Homeಮುಖಪುಟಗುರ್ಜರ್ ಜಮೀನಿಗೆ ನುಗ್ಗಿದ ಮೇಕೆಗಳು: ದಲಿತ ಮಹಿಳೆಯರಿಗೆ ಅಮಾನವೀಯವಾಗಿ ಥಳಿಸಿದ ಭೂ ಮಾಲೀಕ!

ಗುರ್ಜರ್ ಜಮೀನಿಗೆ ನುಗ್ಗಿದ ಮೇಕೆಗಳು: ದಲಿತ ಮಹಿಳೆಯರಿಗೆ ಅಮಾನವೀಯವಾಗಿ ಥಳಿಸಿದ ಭೂ ಮಾಲೀಕ!

- Advertisement -
- Advertisement -

ಮೇಕೆಗಳು ತಮ್ಮ ಜಮೀನಿಗೆ ನುಗ್ಗಿದವು ಎಂಬ ಕಾರಣಕ್ಕೆ ಗುರ್ಜರ್ ಸಮುದಾಯಕ್ಕೆ ಸೇರಿದ ಕೆಲವು ಪುರುಷರು ಮೂವರು ದಲಿತ ಮಹಿಳೆಯರಿಗೆ ದೊಣ್ಣೆಯಿಂದ ಅಮಾನವೀಯವಾಗಿ ಥಳಿಸಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಳೆದ ವಾರ ನಡೆದಿರುವ ಈ ಘಟನೆಯಲ್ಲಿ, ವ್ಯಕ್ತಿಯೊಬ್ಬ ಬಾಲಕಿಯನ್ನು ಒಂದು ಕೈಯಿಂದ ಹಿಡಿದು ಇನ್ನೊಂದು ಕೈಯಿಂದ ಕೋಲಿನಿಂದ ಥಳಿಸುತ್ತಿರುವ ದೃಶ್ಯವಿದೆ.

ಮಧ್ಯಪ್ರದೇಶದ ಉಜ್ಜಯಿನಿ ಸಮೀಪ ಈ ಘಟನೆ ನಡೆದಿದ್ದು, ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಗುರ್ಜರ್ ಸಮುದಾಯದ ಪುರುಷರು ಕುಡಿದು ಬಂದಿದ್ದರು ಎನ್ನಲಾಗಿದೆ. ದಲಿತ ಮಹಿಯರ ಮೇಕೆಗಳು ಜಮೀನಿಗೆ ನುಗ್ಗಿದ್ದಕ್ಕೆ ಕುಪಿತಗೊಂಡ ಅವರು, ಮಹಿಳೆಯರಿಗೆ ಅಮಾನವೀಯವಾಗಿ ಥಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮೇಕೆಗಳು ಜಮೀನಿಗೆ ನುಗ್ಗಿದ ಕಾರಣಕ್ಕೆ ಮೂವರು ದಲಿತ ಮಹಿಳೆಯರನ್ನು ಗುರ್ಜರ್ ಸಮುದಾಯದವರು ಥಳಿಸಿದ್ದಾರೆ. ಗುರ್ಜರ್ ವ್ಯಕ್ತಿಯೊಬ್ಬರ ಹೊಲಕ್ಕೆ ಮೇಕೆ ನುಗ್ಗಿದ ಬಗ್ಗೆ ಮೊಂಗಿಯಾ ಮತ್ತು ಗುರ್ಜರ್ ಸಮುದಾಯಗಳ ನಡುವೆ ಮಾರಾಮಾರಿ ನಡೆದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇಕೆಗಳು ಹೊಲಕ್ಕೆ ನುಗ್ಗಿದ ಪ್ರಕರಣದಲ್ಲಿ ಜಗದೀಶ್ ಗುರ್ಜರ್, ಅಜಯ್ ಗುರ್ಜರ್, ಹುಕುಮ್ ಸಿಂಗ್ ಗುರ್ಜರ್ ಮತ್ತು ಬದ್ರಿಲಾಲ್ ಗುರ್ಜರ್ ಅವರು ಮೇಕೆ ಮೇಯಿಸುತ್ತಿದ್ದ ಮಹಿಳೆಯಾದ ಲಾಲ್ ಕುನ್ವರ್ ಮತ್ತು ಅವರ ಪುತ್ರಿಯರಾದ ವಿಷ್ಣು ಮತ್ತು ಅನಿತಾ ಅವರನ್ನು ದೊಣ್ಣೆಗಳಿಂದ ಥಳಿಸಿದ್ದಾರೆ.

ಗುರ್ಜರ್ ಸಮುದಾಯದ ಕುರಿತು:

ಗುರ್ಜರ್, ಗುಜ್ಜರ್ ಅಥವಾ ಗುಜರ್ ಎಂದು ಕರೆಸಿಕೊಳ್ಳುವ ಈ ಸಮುದಾಯ ಉತ್ತರ ಭಾರತದ ಗುಜರಾತ್, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಹೆಚ್ಚಾಗಿ ವಾಸವಾಗಿದ್ದಾರೆ. ದೇಶದ ವಿವಿಧ ಪ್ರದೇಶಗಳಲ್ಲಿ ಈ ಜನರು ಗುಂಪುಗಳಾಗಿ ಹಂಚಿಹೋಗಿದೆ. ಕೃಷಿ ಹಾಗೂ ಪಶುಪಾಲನೆ ಈ ಜನಾಂಗದ ಮೂಲ ಕಸುಬಾಗಿದ್ದು, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿಯೂ ಈ ಸಮುದಾಯ ವಾಸಿಸುತ್ತಿದ್ದಾರೆ.

ಕೃಷಿ, ಪಶುಪಾಲನೆ ಮತ್ತು ಅಲೆಮಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಕೆಲವು ಪ್ರದೇಶಗಳಲ್ಲಿ ರಾಜ್ಯಗಳು ಮತ್ತು ರಾಜವಂಶಗಳ ಸ್ಥಾಪಕರಾಗಿದ್ದಾರೆ. ಮತ್ತೊಂದು ಕಡೆ ಕೆಲವರು ತಮ್ಮದೇ ಆದ ಖಾಯಂ ನೆಲೆ ಇಲ್ಲದ ಅಲೆಮಾರಿಗಳಾಗಿದ್ದಾರೆ. ಗುರ್ಜರ್‌ಗಳನ್ನು ಭಾರತದ ಕೆಲವು ರಾಜ್ಯಗಳಲ್ಲಿ ‘ಇತರೆ ಹಿಂದುಳಿದ ವರ್ಗ’ಗಳ (OBC) ಅಡಿಯಲ್ಲಿ ವರ್ಗೀಕರಿಸಲಾಗಿದೆ. ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಇವರನ್ನು ಪರಿಶಿಷ್ಟ ಪಂಗಡ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದಲ್ಲೂ ಇವರನ್ನು ‘ಇತರೆ ಹಿಂದುಳಿದ ವರ್ಗ’ ಎಂದು ವರ್ಗೀಕರಿಸಲಾಗಿದೆ.

ಇದನ್ನೂ ಓದಿ; ಅರ್ಹತೆ, ಸಾಮರ್ಥ್ಯಗಳಿಂದ ಬಿಜೆಪಿಯಲ್ಲಿ ಯಾರೂ ಹುದ್ದೆ ಪಡೆಯುವುದಿಲ್ಲ; ಪ್ರತಿಪಕ್ಷ ನಾಯಕರ ಕಾಲೆಳೆದ ಆಡಳಿತ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...