Homeಮುಖಪುಟಗೋದ್ರಾ ಹತ್ಯಾಕಾಂಡ: ಮುಸ್ಲಿಮರ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ: 26 ಆರೋಪಿಗಳನ್ನು ಖುಲಾಸೆಗೊಳಿಸಿದ ಗುಜರಾತ್...

ಗೋದ್ರಾ ಹತ್ಯಾಕಾಂಡ: ಮುಸ್ಲಿಮರ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ: 26 ಆರೋಪಿಗಳನ್ನು ಖುಲಾಸೆಗೊಳಿಸಿದ ಗುಜರಾತ್ ಕೋರ್ಟ್

- Advertisement -
- Advertisement -

ದೇಶವನ್ನೇ ಬೆಚ್ಚಿಬೀಳಿಸಿದ 2002ರ ಗುಜರಾತ್‌ ಗೋದ್ರಾ ಹತ್ಯಾಕಾಂಡ ಸಂದರ್ಭದಲ್ಲಿ ಕಲೋಲ್‌ ಎಂಬ ಪ್ರದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ನಡೆದಿತ್ತು. ಈ ಪ್ರಕರಣದ 26 ಆರೋಪಿಗಳನ್ನು ಗುಜರಾತ್‌ನ ನ್ಯಾಯಾಲಯವೊಂದು ಖುಲಾಸೆಗೊಳಿಸಿದೆ.

ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣದ 39 ಆರೋಪಿಗಳ ಪೈಕಿ 13 ಆರೋಪಿಗಳು ಪ್ರಕರಣದ ವಿಚಾರಣೆಯ ಸಮಯದಲ್ಲಿ ಮೃತಪಟ್ಟಿದ್ದರು. ಅವರ ವಿರುದ್ಧದ ವಿಚಾರಣೆಯನ್ನು ಈ ಹಿಂದೆಯೇ ರದ್ದುಗೊಳಿಸಲಾಗಿತ್ತು. ಇದೀಗ ಪಂಚಮಹಲ್ ಜಿಲ್ಲೆಯ ಕಲೋಲ್‌ನಲ್ಲಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಲೀಲಾಭಾಯಿ ಚುಡಾಸಮಾ ಅವರು ಇನ್ನುಳಿದ 26 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಖುಲಾಸೆ ಮಾಡಿದ್ದಾರೆ.

ಗುಜರಾತ್‌ನ ಗೋದ್ರಾದಲ್ಲಿ 2002ರ ಫೆಬ್ರುವರಿ 27ರಂದು ಸಾಬರಮತಿ ರೈಲನ್ನು ಸುಟ್ಟುಹಾಕಲಾಗಿತ್ತು. ಆನಂತರ ಮಾರ್ಚ್ 1 ರಂದು ಎರಡು ಕೋಮುಗಳ ನಡುವಿನ ಕೋಮು ಗಲಭೆ ಭುಗಿಲೆದ್ದು, ಹಿಂಸಾಚಾರಗಳು ಸಂಭವಿಸಿದ್ದವು. ಈಗ ಖುಲಾಸೆಗೊಂಡಿರುವ ಎಲ್ಲ 26 ಆರೋಪಿಗಳೂ ಗಲಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಗೋರಕ್ಷಣೆ ಹೆಸರಲ್ಲಿ ಪುನಿತ್ ಕೆರೆಹಳ್ಳಿಯಿಂದ ಮುಸ್ಲಿಂ ವ್ಯಕ್ತಿಯ ಕೊಲೆ: ಕುಟುಂಬಸ್ಥರ ಆರೋಪ

ಕಲೋಲ್ ಪೊಲೀಸ್ ಠಾಣೆಯಲ್ಲಿ ಈ ಆರೋಪಿಗಳ ವಿರುದ್ಧ 2002ರ  ಮಾರ್ಚ್ 2ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಾಸಿಕ್ಯೂಷನ್ 190 ಸಾಕ್ಷಿಗಳು ಮತ್ತು 334 ಸಾಕ್ಷ್ಯಗಳನ್ನು ಪರಿಶೀಲಿಸಿತ್ತು. ಆದರೆ ನ್ಯಾಯಾಲಯವು ಸಾಕ್ಷಿಗಳಲ್ಲಿ ವಿರೋಧಾಭಾಸಗಳಿವೆ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಪ್ರಾಸಿಕ್ಯೂಷನ್‌ ವಾದವನ್ನು ಕೋರ್ಟ್‌ ತಳ್ಳಿಹಾಕಿದೆ.

2002ರ ಮಾರ್ಚ್‌ 1ರಂದು ಗಾಂಧಿನಗರ ಜಿಲ್ಲೆಯ ಕಲೋಲ್ ನಗರದಲ್ಲಿ ನಡೆದ ಕೋಮು ಗಲಭೆಯಲ್ಲಿ ಸುಮಾರು 2,000ಕ್ಕೂ ಹೆಚ್ಚು ಜನರು ಹರಿತವಾದ ಆಯುಧಗಳಿಂದ ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದರು. ಈ ವೇಳೆ ಹಲವು ಅಂಗಡಿಗಳನ್ನು ಧ್ವಂಸ ಮಾಡಿದ್ದರು.

ಮಸೀದಿಯಿಂದ ಹೊರಗೆ ಬರುತ್ತಿದ್ದ ವ್ಯಕ್ತಿಯನ್ನು ಹಿಂದುತ್ವವಾದಿ ಗುಂಪೊಂದು ಆತನನ್ನು ಕೊಂದು, ದೇಹವನ್ನು ಮಸೀದಿಯೊಳಗೆ ಸುಟ್ಟು ಹಾಕಿತ್ತು. ಮತ್ತೊಂದು ಘಟನೆಯಲ್ಲಿ ಗುಂಪೊಂದು 38 ಜನರ ಮೇಲೆ ದಾಳಿ ನಡೆಸಿತ್ತು. ಈ ಪೈಕಿ 11 ಜನರನ್ನು ಜೀವಂತವಿರುವಾಗಲೇ ಸುಟ್ಟುಹಾಕಿದ ಭೀಕರ ಘಟನೆಗಳು ನಡೆದಿದ್ದವು.

ಈ ಘಟನೆ ನಡೆಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...