್ ಕೆ ಗದ್ದಾರಾಂಕೋ (ದೇಶದ ದೇಶದ್ರೋಹಿಗಳಿಗೆ)” ಎಂಬ ಘೋಷಣೆಯ ಮೊದಲಾರ್ಧವನ್ನು ಮಾತ್ರ ಕೂಗಿದ್ದೆ. ಜನರು ಕೂಗಿದ ಘೋಷಣೆಗೆ ನಾನು ಹೊಣೆಗಾರನಲ್ಲ ಎಂದಿದ್ದರು.

ಆದರೆ ಯಾರೋ ಆಗಲಿ ಜನವರಿ 27ರ ಆ ಕಾರ್ಯಕ್ರಮದ ಇಂಡಿಯನ್ ಎಕ್ಸ್‌ಪ್ರೆಸ್ ಆನ್‌ಲೈನ್ ಪ್ರಕಟಿಸಿದ ವೀಡಿಯೊವನ್ನು ನೋಡಿದರೆ ಆ ಘೋಷಣೆ ಅವರೇ ಸ್ವತಃ ಕೂಗಿದ್ದು, ಜನರೂ ಸಹ ಕೋರಸ್‌ ಕೊಡಲು ಪ್ರೇರಿಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಬಹುತೇಕ ಘೋಷಣೆಗಳು ಹೀಗೆಯೇ ಇದ್ದು ನಾಯಕ ಅಥವಾ ಮುನ್ನಡೆಸುವವರು ಅರ್ಧ ಘೋಷಣೆ ಕೂಗಿದ್ದರೆ ಇನ್ನರ್ಧವನ್ನು ಉಳಿದ ಜನರು ಕೂಗುವುದು ಸಾಮಾನ್ಯ. ಆದ್ದರಿಂದ ಆ ಘೋಷಣೆಗೆ ತಾನು ಹೊಣೆಗಾರನಲ್ಲ ಎನ್ನುವುದು ಹೇಡಿತನವಷ್ಟೆ..

ಘೋಷಣೆ ಕೂಗಿದ ವಿಡಿಯೋ ನೋಡಿ

ಅಂತೂ ಸ್ಪಷ್ಟವಾಗಿ ತಾನು ಘೋಷಣೆ ಕೂಗಿದ್ದರೂ ಸಹ ಕೇಸಿಗೆ ಹೆದರಿಕೊಂಡು ತಾನು ಕೂಗೇ ಇಲ್ಲ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ತಪ್ಪಿಸಿಕೊಳ್ಳಲು ಅನುರಾಗ್‌ ಠಾಕೂರ್‌ ಪ್ರಯತ್ನಿಸುತ್ತಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದನ ಸ್ಥಾನದಲ್ಲಿದ್ದುಕೊಂಡು ಹಿಂಸೆಗೆ ಪ್ರಚೋದನೆ ನೀಡುವ ಘೋಷಣೆ ಕೂಗಿದ್ದು ಅಲ್ಲದೇ ಮತ್ತೆ ಜಾರಿಕೊಳ್ಳಲು ಯತ್ನಿಸಿರುವುದು ಉತ್ತಮ ನಡವಳಿಕೆ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...