Homeಮುಖಪುಟರಾಮಮಂದಿರ ಉದ್ಘಾಟನೆಯ ನಂತರ ಗೋಧ್ರಾ ರೀತಿಯ ಘಟನೆ ಸಂಭವಿಸಬಹುದು: ಉದ್ಧವ್ ಠಾಕ್ರೆ

ರಾಮಮಂದಿರ ಉದ್ಘಾಟನೆಯ ನಂತರ ಗೋಧ್ರಾ ರೀತಿಯ ಘಟನೆ ಸಂಭವಿಸಬಹುದು: ಉದ್ಧವ್ ಠಾಕ್ರೆ

- Advertisement -
- Advertisement -

ರಾಮಮಂದಿರದ ಉದ್ಘಾಟನೆಗಾಗಿ ಉತ್ತರ ಪ್ರದೇಶದ ಅಯೋಧ್ಯೆಗೆ ಬರಲಿರುವ ದೊಡ್ಡ ಸಂಖ್ಯೆಯ ಜನರು, ಹಿಂದಿರುವಾಗ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆ ಇದೆ ಎಂದು ರವಿವಾರ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ ಎಂದು ಲೈವ್‌ಮಿಂಟ್ ವರದಿ ಮಾಡಿದೆ.

ಫೆಬ್ರವರಿ 27, 2002ರಂದು ಗುಜರಾತ್‌ನ ಗೋಧ್ರಾ ನಿಲ್ದಾಣದಲ್ಲಿ ಕರಸೇವಕರು ಅಯೋಧ್ಯೆಯಿಂದ ಸಾಬರಮತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದಾಗ ಬೋಗಿಗೆ ಬೆಂಕಿ ಹಚ್ಚಲಾಗಿತ್ತು, ಇದರಿಂದ ಹಲವು ಕರಸೇವಕರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಗುಜರಾತ್ ರಾಜ್ಯದಾದ್ಯಂತ ಹತ್ಯಾಕಾಂಡ ಆರಂಭವಾಗಿತ್ತು.

”ರಾಮ ಮಂದಿರ ಉದ್ಘಾಟನೆಗೆ ಸರ್ಕಾರವು ಬಸ್‌ಗಳು ಹಾಗೂ ಟ್ರಕ್‌ಗಳಲ್ಲಿ ಅಸಂಖ್ಯಾತ ಜನರನ್ನು ಕರೆ ತರುವ ಸಾಧ್ಯತೆ ಇದೆ. ಅವರು ಮರಳುವಾಗ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆ ಇದೆ ಎಂದು ಜಲಗಾಂವ್‌ನಲ್ಲಿ ಠಾಕ್ರೆ ಹೇಳಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಯಾಗುವ ಸಾಧ್ಯತೆ ಇದೆ.

ಈ ನಡುವೆ, ಉದ್ಧವ್ ಠಾಕ್ರೆ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, “ವೋಟಿಗಾಗಿ ಪ್ರಧಾನಿ ಮೋದಿ ವಿರುದ್ಧ ರಚನೆಯಾಗಿರುವ ಮೈತ್ರಿಕೂಟವು ಯಾವ ಹಂತಕ್ಕಾದರೂ ಹೋಗಲಿದೆ ಎಂದಷ್ಟೆ ನಾನು ಹೇಳಬಲ್ಲೆ. ಅವರಿಗೆ ಕೊಂಚ ವಿವೇಕ ನೀಡು ಎಂದು ನಾನು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ. ಇದು ನಾಚಿಕೆಗೇಡಿನ ಮತ್ತು ಅಸಭ್ಯ ಹೇಳಿಕೆಯಾಗಿದೆ. ನಾವಿದನ್ನು ಖಂಡಿಸುತ್ತೇವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಠಾಕ್ರೆ ಹೇಳಿಕೆಗೆ ಪ್ರತಿಕ್ರಿಯಿಸಿದ ಠಾಕೂರ್, ”ಅಧಿಕಾರದ ದುರಾಸೆಗಾಗಿ ಕೆಲವರು ತಮ್ಮ ಸಿದ್ಧಾಂತವನ್ನು ಮರೆತಿದ್ದಾರೆ” ಎಂದು ಹೇಳಿದ್ದಾರೆ.

ಫೆಬ್ರವರಿ 27, 2002 ರಂದು, ಸಬರಮತಿ ಎಕ್ಸ್‌ಪ್ರೆಸ್‌ನಲ್ಲಿ ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ ಕರಸೇವಕರ ಮೇಲೆ ದಾಳಿ ಮಾಡಲಾಯಿತು ಮತ್ತು ಅವರ ರೈಲು ಕೋಚ್‌ಗೆ ಗುಜರಾತ್‌ನ ಗೋಧ್ರಾ ನಿಲ್ದಾಣದಲ್ಲಿ ಬೆಂಕಿ ಹಚ್ಚಲಾಯಿತು, ಇದು ರಾಜ್ಯದಾದ್ಯಂತ ದೊಡ್ಡ ಪ್ರಮಾಣದ ಗಲಭೆಗೆ ಕಾರಣವಾದ ಹಲವಾರು ಸಾವುಗಳಿಗೆ ಕಾರಣವಾಯಿತು.

ಇದನ್ನೂ ಓದಿ: ಗೋಧ್ರಾ ಹತ್ಯಾಕಾಂಡ: ನರೇಂದ್ರ ಮೋದಿ ಕಾರಣ ಎಂದ ಬಿಬಿಸಿ ಸಾಕ್ಷ್ಯಚಿತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

0
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ; ಅವರ ಆಮ್ ಆದ್ಮಿ ಪಕ್ಷವನ್ನು...