Homeಮುಖಪುಟಗೋದ್ರಾ ಹತ್ಯಾಕಾಂಡ: ಮುಸ್ಲಿಮರ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ: 26 ಆರೋಪಿಗಳನ್ನು ಖುಲಾಸೆಗೊಳಿಸಿದ ಗುಜರಾತ್...

ಗೋದ್ರಾ ಹತ್ಯಾಕಾಂಡ: ಮುಸ್ಲಿಮರ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ: 26 ಆರೋಪಿಗಳನ್ನು ಖುಲಾಸೆಗೊಳಿಸಿದ ಗುಜರಾತ್ ಕೋರ್ಟ್

- Advertisement -
- Advertisement -

ದೇಶವನ್ನೇ ಬೆಚ್ಚಿಬೀಳಿಸಿದ 2002ರ ಗುಜರಾತ್‌ ಗೋದ್ರಾ ಹತ್ಯಾಕಾಂಡ ಸಂದರ್ಭದಲ್ಲಿ ಕಲೋಲ್‌ ಎಂಬ ಪ್ರದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ನಡೆದಿತ್ತು. ಈ ಪ್ರಕರಣದ 26 ಆರೋಪಿಗಳನ್ನು ಗುಜರಾತ್‌ನ ನ್ಯಾಯಾಲಯವೊಂದು ಖುಲಾಸೆಗೊಳಿಸಿದೆ.

ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣದ 39 ಆರೋಪಿಗಳ ಪೈಕಿ 13 ಆರೋಪಿಗಳು ಪ್ರಕರಣದ ವಿಚಾರಣೆಯ ಸಮಯದಲ್ಲಿ ಮೃತಪಟ್ಟಿದ್ದರು. ಅವರ ವಿರುದ್ಧದ ವಿಚಾರಣೆಯನ್ನು ಈ ಹಿಂದೆಯೇ ರದ್ದುಗೊಳಿಸಲಾಗಿತ್ತು. ಇದೀಗ ಪಂಚಮಹಲ್ ಜಿಲ್ಲೆಯ ಕಲೋಲ್‌ನಲ್ಲಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಲೀಲಾಭಾಯಿ ಚುಡಾಸಮಾ ಅವರು ಇನ್ನುಳಿದ 26 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಖುಲಾಸೆ ಮಾಡಿದ್ದಾರೆ.

ಗುಜರಾತ್‌ನ ಗೋದ್ರಾದಲ್ಲಿ 2002ರ ಫೆಬ್ರುವರಿ 27ರಂದು ಸಾಬರಮತಿ ರೈಲನ್ನು ಸುಟ್ಟುಹಾಕಲಾಗಿತ್ತು. ಆನಂತರ ಮಾರ್ಚ್ 1 ರಂದು ಎರಡು ಕೋಮುಗಳ ನಡುವಿನ ಕೋಮು ಗಲಭೆ ಭುಗಿಲೆದ್ದು, ಹಿಂಸಾಚಾರಗಳು ಸಂಭವಿಸಿದ್ದವು. ಈಗ ಖುಲಾಸೆಗೊಂಡಿರುವ ಎಲ್ಲ 26 ಆರೋಪಿಗಳೂ ಗಲಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಗೋರಕ್ಷಣೆ ಹೆಸರಲ್ಲಿ ಪುನಿತ್ ಕೆರೆಹಳ್ಳಿಯಿಂದ ಮುಸ್ಲಿಂ ವ್ಯಕ್ತಿಯ ಕೊಲೆ: ಕುಟುಂಬಸ್ಥರ ಆರೋಪ

ಕಲೋಲ್ ಪೊಲೀಸ್ ಠಾಣೆಯಲ್ಲಿ ಈ ಆರೋಪಿಗಳ ವಿರುದ್ಧ 2002ರ  ಮಾರ್ಚ್ 2ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಾಸಿಕ್ಯೂಷನ್ 190 ಸಾಕ್ಷಿಗಳು ಮತ್ತು 334 ಸಾಕ್ಷ್ಯಗಳನ್ನು ಪರಿಶೀಲಿಸಿತ್ತು. ಆದರೆ ನ್ಯಾಯಾಲಯವು ಸಾಕ್ಷಿಗಳಲ್ಲಿ ವಿರೋಧಾಭಾಸಗಳಿವೆ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಪ್ರಾಸಿಕ್ಯೂಷನ್‌ ವಾದವನ್ನು ಕೋರ್ಟ್‌ ತಳ್ಳಿಹಾಕಿದೆ.

2002ರ ಮಾರ್ಚ್‌ 1ರಂದು ಗಾಂಧಿನಗರ ಜಿಲ್ಲೆಯ ಕಲೋಲ್ ನಗರದಲ್ಲಿ ನಡೆದ ಕೋಮು ಗಲಭೆಯಲ್ಲಿ ಸುಮಾರು 2,000ಕ್ಕೂ ಹೆಚ್ಚು ಜನರು ಹರಿತವಾದ ಆಯುಧಗಳಿಂದ ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದರು. ಈ ವೇಳೆ ಹಲವು ಅಂಗಡಿಗಳನ್ನು ಧ್ವಂಸ ಮಾಡಿದ್ದರು.

ಮಸೀದಿಯಿಂದ ಹೊರಗೆ ಬರುತ್ತಿದ್ದ ವ್ಯಕ್ತಿಯನ್ನು ಹಿಂದುತ್ವವಾದಿ ಗುಂಪೊಂದು ಆತನನ್ನು ಕೊಂದು, ದೇಹವನ್ನು ಮಸೀದಿಯೊಳಗೆ ಸುಟ್ಟು ಹಾಕಿತ್ತು. ಮತ್ತೊಂದು ಘಟನೆಯಲ್ಲಿ ಗುಂಪೊಂದು 38 ಜನರ ಮೇಲೆ ದಾಳಿ ನಡೆಸಿತ್ತು. ಈ ಪೈಕಿ 11 ಜನರನ್ನು ಜೀವಂತವಿರುವಾಗಲೇ ಸುಟ್ಟುಹಾಕಿದ ಭೀಕರ ಘಟನೆಗಳು ನಡೆದಿದ್ದವು.

ಈ ಘಟನೆ ನಡೆಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...