Homeಮುಖಪುಟಮೇಕೆ ಕಳ್ಳತನ ಆರೋಪ | ಇಬ್ಬರು ಯುಕರನ್ನು ಥಳಿಸಿ ಕೊಂದ ಗುಂಪು

ಮೇಕೆ ಕಳ್ಳತನ ಆರೋಪ | ಇಬ್ಬರು ಯುಕರನ್ನು ಥಳಿಸಿ ಕೊಂದ ಗುಂಪು

- Advertisement -
- Advertisement -

ಮೇಕೆಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ಇಬ್ಬರು ಯುವಕರನ್ನು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್‌ನ ಜೋರ್ಸಾ ಗ್ರಾಮದಲ್ಲಿ ಸಂಭವಿಸಿದೆ. ಶನಿವಾರ ಮುಂಜಾನೆ ಈ ಘಟನೆ ಜಮ್ಶೆಡ್‌ಪುರದ ಚಾಕುಲಿಯಾ ಪೊಲೀಸ್ ಠಾಣೆಯಿಂದ ಸುಮಾರು 15 ಕಿ.ಮೀ ದೂರದಲ್ಲಿ ನಡೆದಿದೆ ಎಂದು ವರದಿ ಹೇಳಿದೆ. ಮೇಕೆ ಕಳ್ಳತನ ಆರೋಪ

ಕುಶಾಕ್ ಬೆಹೆರಾ ಎಂದು ಗುರುತಿಸಲ್ಪಟ್ಟ ಮೃತರಲ್ಲಿ ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬ ಭೋಲಾ ನಾಥ್ ಮಹ್ತೋ ಆ ದಿನ ಬೆಳಿಗ್ಗೆ ಮಹಾತ್ಮ ಗಾಂಧಿ ಮಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಿಬ್ಬರೂ ಚಕುಲಿಯಾದಲ್ಲಿನ ಜೀರಾಪಾರ ಗ್ರಾಮದ ನಿವಾಸಿಗಳೆಂದು ಹೇಳಲಾಗಿದ್ದು, ಇಬ್ಬರು ಶಂಕಿತರು ಮನೆಯಿಂದ ಮೇಕೆಗಳನ್ನು ಕದಿಯಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೇಕೆ ಕಳ್ಳತನ ಆರೋಪ

ಈ ಮಧ್ಯೆ, ಮೇಕೆಯ ಕುತ್ತಿಗೆಗೆ ಕಟ್ಟಲಾಗಿದ್ದ ಗಂಟೆ ಸದ್ದು ಕೇಳಿದ್ದು, ಇದರಿಂದಾಗಿ ಮನೆ ಮಾಲೀಕ ಹರ್‌ಗೋವಿಂದ್ ನಾಯಕ್ ಎಚ್ಚರಗೊಂಡಿದ್ದನು ಎಂದು ಹೇಳಲಾಗಿದೆ. ನಂತರ ಮನೆಯಿಂದ ಹೊರಬಂದು ನೋಡಿದಾಗ ಇಬ್ಬರು ಯುವಕರು ಬೈಕ್‌ನಲ್ಲಿ ಮೂರು ಮೇಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.

ಈ ವೇಳೆ ಮನೆ ಮಾಲೀಕರು ಅವರನ್ನು ಹಿಡಿದು ಇತರ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಅಲ್ಲಿ ಜಮಾಯಿಸಿ ಶಂಕಿತರನ್ನು ಸೆರೆಹಿಡಿದು ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ. ಅವರ ಮೇಲೆ ಬಿದಿರಿನ ಕೋಲುಗಳಿಂದ ನಿರ್ದಯವಾಗಿ ಥಳಿಸಲಾಗಿದ್ದು, ಪರಿಣಾಮವಾಗಿ ಬೆಹೆರಾ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ.

“ಕುಶಾಕ್ ಬೆಹರಾ ಅವರಿಂದ ಯಾವುದೇ ಚಲನೆ ಇಲ್ಲದಾಗ ಗ್ರಾಮಸ್ಥರು ಅವರನ್ನು ಹೊಡೆಯುವುದನ್ನು ನಿಲ್ಲಿಸಿದ್ದರು. ಆದರೆ ಈ ವೇಳೆ ತುಂಬಾ ತಡವಾಗಿತ್ತು” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಗ್ರಾಮಸ್ಥರೊಬ್ಬರು ಹೇಳಿದ್ದಾರೆ. ಇದರ ನಂತರ, ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಅವರು ಹೇಳಿದ್ದಾರೆ.

ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ಮಹತೋ ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸಹ ಸಾವನ್ನಪ್ಪಿದರು.

“ಇಬ್ಬರು ಗ್ರಾಮಸ್ಥರು ಮೇಕೆಗಳನ್ನು ಕದಿಯಲು ಗ್ರಾಮಕ್ಕೆ ಪ್ರವೇಶಿಸಿದ್ದರು, ಆ ಸಮಯದಲ್ಲಿ ಮೇಕೆ ಮಾಲೀಕರು ಅವರನ್ನು ಹಿಡಿದು ಇತರ ಗ್ರಾಮಸ್ಥರ ಸಹಾಯದಿಂದ ತೀವ್ರವಾಗಿ ಥಳಿಸಿದರು. ಈ ಘಟನೆಯಲ್ಲಿ ಇಬ್ಬರೂ ಯುವಕರು ಸಾವನ್ನಪ್ಪಿದರು, ಅವರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಗಾಯಗೊಂಡರು” ಎಂದು ಎಸ್ಪಿ (ಗ್ರಾಮೀಣ) ರಿಷಭ್ ಗರ್ಗ್ ಹೇಳಿದ್ದಾರೆ.

ಇಲ್ಲಿಯವರೆಗೆ, ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇತರರನ್ನು ಗುರುತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಮೃತರ ಕುಟುಂಬಿಕರ ಕಡೆಯಿಂದ ಇಲ್ಲಿಯವರೆಗೆ ಯಾವುದೇ ಲಿಖಿತ ದೂರು ಬಂದಿಲ್ಲ ಮತ್ತು ದೂರು ಬಂದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...