Homeಮುಖಪುಟಆಡುಕಾಯುವ ಹುಡುಗಿ ಗೋದಾವರಿ ಗಂಟಿಚೋರ ಸಮುದಾಯದ ಧ್ವನಿಯಾದದ್ದು..

ಆಡುಕಾಯುವ ಹುಡುಗಿ ಗೋದಾವರಿ ಗಂಟಿಚೋರ ಸಮುದಾಯದ ಧ್ವನಿಯಾದದ್ದು..

- Advertisement -
- Advertisement -

| ಎಲೆಮರೆ-10 |

ನಾನಿಲ್ಲಿ ಪರಿಚಯಿಸುತ್ತಿರುವ ಗೋದಾವರಿ ಅವರದು ದೊಡ್ಡ ಹೆಸರೇನಲ್ಲ. ಯಾವ ಹೋರಾಟಗಾರರ ಪಟ್ಟಿಯಲ್ಲಿಯೂ ಅವರ ಹೆಸರು ಸಿಗುವುದಿಲ್ಲ, ಬದಲಾಗಿ ತೀರಾ ಸಾಮಾನ್ಯ ಸಾದಾಸೀದಾ ಮಹಿಳೆ. ವಯಸ್ಸು ಮಾಗಿದರೂ, ಗಂಟಿಚೋರ ಸಮುದಾಯವನ್ನು ಅಪರಾಧಿಗಳಂತೆ ಕಾಣುವ ಸಮಾಜದ ಬಗೆಗಿನ ಸಿಟ್ಟು ಅವರನ್ನು ಹೆಚ್ಚು ಕ್ರಿಯಾಶೀಲವಾಗಿಟ್ಟಿದೆ. 65 ವರ್ಷದ ಆಸುಪಾಸಿನ ಗೋದಾವರಿ ಅವರು ಏಳೆಂಟು ವರ್ಷಗಳಿಂದ ತಮ್ಮ ಊರಾದ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಬೆಂಡವಾಡದಲ್ಲಿ ನೆಲೆಸಿ ತನ್ನ ಗಂಟಿಚೋರ ಸಮುದಾಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಬದುಕು ಕಲಿಸಿದ ಪಾಠವೇ ಅವರಲ್ಲಿ ಹೋರಾಟದ ಪ್ರಜ್ಞೆಯನ್ನು ರೂಪಿಸಿದೆ. ನಮ್ಮ ಹಕ್ಕುಗಳನ್ನು ಹೋರಾಟ ಮಾಡಿಯೇ ಪಡೆಯಬೇಕಿದೆ ಎನ್ನುವ ಅರಿವನ್ನು ಸಮುದಾಯದ ಮಹಿಳೆಯರಲ್ಲಿ ಯುವ ಜನತೆಯಲ್ಲಿ ಬಿತ್ತಲು ಶ್ರಮಿಸುತ್ತಿದ್ದಾರೆ.

ಗೋದಾವರಿ ಪುಟ್ಟ ಹುಡುಗಿಯಾಗಿದ್ದಾಗ ಗಂಟಿಚೋರ ಸಮುದಾಯ ದಟ್ಟ ದಾರಿದ್ರ್ಯ ಸ್ಥಿತಿಯಲ್ಲಿತ್ತು. ಈ ದಾರಿದ್ರ್ಯವೇ ಕುಲಕಸಬಾಗಿದ್ದ `ತುಡುಗು’(ಕಳ್ಳತನ) ಮಾಡಲು ಹಚ್ಚುತ್ತಿತ್ತು. ತುಡುಗು ಮಾಡುವ ಇವರ ಚಾಕಚಕ್ಯತೆ ಬೆರಗು ಹುಟ್ಟಿಸುವಂತಿತ್ತು. ತುಡುಗು ಮಾಡಿ ಸಿಕ್ಕಾಗ ಪೊಲೀಸರ ಹೊಡೆತ ಹಿಂಸೆ ಅವರ ಕುಟುಂಬವನ್ನು ದುಃಖದ ಕಡಲಲ್ಲಿ ತೇಲಿಸುತ್ತಿತ್ತು. ಇಂತಹ ಎಲ್ಲಾ ಸಂಗತಿಗಳನ್ನು ಕಣ್ತುಂಬಿಕೊಳ್ಳುತ್ತಲೇ ಗೋದಾವರಿ ಅವರು ಬೆಂಡವಾದಲ್ಲಿ ತನ್ನ ಬಾಲ್ಯ ಕಳೆದರು. ಮನೆ ಪರಿಸ್ಥಿತಿ ಸಹಕರಿಸದಿದ್ದರೂ 2ನೇ ತರಗತಿಯವರೆಗೆ ಶಾಲೆಗೆ ಹೋಗುತ್ತಿದ್ದ ಹುಡುಗಿಯನ್ನು ಶಾಲೆ ಬಿಡಿಸಿ ಆಡು ಕುರಿ ಕಾಯಲು ಹಚ್ಚಿದರು. ಆಗ ಗೋದಾವರಿ ಬಿಸಿಲು ಮಳೆ ಚಳಿಯೆನ್ನದೆ ಆಡು ಕಾಯುವ ಹುಡುಗಿಯಾಗಿ ಹೊಲ, ಕಾಡುಮೇಡುಗಳನ್ನು ಅಲೆದಳು. ಆದಾಗ್ಯೂ ಓದಬೇಕೆನ್ನುವ ಒಡಲೊಳಗಣ ಕಿಚ್ಚು ನಿಧಾನಕ್ಕೆ ಜಾಗೃತವಾಗತೊಡಗಿತು.

ಇಂತಹ ಸಂದರ್ಭದಲ್ಲಿ ಹತ್ತು ವರ್ಷ ತುಂಬುವ ಹೊತ್ತಿಗಾಗಲೆ ಮನೆಯವರು ಮದುವೆಗೆ ತಯಾರಿ ನಡೆಸಿದರು. ಮದುವೆಯಾಗಿ ಮಕ್ಕಳಿದ್ದ ಮಹಾರಾಷ್ಟ್ರದ ಗಂಡಿನೊಂದಿಗೆ ಬಾಲ್ಯವಿವಾಹ ನಡೆಯಿತು. ಕಿತ್ತು ತಿನ್ನುವ ಬಡತನದ ನೆರಳಲ್ಲಿ ಈ ಮದುವೆಯನ್ನು ತಿರಸ್ಕರಿಸುವ ಶಕ್ತಿಯಾಗಲಿ ತಿಳಿವಳಿಕೆಯಾಗಲಿ ಗೋದಾವರಿಗಿನ್ನೂ ಬಂದಿರಲಿಲ್ಲ. ಅದೇಕೋ ಹೊಂದಾಣಿಕೆಯಾಗದೆ ಗೋದಾವರಿ ಮದುವೆಯಾದವನ ಜತೆ ಬಾಳಲಿಕ್ಕಾಗದೆ ತನ್ನೂರಲ್ಲೇ ಉಳಿದರು. ಈ ಹೊತ್ತಿನಲ್ಲಿ ಕಲಿಯಬೇಕೆನ್ನುವ ತನ್ನೊಳಗಿನ ಹಂಬಲ ಮತ್ತೆ ಚಿಗುರೊಡೆಯಿತು. ಇಂತಹ ಸಂದರ್ಭದಲ್ಲಿ ಗೋದಾವರಿಯ ತಾಯಿಯೆ ಬೆಳಗಾವಿಯ ಅನಾಥ ಹೆಣ್ಣುಮಕ್ಕಳ ರಕ್ಷಣೆಯ ತಾಣವಾಗಿದ್ದ ಸ್ತ್ರೀಸೇವಾನಿಕೇತನಕ್ಕೆ ಸೇರಿದರು. ಹೀಗಿರುವಾಗ ಇಲ್ಲಿ ಆಶ್ರಯ ಪಡೆದ ಹುಡುಗಿಯರನ್ನು ಅವರ ಆಸಕ್ತಿಗನುಸಾರವಾಗಿ ಬೇರೆಬೇರೆ ಜಿಲ್ಲಾ ಸ್ತ್ರೀಸೇವಾನಿಕೇತನ ಕೇಂದ್ರಗಳಿಗೆ ವರ್ಗ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಬಳ್ಳಾರಿಯ ಹಾಸ್ಟೆಲ್ ಚೆನ್ನಾಗಿದೆ, ಓದಿಸುತ್ತಾರೆ, ಕಸೂತಿ ಟೈಲರಿಂಗ್ ಕಲಿಸುತ್ತಾರೆ, ವಾರ್ಡನ್ ಒಳ್ಳೆಯವರು ಇತ್ಯಾದಿ ಸಂಗತಿಗಳ ಕೇಳಿತಿಳಿದಿದ್ದ ಗೋದಾವರಿ ಬಳ್ಳಾರಿಯನ್ನು ಆಯ್ಕೆ ಮಾಡಿಕೊಂಡು ವರ್ಗವಾದರು. ಬಳ್ಳಾರಿಗೆ ಬಂದದ್ದು ಕೂಡ ಗೋದಾವರಿ ಅವರ ಜೀವನದಲ್ಲಿ ಮತ್ತೊಂದು ತಿರುವು. ಕಾರಣ ಬಳ್ಳಾರಿಯ ಸ್ತ್ರೀಸೇವಾನಿಕೇತನದಲ್ಲಿಯೇ ಅರ್ಧಕ್ಕೆ ನಿಂತ ಶಿಕ್ಷಣವನ್ನು ಮುಂದುವರೆಸಿದರು. ಇನ್ನು ಏಳನೆ ತರಗತಿ ಮುಗಿಸುವ ಹೊತ್ತಿಗೆ ಡಿ ದರ್ಜೆ ನೌಕರರೊಬ್ಬರ ಅಕಾಲಿಕ ಮರಣದಿಂದ ತೆರವಾದ ಪಿ.ಸಿ.ಡಬ್ಲು ಎನ್ನುವ (ಪ್ಯಾಕಿಂಗ್ ಕ್ಲೀನಿಂಗ್ ವಾಚಿಂಗ್) ಎಂಬ ನೌಕರಿಯೂ ಸಿಕ್ಕಿತು.

ಗೋದಾವರಿ ಅವರು ಕೆಲಸ ಮಾಡುತ್ತಿದ್ದ ಸ್ತ್ರೀಸೇವಾನಿಕೇತನ ಬುದ್ಧಿಹೀನ ಹುಡುಗಿಯರು, ಗಂಡ ಸತ್ತವರು, ಜೈಲುಗಳಿಂದ ಬಿಡುಗಡೆಗೊಂಡ ತನ್ನವರಿಂದ ತಿರಸ್ಕøತರಾದ ಮಹಿಳೆಯರು, ಮನೆಬಿಟ್ಟು ಪ್ರೀತಿಸಿ ಮದುವೆಯಾಗಿ ಹುಡುಗರಿಂದ ವಂಚಿತರಾದವರು. ಹೀಗೆ ಅನಾಥ ಮಹಿಳೆಯರಿಗೆ ಆಶ್ರಯತಾಣವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸ್ತ್ರೀ ಸೇವಾನಿಕೇತನದಲ್ಲಿ ಇಂತಹ ನೊಂದ ಮಹಿಳೆಯರ ಸಂಗಾತಿಯಾಗಿ ಗೋದಾವರಿ ಅವರು ಕೆಲಸ ಮಾಡಿದರು. ಒಂದು ರೀತಿಯಲ್ಲಿ ಪರಿತ್ಯಕ್ತ ಅನಾಥ ಮಹಿಳೆಯರಿಗೆ ತಾಯಿಯ ಹಾಗೆ ಅವರ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಯಾವ ಬಗೆಯ ನಿರ್ಗತಿಕ ಸ್ಥಿತಿಯ ಕಾರಣಕ್ಕೆ ಗೋದಾವರಿ ಬೆಳಗಾವಿಯ ಸ್ತ್ರೀ ಸೇವಾನಿಕೇತನದಲ್ಲಿ ಸೇರಿದ್ದರೋ ಅಂತಹದ್ದೇ ಅನಾಥ ಮಹಿಳೆಯರ ಪೋಷಣೆಯ ಕೆಲಸಕ್ಕಾಗಿಯೇ ಅವರು ತನ್ನ ಜೀವನವನ್ನು ಮುಡುಪಾಗಿಟ್ಟರು.

ಗೋದಾವರಿ ಅವರಿಗೆ ಕೆಲಸ ಕೊಟ್ಟು ಆಶ್ರಯ ನೀಡಿದವರು ಆಗಿನ ಸ್ತ್ರೀಸೇವಾನಿಕೇತನದ ವಾರ್ಡನ್ ಆಗಿದ್ದ ಕಾವೇರಿ. ಇವರು ಕೊಡಗಿನ ಜನರಲ್ ಕಾರಿಯಪ್ಪ ಅವರ ಸೊಸೆ. ಇವರು ಮಹಿಳೆಯರಲ್ಲಿ ಸದಾ ಧೈರ್ಯ ತುಂಬುವ, ಉತ್ಸಾಹ ಹೆಚ್ಚಿಸುವ ಮಾತುಗಳನ್ನು ಆಡುತ್ತಿದ್ದರು. ಅವರು ಮಹಿಳೆಯರ ಒಳಗೆ ಒಂದು ಬಗೆಯ ಧೈರ್ಯವನ್ನು ತುಂಬುವ ಮಾತುಗಳನ್ನು ಆಡುತ್ತಿದ್ದರು. ಜಗತ್ತಿನ ಮಹಿಳಾ ಸಾಧಕಿಯರ ಬಗ್ಗೆ ಪರಿಚಯಿಸುತ್ತಿದ್ದರು. ಮಹಿಳೆಯರಿಗಿರುವ ಸಂವಿಧಾನಿಕ ಹಕ್ಕುಗಳ ಬಗ್ಗೆ ಪರಿಚಯಿಸುತ್ತಿದ್ದರು. ಈ ಮಾತುಗಳನ್ನು ಕೇಳುತ್ತಾ ಗೋದಾವರಿ ಒಳಗೊಂದು ಜಾಗೃತ ಮನಸ್ಸು ರೂಪುಗೊಳ್ಳತೊಡಗಿತು. ಈ ಮೂಲಕ ಅಂಬೇಡ್ಕರ್ ಮೊದಲಾದವರ ವಿಚಾರಗಳು ಓದದೆಯೂ ಗೋದಾವರಿ ಅವರ ಒಳಗೆ ವೈಚಾರಿಕತೆಯನ್ನು ರೂಪಿಸತೊಡಗಿತು. ಇವರ ಸೇವೆಯನ್ನು ಗುರುತಿಸಿ 2008 ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಳ್ಳಾರಿಯ ಜಿಲ್ಲಾ ಪಂಚಾಯಿತಿಯು ಕಿತ್ತೂರುರಾಣಿ ಚೆನ್ನಮ್ಮನ ಹೆಸರಿನ ಪ್ರಶಸ್ತಿ ನೀಡಿ ಗೌರವಿಸಿತು. ಸ್ವಂತಕ್ಕೆ ಮಕ್ಕಳಿಲ್ಲದ ಬೇಸರ ಎಂದೂ ಕಾಡಲಿಲ್ಲ. ಬಳ್ಳಾರಿಯಲ್ಲಿರುವಷ್ಟು ದಿನ ಸೇವಾನಿಕೇತನದ ಹುಡುಗಿಯರೇ ನನಗೂ ಮಕ್ಕಳಾಗಿದ್ದರು. ಇದೀಗ ಬೆಂಡವಾಡದ ಗಂಟಿಚೋರ ಸಮುದಾಯವೇ ನನ್ನ ಕುಟುಂಬ ಇದ್ದಹಾಗೆ ಎಂದು ಭಾವಿಸುತ್ತಾರೆ.

ಹಿಂದೆ ಗಂಟಿಚೋರ ಸಮುದಾಯದವರು ಪಟ್ಟ ಪಡಿಪಾಟಲನ್ನು ಹೇಳುವಾಗ ಗೋದಾವರಿ ಅವರ ಕಣ್ಣು ನೀರಾಗುತ್ತವೆ. ತನ್ನ ಸಮುದಾಯ ಪಟ್ಟಿರಬಹುದಾದ ಪಾಡನ್ನು ಹೇಳುವಾಗ ದುಃಖದ ಕಡಲೊಡೆದಂತೆ ಬಿಕ್ಕಳಿಸುತ್ತಾರೆ. ಈಚೆಗೆ ಬಾಲೆಹೊಸೂರಲ್ಲಿ ಸವರ್ಣೀಯರ ಗಲಭೆಯಲ್ಲಿ ಗಂಟಿಚೋರ ಸಮುದಾಯದ ವ್ಯಕ್ತಿಯ ಕೊಲೆಯಾಗಿ ಸಮುದಾಯವನ್ನು ಹಿಂಸೆಗೆ ಒಳಗುಮಾಡಿದ್ದನ್ನು ವಿರೋಧಿಸಿ ಈ ಸಮುದಾಯ ಒಗ್ಗಟ್ಟಾಗಿ ಪ್ರತಿಭಟಿಸಿತು. ಬೆಳಗಾವಿಯ ಅಧಿವೇಶನ ನಡೆಯುವ ಸಂದರ್ಭದಲ್ಲಿ ಈ ಸಮುದಾಯ ಒಟ್ಟಾಗಿ ತನ್ನ ಪ್ರತಿರೋಧವನ್ನು ದಾಖಲಿಸಿತು. ಈ ಸಂದರ್ಭದಲ್ಲಿ ಗೋದಾವರಿ ಅವರು ಸಮುದಾಯದ ಪ್ರತಿನಿಧಿಯಾಗಿ ಗಟ್ಟಿಧ್ವನಿಯಲ್ಲಿ ಪ್ರಭುತ್ವವನ್ನು ಪ್ರಶ್ನಿಸಿದ್ದರು.

ಗೋದಾವರಿ ನಿವೃತ್ತಿ ನಂತರ ತಾನು ಬೆಳೆದ ತನ್ನ ಹುಟ್ಟೂರಾದ ಬೆಂಡವಾಡಕ್ಕೆ ಮರಳಿ ಬಂದು ನೆಲೆಸಿದ್ದೂ ಕೂಡ ಪ್ರತಿಭಟನೆಯ ಸಂಕೇತವೆ ಎನ್ನುತ್ತಾರೆ. ನೀವು ಬಳ್ಳಾರಿಯಿಂದ ಹಳ್ಳಿಗೆ ಮರಳಿದ್ಯಾಕೆ ಎಂದರೆ, `ನನ್ನ ತಂದೆಯ ಊರಿನಲ್ಲಿಯೇ ನೆಲೆಯೂರಬೇಕೆಂಬ ಆಸೆ ಒಂದಾದರೆ ನಮ್ಮ ಗಂಟಿಚೋರ ಸಮುದಾಯವನ್ನು ಜಾಗೃತಗೊಳಿಸಬೇಕು. ನಿರಂತರ ಅನ್ಯಾಯಕ್ಕೆ ಒಳಗಾಗುವ ಈ ಸಮುದಾಯದಲ್ಲಿ ಹೋರಾಟದ ಮನೋಭಾವವನ್ನು ಮೂಡಿಸಬೇಕು ಎನ್ನುತ್ತಾರೆ. ಗಂಟಿಚೋರ ಸಮುದಾಯದಲ್ಲೂ ಕೂಡ ಸ್ಥಿತಿವಂತರಿದ್ದಾರೆ ಎನ್ನುವುದು ಬೇರೆ ಮೇಲಿನ ಜಾತಿಗಳವರಿಗೆ ತಿಳಿಯಲಿ ಎಂದೇ ನನ್ನ ಹೊಸ ಮನೆಯನ್ನು ಇಲ್ಲಿ ಕಟ್ಟಿಸಿದ್ದು. ಈಗ ನನ್ನ ಮನೆಯೇ ಇಲ್ಲಿನ ಗಂಟಿಚೋರ ಸಮುದಾಯದ ಹೋರಾಟಕ್ಕೆ ಒಂದು ಕೇಂದ್ರವಾಗಿದೆ. ನಮ್ಮ `ಗಂಟಿಚೋರ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘ’ ರೂಪುಗೊಂಡದ್ದು ಈ ಮನೆಯಲ್ಲಿಯೇ ಎನ್ನುತ್ತಾರೆ. ಹೀಗೆ ಅಕ್ಷರದ ಬೆಳಕಿನಲ್ಲಿ ಪುಟ್ಟ ಸರಕಾರಿ ಕೆಲಸ ಮಾಡಿ ನಿವೃತ್ತಿ ಹೊಂದಿ, ಮರಳಿ ತನ್ನದೇ ಸಮುದಾಯದ ಹಕ್ಕೊತ್ತಾಯಕ್ಕಾಗಿ ದುಡಿಯುವವರ ಸಂಖ್ಯೆ ವಿರಳ. ಹೀಗಾಗಿ ಗೋದಾವರಿ ಅವರ ಸಮುದಾಯ ಪರವಾದ ಈ ಚಟುವಟಿಕೆಗಳಿಗೆ ಮಹತ್ವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...